ಬದಲಿ ಮಾರ್ಗ ಬಳಸಿ ಟ್ರಾಫಿಕ್‌ ಜಾಮ್‌ ತಪ್ಪಿಸಿ

ಇಂದ್ರಾಳಿ ರಸ್ತೆ ಕಾಮಗಾರಿ ಸುಗಮಗೊಳಿಸಲು ಸಹಕಾರ

Team Udayavani, Oct 7, 2022, 2:36 PM IST

17

ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169ಎ) ಕಾಮಗಾರಿಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೊಂದು ಬದಿಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಇಂದ್ರಾಳಿ ಸೇತುವೆ ಸಮೀಪ ದೊಡ್ಡ ಪ್ರಮಾಣದಲ್ಲಿ ಸಂಚಾರ ದಟ್ಟಣೆ ಸಂಭವಿಸುತ್ತಿದೆ. ಇಂದ್ರಾಳಿಯಿಂದ ಎಂಜಿಎಂವರೆಗೂ ಒಮ್ಮೊಮ್ಮೆ ವಾಹನಗಳು ಬಹು ಹೊತ್ತು ನಿಂತು ಮುಂದಕ್ಕೆ ಹೋಗಬೇಕಾಗುತ್ತದೆ. ಇನ್ನೊಂದು ಕಡೆಯಲ್ಲಿ ಇಂದ್ರಾಳಿ ಬಸ್‌ನಿಲ್ದಾಣವರೆಗೂ ಸಂಚಾರ ದಟ್ಟಣೆಯಿಂದ ಕೂಡಿರುತ್ತದೆ.

ಹಲವು ವರ್ಷಗಳ ಬಳಿಕ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆಯುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಒಂದಷ್ಟು ಜವಾಬ್ದಾರಿಗಳನ್ನು ವಾಹನ ಸವಾರರು ತೋರಿಸಬೇಕಿದೆ. ಮುಂದಿನ 45 ದಿನಗಳ ಕಾಲ ಕಾಮಗಾರಿ ನಡೆಯುವುದರಿಂದ ಘನ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆಗೊಳಿಸಿ ಜಿಲ್ಲಾಡಳಿತ ಆದೇಶ ಮಾಡಿದ್ದರೂ ಸೂಕ್ತ ಸ್ಪಂದನೆ ವ್ಯಕ್ತವಾಗಿಲ್ಲ. ಗಂಟೆಗಟ್ಟಲೆ ಟ್ರಾಫಿಕ್‌ ನಿಂದ ಜನರಿಗೆ ಸಮಸ್ಯೆ ಆಗುವುದಲ್ಲದೆ ಕಾಮಗಾರಿ ನಡೆಸಲು ಇದರಿಂದ ಸಮಸ್ಯೆ ಯಾಗುತ್ತದೆ. ಜನರೇ (ಕಾರು, ದ್ವಿಚಕ್ರ ವಾಹನ ಹೊಂದಿರುವರು ಸಹ) ಇದನ್ನು ಅರ್ಥೈಸಿಕೊಂಡು ಬದಲಿ ಮಾರ್ಗದಲ್ಲಿ ಸಂಚರಿಸುವುದು ಸೂಕ್ತವಾಗಿದೆ.

