SSLC : ಫ‌ಲಿತಾಂಶ ಸುಧಾರಣೆಗೆ ವಿನೂತನ ಪ್ರಯತ್ನ ; ಎಸೆಸೆಲ್ಸಿ ಟಾರ್ಗೆಟ್‌ ಶೇ. 90+


Team Udayavani, Sep 22, 2023, 10:40 AM IST

7-sscl-udupi

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಟಾರ್ಗೆಟ್‌ ಶೇ. 90+ ಕಲ್ಪನೆಯಡಿ ಈಗಿಂದಲೇ ಉಭಯ ಜಿಲ್ಲೆಯಲ್ಲಿ ವಿವಿಧ ಚಟುವಟಿಕೆ ಪ್ರಯೋಗಗಳನ್ನು ಆರಂಭಿಸಲಾಗಿದೆ.

ಉಡುಪಿ ಜಿಲ್ಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನಿತ್ಯವೂ ಒಂದು ಗಂಟೆ ಹೆಚ್ಚುವರಿ ತರಗತಿ ನಡೆಸಲು ನಿರ್ಧರಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಶೇ. 100ರಷ್ಟು ಫ‌ಲಿತಾಂಶ ತಂದ ವಿಷಯ ಶಿಕ್ಷಕರ ಮೂಲಕ ಫ‌ಲಿತಾಂಶ ವಿಶ್ಲೇಷಣೆಗೆ ಯೋಜನೆ ರೂಪಿಸಲಾಗುತ್ತಿದೆ.

ಉಭಯ ಜಿಲ್ಲೆಯಲ್ಲೂ ಈಗಾಗಲೇ ಎಸೆಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪ್ರೌಢಶಾಲೆಯ ಮುಖ್ಯಶಿಕ್ಷಕರ ಸಭೆ ಕರೆಯಲಾಗಿದೆ ಮತ್ತು ಜಿಲ್ಲೆಯ ಒಟ್ಟಾರೆ ಫ‌ಲಿತಾಂಶ ಶೇ. 90ಕ್ಕಿಂತ ಹೆಚ್ಚು ಮಾಡುವ ನಿಟ್ಟಿನಲ್ಲಿ ಗುರಿ ನಿಗದಿ ಮಾಡಲಾಗಿದೆ.

ವಿಷಯ ಶಿಕ್ಷಕರ ಒಕ್ಕೂಟ ಉಡುಪಿ ಜಿಲ್ಲೆಯ ವಿಷಯ ಶಿಕ್ಷಕರ ಒಕ್ಕೂಟ ರಚಿಸಲಾಗಿದೆ. ಎಲ್ಲ ವಿಷಯಕ್ಕೂ ಪ್ರತ್ಯೇಕ ಒಕ್ಕೂಟ ರಚನೆ ಮಾಡಲಾಗಿದೆ. ವಿಷಯ ಶಿಕ್ಷಕರು ಸಭೆ ಸೇರಿ ತರಗತಿಯಲ್ಲಿ ಕ್ಲಿಷ್ಟಕರ ಅಂಶಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ವಿಷಯ ತಜ್ಞರು ಈ ಸಭೆಯಲ್ಲಿ ಪಾಲ್ಗೊಂಡು ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಸಮರ್ಪಕವಾಗಿ ಸಜ್ಜುಗೊಳಿಸುವ ನಿಟ್ಟಿನಲ್ಲಿ ವಿಷಯ ಮಂಥನ ಮಾಡಲಿದ್ದಾರೆ. ಶೇ.100ರಷ್ಟು ಫ‌ಲಿತಾಂಶ ತರಬಲ್ಲ ಶಿಕ್ಷಕರಿಗೆ ಪುಸ್ತಕ ಬಹುಮಾನದ ಜತೆಗೆ ಪ್ರಸಂಶ ಪತ್ರವನ್ನು ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಿಡಿಪಿಐ ನಿರ್ಧರಿಸಿದ್ದಾರೆ.

ಫೀಡ್‌ಬ್ಯಾಕ್‌ ತರಗತಿಯಲ್ಲಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾರೆ ಮತ್ತು ಯಾವ ವಿಷಯದಲ್ಲಿ ಹೆಚ್ಚು ಅಂಕ ಪಡೆದಿದ್ದಾರೆ ಎಂಬುದನ್ನು ವಿಶ್ಲೇಷಣಾತ್ಮಕವಾಗಿ ತಿಳಿಸಲಾಗುತ್ತದೆ. ಕಡಿಮೆ ಬಂದಿರಲು ಕಾರಣ, ತಪ್ಪುಗಳನ್ನು ತಿದ್ದಿಕೊಳ್ಳುವುದು ಹೇಗೆ ಮತ್ತು ಹೆಚ್ಚು ಅಂಕ ಪಡೆದ ವಿಷಯದಲ್ಲಿ ಇನ್ನಷ್ಟು ಸುಧಾರಣೆ ಮಾಡಿಕೊಳ್ಳುವುದು ಹೇಗೆ ಎಂಬ ಬಗ್ಗೆ ಶಿಕ್ಷಕರು ಮಕ್ಕಳಿಗೆ ಫೀಡ್‌ ಬ್ಯಾಕ್‌ ನೀಡಲಿದ್ದಾರೆ ಎಂದು ಡಿಡಿಪಿಐ ಕೆ. ಗಣಪತಿ ಮಾಹಿತಿ ನೀಡಿದರು.

