ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ
ಕುತ್ಯಾರು ಮೂಲ್ದೊಟ್ಟು ನಾಗಬನ
Team Udayavani, May 23, 2020, 5:07 AM IST
ಶಿರ್ವ: ಕಾಪು ತಾಲೂಕಿನ ಕುತ್ಯಾರು ಸಮೀಪದ ಮೂಲ್ದೊಟ್ಟು ನಾಗಬನದಲ್ಲಿ ವರ್ಷಕ್ಕೊಮ್ಮೆ ತುಳು ಬೇಷ ತಿಂಗಳ ಮೊದಲ ಗುರುವಾರ ನಡೆಯುವ ನಾಗಾರಾಧನೆ ಪೂಜೆಯು ಶಿರ್ವ ಸೊರ್ಪು ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಗುರಿಕಾರ ರವೀಂದ್ರನಾಥ .ಎಸ್ ಅವರ ನೇತೃತ್ವದಲ್ಲಿ ಸೀಮಿತ ಜನರ ಉಪಸ್ಥಿತಿಯಲ್ಲಿ ಮೇ 21ರಂದು ಸಂಪನ್ನಗೊಂಡಿತು.
ನೈಸರ್ಗಿಕವಾಗಿ ತನ್ನ ಮೂಲ ಸ್ವರೂಪವನ್ನು ಉಳಿಸಿಕೊಂಡ ಈ ವಿಶಿಷ್ಟ ನಾಗಬನದಲ್ಲಿ ನಾಗರಪಂಚಮಿ ಯಂತಹ ಪರ್ವದಿನದಲ್ಲಾಗಲೀ, ಭಕ್ತರು ಬಯಸಿದ ಇತರ ದಿನದಲ್ಲಾಗಲೀ ಪೂಜೆಗೆ ಅವಕಾಶವಿಲ್ಲ. ವರ್ಷಕ್ಕೊಮ್ಮೆ ಮಾತ್ರ ವಿವಿಧ ಜಿಲ್ಲೆಗಳ ಪರಿಶಿಷ್ಟ ವರ್ಗದ ಮೊಗೇರ ಸಮುದಾಯದವರಿಂದ ಈ ನಾಗಬನದಲ್ಲಿ ಪೂಜೆ ನಡೆಯುವುದು ಸಂಪ್ರದಾಯವಾಗಿದೆ.
ಪ್ರತಿವರ್ಷ ಇಲ್ಲಿನ ನಾಗಾರಾಧನೆ ಪೂಜೆಗೆ ವಿವಿಧ ಜಿಲ್ಲೆಗಳಿಂದ ಮೊಗೇರ ಸಮುದಾಯದ ಸುಮಾರು 500 ಭಕ್ತರು ಪಾಲ್ಗೊಳ್ಳುತ್ತಿದ್ದು ಈ ಬಾರಿ ಕೋವಿಡ್-19 ಮಹಾಮಾರಿಯ ಲಾಕ್ಡೌನ್ ಹಿನ್ನೆಲೆಯಲ್ಲಿ ಸೀಮಿತ ಜನರು ಭಾಗವಹಿಸಿ ಪೂಜೆ ನೆರವೇರಿಸಲಾಗಿದೆ ಎಂದು ಗುರಿಕಾರ ರವೀಂದ್ರನಾಥ ಎಸ್. ತಿಳಿಸಿದ್ದಾರೆ.
ಕುತ್ಯಾರು ದೈವಸ್ಥಾನದ ಗುರಿಕಾರ ಸಾಧು ಮುಗ್ಗೇರ, ಶಿರ್ವ ದೈವಸ್ಥಾನದ ಒತ್ತು ಗುರಿಕಾರ ಸತೀಶ್ ಮುಗ್ಗೇರ ಶಿರ್ವ ಉಪಸ್ಥಿತರಿದ್ದರು.
ವಿಶಿಷ್ಟ ನಾಗಬನ
ಪರಿಶಿಷ್ಟ ವರ್ಗದ ಮೊಗೇರ ಸಮುದಾಯದ 16 ಬಳಿ ಸಾವಿರ ಮಾಗಣೆಯ ಪ್ರಧಾನ ನಾಗಬನವಾಗಿದ್ದು ಈ ವಾರ್ಷಿಕ ಆರಾಧನೆ ಪುರಾತನ ಕಾಲದಿಂದಲೂ ಸಂಪ್ರದಾಯಬದ್ಧವಾಗಿ ನಡೆದುಕೊಂಡು ಬರುತ್ತಿದೆ. ಶಿರ್ವ ಸೊರ್ಪು ಶ್ರೀಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಗುರಿಕಾರರಿಗೆ ಮಾತ್ರ ಸನ್ನಿಧಿಯಲ್ಲಿ ತಂಪೆರೆಯುವ ಪೂಜೆ ಸಲ್ಲಿಸುವ ಅಧಿಕಾರವಿದ್ದು , ಈ ನಾಗಬನದಲ್ಲಿ ಮಾತ್ರ ತುಳು ಬೇಷ ತಿಂಗಳ ಮೊದಲ ಗುರುವಾರ ನಾಗಾರಾಧನೆ ನಡೆಯುವುದು ಕರಾವಳಿಯಲ್ಲಿ ವಿಶೇಷವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