2-3 ಕಿ.ಮೀ. ಹೆಚ್ಚಳವಾದರೂ ಅನುಕೂಲ

ಕ್ಲಚ್‌ ಮತ್ತೆ ಗೇರ್‌ಗಳ ಮೇಲೆ ಹೆಚ್ಚಿನ ಒತ್ತಡ ಬೀಳುವುದರಿಂದ ವಾಹನಗಳ ಎಂಜಿನ್‌ಗೆ ಹೊಡೆತ ಬೀಳುವ ಸಾಧ್ಯತೆ ಹೆಚ್ಚು. ಇಂಧನ ವೆಚ್ಚ ಅಧಿಕವಾಗುತ್ತದೆ. ಸಮಯ ವ್ಯರ್ಥವಾಗುತ್ತದೆ. ಅಲ್ಲದೆ ವಿಪರೀತ ಧೂಳಿನ ವಾತಾವರಣ ಸೃಷ್ಟಿಯಾಗಿದೆ. ಅದರಲ್ಲಿಯೂ ವಿಶೇಷವಾಗಿ ಪ್ರತೀನಿತ್ಯ ಉಡುಪಿ-ಮಣಿಪಾಲ ಸಂಚರಿಸುವ ಕಾರು, ಬೈಕು, ಟೆಂಪೊಗಳನ್ನು ಹೊಂದಿರುವ ಉದ್ಯೋಗಿಗಳು ಪೆರಂಪಳ್ಳಿ ಮೂಲಕ ಸಾಗಿದರೆ ಉತ್ತಮ. 2-3 ಕಿ. ಮೀ. ಹೆಚ್ಚಳವಾದರೂ ಸಮಯದ ಉಳಿತಾಯ, ಧೂಳಿನಿಂದ ರಕ್ಷಣೆಯಾಗುತ್ತದೆ.

ಬದಲಿ ಮಾರ್ಗ ಸಂಚಾರ ಹೇಗೆ ?

ಕುಂದಾಪುರದಿಂದ ಸಂತೆಕಟ್ಟೆ, ಮಣಿಪಾಲ ಮೂಲಕ ಕಾರ್ಕಳ ಕಡೆಗೆ ಹೋಗುವವರು, ಮೂಡುಬಿದಿರೆ, ಕಾರ್ಕಳ ಕಡೆಯಿಂದ ನೇರವಾಗಿ ಬ್ರಹ್ಮಾವರ, ಕುಂದಾಪುರ ಕಡೆಗೆ ಹೋಗುವವರು ಉಡುಪಿಯನ್ನು ಪ್ರವೇಶಿಸದೆ ಮಣಿಪಾಲ ಪೆರಂಪಳ್ಳಿ ಮಾರ್ಗವಾಗಿ ನೇರವಾಗಿ ಮುಂದೆ ಚಲಿಸಬಹುದು. ಬಸ್‌ ಹೊರತುಪಡಿಸಿ ಇತರ ಘನ ವಾಹನಗಳು, ಇತರ ಕಾರು, ದ್ವಿಚಕ್ರ ವಾಹನ ಸಹ ಕುಂದಾಪುರ, ಬ್ರಹ್ಮಾವರ ಕಡೆಯಿಂದ ಬರುವವರು ಅಂಬಾಗಿಲು, ಪೆರಂಪಳ್ಳಿ ರಸ್ತೆ ಮೂಲಕ ಮಣಿಪಾಲಕ್ಕೆ ಬಂದು ಮುಂದಕ್ಕೆ ಹೋಗಬಹುದು.

ಮಂಗಳೂರು, ಪಡುಬಿದ್ರಿ, ಕಾಪು, ಉಡುಪಿ ಕಡೆಯಿಂದ ಮಣಿಪಾಲಕ್ಕೆ ಬರುವವರು ಕಲ್ಸಂಕ-ಗುಂಡಿಬೈಲು, ದೊಡ್ಡಣಗುಡ್ಡೆ- ಎ.ವಿ. ಬಾಳಿಗ ಆಸ್ಪತ್ರೆ ಮೂಲಕ ಪೆರಂಪಳ್ಳಿ ರಸ್ತೆ ಸಂಪರ್ಕಿಸಿ ಅಲ್ಲಿಂದ ಮಣಿಪಾಲಕ್ಕೆ ಹೋಗಬೇಕು.

