ಕಾರ್ಮಿಕರಿಲ್ಲದೆ ವಿವಿಧ ಕೆಲಸ ಕಾರ್ಯಗಳು ಬಾಕಿ, ಬಸ್‌ಗೂ ಪ್ರಯಾಣಿಕರಿಲ್ಲ

ಉಡುಪಿ: ಬಂದವರಿಗಿಂತ ಹೋದವರು ಹೆಚ್ಚು !

Team Udayavani, May 22, 2020, 6:05 AM IST

ಕಾರ್ಮಿಕರಿಲ್ಲದೆ ವಿವಿಧ ಕೆಲಸ ಕಾರ್ಯಗಳು ಬಾಕಿ, ಬಸ್‌ಗೂ ಪ್ರಯಾಣಿಕರಿಲ್ಲ

ಸಾಂದರ್ಭಿಕ ಚಿತ್ರ.

ಉಡುಪಿ: ಕೋವಿಡ್‌ ಪರಿಣಾಮದಿಂದ ಉಡುಪಿ ಜಿಲ್ಲೆಯಿಂದ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ತೆರಳಿದವರ ಇದುವರೆಗಿನ ಅಧಿಕೃತ ಸಂಖ್ಯೆ 11,608. ಉಡುಪಿ ಜಿಲ್ಲೆಗೆ ಹೊರ ರಾಜ್ಯಗಳಿಂದ ಬಂದವರ ಸಂಖ್ಯೆ 7,355.

ಉಡುಪಿ ಜಿಲ್ಲೆಗೆ ಪ್ರವೇಶಿಸಲು ಮೇ 7ರಿಂದ ಅನುಮತಿ ದೊರಕಿದ್ದರೆ ಹೊರರಾಜ್ಯಕ್ಕೂ ಇಲ್ಲಿಂದ ಹೋಗಲು ಮೇ 7ರಿಂದ ಅನುಮತಿ ದೊರಕಿತ್ತು. ಆಂಧ್ರ ಪ್ರದೇಶ, ತಮಿಳುನಾಡು, ಬಿಹಾರ, ಉತ್ತರ ಪ್ರದೇಶ, ಝಾರ್ಖಂಡ್‌, ಮಧ್ಯಪ್ರದೇಶ ರಾಜ್ಯಗಳಿಗೆ ಹೋಗಲು ಉಡುಪಿಯಿಂದ ವ್ಯವಸ್ಥೆ ಮಾಡಲಾಗಿತ್ತು. ಉಡುಪಿ ರೈಲು ನಿಲ್ದಾಣದಿಂದ ವಿಶೇಷ ರೈಲು ಹೊರಟಿದ್ದರೆ, ಮಂಗಳೂರಿನ ವರೆಗೆ ಬಿಟ್ಟು ಅಲ್ಲಿಂದ ರೈಲು ಮಾರ್ಗ ಮೂಲಕ ಕಳುಹಿಸಲಾಗಿತ್ತು. ಬೆಂಗಳೂರಿನವರೆಗೆ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಕಳುಹಿಸಿ ಅಲ್ಲಿಂದ ರೈಲು ಮಾರ್ಗದ ಮೂಲಕ ಕಳುಹಿಸಲಾಗಿತ್ತು. ಹೀಗೆ ಹೊರ ರಾಜ್ಯಕ್ಕೆ ಜಿಲ್ಲಾಡಳಿತದ ಸುಪರ್ದಿಯಲ್ಲಿ ತೆರಳಿದವರ ಸಂಖ್ಯೆ ಇದುವರೆಗೆ 4,116.

ಎ. 25ರಿಂದ ಮೇ 7ರ ವರೆಗೆ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲಾಗಿತ್ತು. ಹೀಗೆ ರಾಜ್ಯದೊಳಗಿನ ಅಂತರ್ಜಿಲ್ಲೆ ಪ್ರಯಾಣ ಮಾಡಿದವರ ಸಂಖ್ಯೆ ಒಟ್ಟು 7,492. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರ ಪ್ರಕಾರ ಈಗಾಗಲೇ ಸೇವಾಸಿಂಧು ಮೂಲಕ ಅನುಮತಿಸಿದಂತೆ ಇನ್ನಷ್ಟು ಜನರು ಬರುವ ನಿರೀಕ್ಷೆ ಇದೆ.
ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕಟ್ಟಡ, ರಸ್ತೆ, ಸೇತುವೆ ಕಾಮಗಾರಿಗಳು ಹೊರ ಜಿಲ್ಲೆ ಮತ್ತು ಹೊರ ರಾಜ್ಯದ ಕಾರ್ಮಿಕರ ನಿರ್ಗಮನದಿಂದ ಸ್ಥಗಿತಗೊಂಡಿದೆ. ಉಡುಪಿ ಜಿಲ್ಲೆಗೆ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಎಷ್ಟೇ ಜನರು ಬಂದರೂ ಈ ಕಾರ್ಮಿಕರ ಕೊರತೆಯನ್ನು ನೀಗಿಸುವುದಿಲ್ಲ.