ವಲಯವಾರು ಸಭೆ ದ.ಕ.ದಲ್ಲಿ ಫ‌ಲಿತಾಂಶ ಹೆಚ್ಚಿಸಲು ಈಗಾಗಲೇ ಪ್ರೌಢಶಾಲಾ ಮುಖ್ಯಶಿಕ್ಷಕರ ವಲಯವಾರು ಸಭೆ ನಡೆಸಲಾಗಿದೆ. ಮಧ್ಯವಾರ್ಷಿಕ ಪರೀಕ್ಷೆಯ ಅನಂತರದಲ್ಲಿ ಪ್ರತಿ ವಿದ್ಯಾರ್ಥಿಯ ಫ‌ಲಿತಾಂಶ ವಿಶ್ಲೇಷಣೆ ಮಾಡಲಾಗುವುದು. ಇದಕ್ಕಾಗಿ ವಿಷಯ ತಜ್ಞರ ಅಥವಾ ಶೇ. 100ರಷ್ಟು ಫ‌ಲಿತಾಂಶ ಬಂದಿರುವ ಶಾಲೆಯ ಶಿಕ್ಷಕರ ನಿಯೋಜನೆ ಮಾಡಲಾಗುವುದು. ವಿಷಯ ಶಿಕ್ಷಕರಿಗೆ ಪ್ರತ್ಯೇಕ ಕಾರ್ಯಾಗಾರ ನಡೆಸಲಾಗುವುದು ಮತ್ತು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೂ ಕಾರ್ಯಾಗಾರ ನಡೆಸಲಾಗುವುದು. ಕಳೆದ ಬಾರಿ ಕಡಿಮೆ ಫ‌ಲಿತಾಂಶ ಬಂದಿರುವ ಶಾಲೆಯ ಮುಖ್ಯಶಿಕ್ಷಕರ ಸಭೆಯನ್ನು ಪ್ರತ್ಯೇಕವಾಗಿ ಕರೆದು ಫ‌ಲಿತಾಂಶ ಸುಧಾರಣೆಗೆ ಅಗತ್ಯ ಸೂಚನೆ ನೀಡಲಾಗುವುದು ಎಂದು ಜಿಲ್ಲಾ ಎಸೆಸೆಲ್ಸಿ ನೋಡಲ್‌ ಅಧಿಕಾರಿ ವೆಂಕಟೇಶ್‌ ನಾಯಕ್‌ ಮಾಹಿತಿ ನೀಡಿದರು.

ಹೆತ್ತವರಿಗೂ ಜವಾಬ್ದಾರಿ ನಿತ್ಯವೂ ಬೆಳಗ್ಗೆ 1 ಗಂಟೆ ಹೆಚ್ಚುವರಿ ತರಗತಿ ನಡೆಸಿ, ಪರೀಕ್ಷೆಗೆ ಸಿದ್ಧಮಾಡುವ ವಿವಿಧ ಚಟುವಟಿಕೆಗಳ ಜತೆಗೆ ಪಠ್ಯದ ಬೋಧನೆಗೆ ಸೂಚನೆಯನ್ನು ನೀಡಲಾಗಿದೆ. ಇದರ ಜತೆಗೆ ಮಕ್ಕಳ ಪಾಲಕ ಪೋಷಕರ ಸಭೆ ಕರೆದು ಅವರಿಗೂ ಒಂದಿಷ್ಟು ಜವಾಬ್ದಾರಿ ಹಂಚಲು ಮುಂದಾಗಿದ್ದಾರೆ. ಮನೆಯಲ್ಲಿ ಮಕ್ಕಳು ಓದುವ ಸಮಯದಲ್ಲಿ ಟಿವಿ ನೋಡದೇ ಇರುವುದು, ಬೆಳಗ್ಗೆ ಬೇಗ ಏಬ್ಬಿಸುವುದು ಇತ್ಯಾದಿ ಜವಾಬ್ದಾರಿಯನ್ನು ತಂದೆ ಅಥವಾ ತಾಯಿಗೆ ಒಪ್ಪಿಸಿ, ಅದರ ಮೇಲ್ವಿಚಾರಣೆಯನ್ನು ತರಗತಿ ಶಿಕ್ಷಕರು ನೋಡಿಕೊಳ್ಳುವಂತೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.