ಕಾರ್ಕಳ, ಹಿರಿಯಡ್ಕ, ಹೆಬ್ರಿ ಮಾರ್ಗದಿಂದ ಉಡುಪಿಗೆ ಬರುವವರು ಮಣಿಪಾಲ-ಡಿಸಿ ಕಚೇರಿ ರಸ್ತೆ -ಪೆರಂಪಳ್ಳಿ, ಅಂಬಾಗಿಲು ತಲುಪಿ ಅಲ್ಲಿಂದ ಉಡುಪಿಗೆ ಮತ್ತು ಸಂತೆಕಟ್ಟೆ ಮಾರ್ಗವಾಗಿ ಕುಂದಾಪುರ ಕಡೆಗೆ ತೆರಳಬಹುದು.

45 ದಿನಗಳ ಕಾಲ ಕಾಮಗಾರಿ ಮುಗಿಯುವವರೆಗೆ ಇದನ್ನು ಪಾಲಿಸಿದಲ್ಲಿ ವ್ಯವಸ್ಥಿತ ಕಾಮಗಾರಿ ಮುಗಿಯಲಿದೆ. ಮುಂದೆಯೂ ಉಡುಪಿ ಪ್ರವೇಶಿಸುವುದು ಅಗತ್ಯವಿಲ್ಲದಿದ್ದರೆ ಈ ಪರ್ಯಾಯ ಮಾರ್ಗವನ್ನೇ ಮುಂದುವರಿಸಿದರೆ ಒಂದೇ ಕಡೆ ಉಂಟಾಗುವ ವಾಹನ ದಟ್ಟಣೆ ನಿಯಂತ್ರಿಸಲು ಸಾಧ್ಯವಾಗುತ್ತದೆ.

ಜಿಲ್ಲಾಧಿಕಾರಿಗಳ ಮನವಿ: ಅ.1ರಿಂದ ಕಾಮಗಾರಿ ಆರಂಭಗೊಂಡು 45 ದಿನಗಳ ಕೆಲಸ ನಡೆಯಲಿದ್ದು, ಬದಲಿ ರಸ್ತೆಯಲ್ಲಿ ಸಂಚರಿಸುವ ಮೂಲಕ ಸಂಚಾರ ನಿಯಮ ಪಾಲಿಸಿ. ಸುಗಮ ಸಂಚಾರ ವ್ಯವಸ್ಥೆಗೆ ಸಾರ್ವಜನಿಕರು ಸಹಕರಿಸಿ. –ಕೂರ್ಮಾ ರಾವ್‌ ಎಂ., ಉಡುಪಿ ಜಿಲ್ಲಾಧಿಕಾರಿ

ಪೊಲೀಸ್‌ ಇಲಾಖೆ ಮನವಿ: ಇಂದ್ರಾಳಿ ಸೇತುವೆ ಕಾಮಗಾರಿ ಸಂಬಂಧಿಸಿ ಸಂಚಾರ ದಟ್ಟಣೆ ನಿಯಂತ್ರಿಸಲು ಇಲಾಖೆ ಸಿಬಂದಿ ಶ್ರಮಿಸುತ್ತಿದ್ದಾರೆ. ಸಂಚಾರ ಬದಲಾವಣೆ ಆದೇಶದಲ್ಲಿ ಘನ ವಾಹನಗಳು ಮಾತ್ರ ಇವೆ. ಘನ ವಾಹನಗಳು ಪೆರಂಪಳ್ಳಿ ಮಾರ್ಗದಲ್ಲಿ ಸಾಗುವಂತೆ ಕ್ರಮ ತೆಗೆದುಕೊಂಡಿದ್ದೇವೆ. ಕಾರುಗಳ ಸಂಖ್ಯೆ ಹೆಚ್ಚು ಇರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಕಾಮಗಾರಿ ಮುಗಿಯುವವರೆಗೆ ಬದಲಿ ಮಾರ್ಗ ಪೆರಂಪಳ್ಳಿ ರಸ್ತೆಯಲ್ಲಿ ಸಾಗುವ ಮೂಲಕ ಸಂಚಾರ ದಟ್ಟಣೆ ನಿಯಂತ್ರಿಸಲು ಸಹಕರಿಸಬೇಕು. -ಸಿದ್ದಲಿಂಗಪ್ಪ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಉಡುಪಿ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.