ಅವೈಜ್ಞಾನಿಕ ರಸ್ತೆಯಲ್ಲಿ ಮತ್ತೆ ಅವಘಡ; ಪೆರಂಪಳ್ಳಿ ತಿರುವಿನಲ್ಲಿ ಮಗುಚಿಬಿದ್ದ 2 ಕಾರು
Team Udayavani, Nov 28, 2022, 9:00 AM IST
ಉಡುಪಿ: ಪೆರಂಪಳ್ಳಿ ರಸ್ತೆಯ ಸುಂದರಿಗೇಟ್ನ ಅವೈಜ್ಞಾನಿಕ ತಿರುವಿನಲ್ಲಿ ವಾರದ ಅಂತರದಲ್ಲಿ ಮತ್ತೂಂದು ಅವಘಡ ಸಂಭವಿಸಿದೆ.
ಶನಿವಾರ ಮಣಿಪಾಲದಿಂದ ಅಂಬಾಗಿಲುವಿನತ್ತ ತೆರಳುತ್ತಿದ್ದ ಹುಂಡೈ ಐ20 ಕಾರು ತಿರುವಿನಲ್ಲಿ ಪಲ್ಟಿಯಾಗಿ ಬಿತ್ತು. ಅದರಲ್ಲಿದ್ದ 6 ಮಂದಿ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೆಲವೇ ಗಂಟೆಗಳ ಅಂತರದಲ್ಲಿ ಮಹೀಂದ್ರ ಎಕ್ಸ್ಯುವಿ ಕಾರು ನಿಯಂತ್ರಣ ಕಳೆದುಕೊಂಡು ತಿರುವಿನಲ್ಲಿ ಪಲ್ಟಿಯಾಗಿ ಆ ಕಾರಿನ ಮೇಲೆಯೇ ಬಿತ್ತು. ಅದರಲ್ಲಿದ್ದ ಯುವಕ ಹಾಗೂ ಯುವತಿ ಅಪಾಯದಿಂದ ಪಾರಾಗಿದ್ದಾರೆ.
14ನೇ ಅಪಘಾತ
ಇಲ್ಲಿ ಈಗಾಗಲೇ 12ರಿಂದ 14 ಅಪಘಾತಗಳು ನಡೆದಿವೆ. ಅ.17, 20, 26 ಹೀಗೆ ಸಾಲು ಸಾಲು ಅಪಘಾತ ನಡೆಯುತ್ತಿದ್ದರೂ ಸಂಬಂಧಪಟ್ಟವರು ಮೌನ ವಹಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ ನಡೆದ ನಡೆದ ಅಪಘಾತದಲ್ಲಿ ಒಂದು ಕಾರು ಬೆಂಗಳೂರು ನೋಂದಣಿಯದ್ದಾದರೆ ಮತ್ತೂಂದು ತಮಿಳುನಾಡು ನೋಂದಣಿ ಹೊಂದಿದೆ.
ತಪ್ಪಿದ ಭಾರೀ ಅವಘಡ
ಅಪಘಾತಕ್ಕೀಡಾದ ಕಾರುಗಳೆರಡೂ ಸುಂದರಿಗೇಟ್ ಬಳಿಯ ಶಯೋಶ್ ಅವರ ಮನೆಯ ಕಾಂಪೌಂಡ್ನ ಒಳಗೆ ಹೋಗಿಬಿದ್ದಿದೆ. ಈ ಮನೆಯವರು ಯಾವಾಗಲು ಇದೇ ಸ್ಥಳದಲ್ಲಿ ಸಾಮಾನ್ಯವಾಗಿ ಕುಳಿತುಕೊಳ್ಳುತ್ತಾರೆ. ಆದರೆ ಘಟನೆ ನಡೆದ ಸಂದರ್ಭ ಯಾರೂ ಇಲ್ಲದ ಕಾರಣ ಭಾರೀ ಅವಘಡ ತಪ್ಪಿದಂತಾಗಿದೆ. ಇಲ್ಲಿ ಶಾಶ್ವತ ಪರಿಹಾರ ಕಲ್ಪಿಸಿದರಷ್ಟೇ ಸಮಸ್ಯೆ ನಿವಾರಣೆ ಸಾಧ್ಯ.
ಶೀಘ್ರ ಅಳವಡಿಕೆ: ಪೆರಂಪಳ್ಳಿಯ ಸುಂದರಿಗೇಟ್ ಬಳಿ ಸೂಚನ ಫಲಕ ಹಾಗೂ ಉಬ್ಬುತಗ್ಗು ಅಳವಡಿಕೆ ಮಾಡುವಂತೆ ಈಗಾಗಲೇ ಅಸಿಸ್ಟೆಂಟ್ ಎಂಜಿನಿಯರ್ ಅವರಿಗೆ ತಿಳಿಸಲಾಗಿದೆ. ಇದನ್ನು ಅಳವಡಿಕೆ ಮಾಡಿದಲ್ಲಿ ತಕ್ಕಮಟ್ಟಿಗೆ ಸಮಸ್ಯೆ ಪರಿಹಾರ ಕಾಣಲಿದೆ. –ಜಗದೀಶ್ ಭಟ್, ಎಇಇ ಲೋಕೋಪಯೋಗಿ ಇಲಾಖೆ
ವಾರದೊಳಗೆ ಕಾಮಗಾರಿ: ಇಲ್ಲಿನ ಅಪಾಯಕಾರಿ ತಿರುವಿನ ಬಗ್ಗೆ ಮಾಹಿತಿ ಬಂದಿದೆ. ರ್ಯಾಂಬಲ್ ಸ್ಟ್ರಿಪ್ ಮಾದರಿಯ ಹಂಪ್ಸ್ ಗಳನ್ನು ತಿರುವು ರಸ್ತೆಯ ಎರಡೂ ಬದಿಯಲ್ಲಿ ಅಳವಡಿಸಲಾಗುವುದು. ಹಾಗೆಯೇ ಸೂಚನ ಫಲಕಗಳನ್ನೂ ಅಳವಡಿಸಲಾಗುವುದು. ಈ ಎಲ್ಲ ಕಾಮಗಾರಿಗಳನ್ನು ವಾರದೊಳಗೆ ಪೂರ್ಣಗೊಳಿಸಲಾಗುವುದು. –ಗಿರೀಶ್, ಅಸಿಸ್ಟೆಂಟ್ ಎಂಜಿನಿಯರ್, ಲೋಕೋಪಯೋಗಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