ಆಶ್ಚರ್ಯಕರ ಸಂಗತಿ ಎಂದರೆ ಅಧಿಕೃತ ಸಂಖ್ಯೆಯಲ್ಲದೆ ನಡೆದುಕೊಂಡು ಲೆಕ್ಕಕ್ಕೆ ಸಿಗದ ಅದೆಷ್ಟೋ ಕಾರ್ಮಿಕರು ಉಡುಪಿ ಜಿಲ್ಲೆಯಿಂದ ಜಾಗ ಖಾಲಿ ಮಾಡಿದ್ದಾರೆ. ಜಿಲ್ಲೆಯ ಗಡಿಗಳನ್ನು ಸೀಲ್‌ಡೌನ್‌ ಮಾಡುವ ಮೊದಲು ವಾಹನಗಳ ಮೂಲಕ ತೆರಳಿದವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಎಲ್ಲದನ್ನು ಒಟ್ಟುಗೂಡಿಸಿದರೆ ಸುಮಾರು 20,000 ವಲಸೆ ಕಾರ್ಮಿಕರು ಹೊರ ಹೋಗಿರುವ ಸಾಧ್ಯತೆ ಇದೆ.

ಈಗ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕೊರತೆಯಾಗಲು ವಲಸೆ ಕಾರ್ಮಿಕರು ಸ್ವಗ್ರಾಮಕ್ಕೆ ತೆರಳಿದ್ದೂ ಒಂದು ಕಾರಣ. ಸ್ಥಳೀಯ ಸಾರ್ವಜನಿಕರು ಹೆಚ್ಚಾಗಿ ಸ್ವಂತ ವಾಹನಗಳಲ್ಲಿ ತೆರಳುತ್ತಿದ್ದಾರೆ. ಹೀಗಾಗಿ ಬಸ್ಸುಗಳಲ್ಲಿ ಪ್ರಯಾಣಿಕರ ಕೊರತೆ ಕಾಣುತ್ತಿದೆ.

ಕ್ವಾರಂಟೈನಿಗರ ಸಂಖ್ಯೆ ಹೆಚ್ಚಳ
ಉಡುಪಿ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿರುವುದಕ್ಕೂ ಕ್ವಾರಂಟೈನ್‌ ವ್ಯವಸ್ಥೆಯಲ್ಲಿರುವವರ ಸಂಖ್ಯೆ ಏರುತ್ತಿರುವುದಕ್ಕೂ ಹತ್ತಿರದ ಸಂಬಂಧ ಕಂಡುಬರುತ್ತಿದೆ.
ಉಡುಪಿ ಜಿಲ್ಲೆಗೆ ಇದುವರೆಗೆ 7,872 ಜನರು ಆಗಮಿಸಿ ಕ್ವಾರಂಟೈನ್‌ನಲ್ಲಿದ್ದಾರೆ. ಇದುವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 50 ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದ್ದು ಬಹುತೇಕ ಪ್ರಕರಣಗಳು ಹೊರ ರಾಜ್ಯದಿಂದ ಆಗಮಿಸಿದವರಿಂದ ಕೂಡಿದೆ.

ಬೈಂದೂರು ಮತ್ತು ಕಾರ್ಕಳ ತಾಲೂಕಿನಲ್ಲಿ ಕ್ವಾರಂಟೈನ್‌ನಲ್ಲಿರುವವರ ಸಂಖ್ಯೆ ಅತೀ ಹೆಚ್ಚು, ಉಡುಪಿ, ಕಾಪು, ಬ್ರಹ್ಮಾವರದಲ್ಲಿ ಕಡಿಮೆ, ಕುಂದಾಪುರ ತಾಲೂಕಿನಲ್ಲಿ ಮಧ್ಯಮ ಮಟ್ಟದಲ್ಲಿ ಕ್ವಾರಂಟೈನಿಗರು ಇದ್ದಾರೆ. ಉಡುಪಿ ತಾಲೂಕಿನಲ್ಲಿ 567, ಕಾಪು ತಾಲೂಕಿನಲ್ಲಿ 410, ಬ್ರಹ್ಮಾವರ ತಾಲೂಕಿನಲ್ಲಿ 497, ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಒಟ್ಟು 2,377, ಕುಂದಾಪುರ ತಾಲೂಕಿನಲ್ಲಿ 1,543, ಬೈಂದೂರು ತಾಲೂಕಿನಲ್ಲಿ 2,478 ಜನರು ಕ್ವಾರಂಟೈನ್‌ನಲ್ಲಿದ್ದಾರೆ.

ಮಹಾರಾಷ್ಟ್ರದಿಂದ ಆಗಮಿಸಿದವರು 7,097. ತಮಿಳುನಾಡಿನಿಂದ 75, ತೆಲಂಗಾಣದಿಂದ 425, ಆಂಧ್ರಪ್ರದೇಶದಿಂದ 43, ಗೋವಾದಿಂದ 53, ಗುಜರಾತ್‌ನಿಂದ 40, ಮಧ್ಯಪ್ರದೇಶ, ಹರ್ಯಾಣ, ಚಂಡೀಗಢ, ಒಡಿಶಾದಿಂದ ತಲಾ ಒಂದು, ದಿಲ್ಲಿಯಿಂದ 21, ಪಶ್ಚಿಮಬಂಗಾಲದಿಂದ ಆರು, ರಾಜಸ್ಥಾನದಿಂದ ಐದು, ಪಂಜಾಬ್‌ನಿಂದ 11, ಕೇರಳದಿಂದ 92 ಮಂದಿ ಆಗಮಿಸಿದ್ದಾರೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.