ಅಯೋಧ್ಯೆಯಲ್ಲಿ ಭೂಮಿಪೂಜೆ; ಕರಾವಳಿಯಲ್ಲಿ ಭಕ್ತಿಭಾವದ ಸಂಭ್ರಮ


Team Udayavani, Aug 6, 2020, 7:28 AM IST

ಅಯೋಧ್ಯೆಯಲ್ಲಿ ಭೂಮಿಪೂಜೆ; ಕರಾವಳಿಯಲ್ಲಿ ಭಕ್ತಿಭಾವದ ಸಂಭ್ರಮ

ಮಂಗಳೂರು/ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನಡೆಯುತ್ತಿದ್ದಂತೆ ಕರಾವಳಿಯಾದ್ಯಂತ ಭಕ್ತ ಜನರು ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಿದರು. ಜಿಲ್ಲೆಯ ಎಲ್ಲ ದೇವಾಲಯಗಳಲ್ಲಿ ಹಿಂದೂ ಸಂಘಟನೆಗಳ ಕಚೇರಿ, ಬಿಜೆಪಿ ಕಾರ್ಯಾಲಯ ಹಾಗೂ ಮನೆಗಳಲ್ಲಿ ರಾಮನಾಮ ಜಪ, ತಪ, ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.

ಧಾರ್ಮಿಕ ದತ್ತಿ ಇಲಾಖೆಯ ಸೂಚನೆಯಂತೆ ಇಲಾಖೆಯ ಮತ್ತು ಖಾಸಗಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಬೆಳಗ್ಗಿನಿಂದ ರಾತ್ರಿಯವರೆಗೆ ನಡೆಯಿತು. ಭಜನಾ ಸಂಕೀರ್ತನೆಯೂ ನೆರವೇರಿತು. ಮನೆಗಳಲ್ಲಿ ದೀಪ ಬೆಳಗಿ ದೀಪೋತ್ಸವ ಆಚರಿಸಲಾಯಿತು. ರಾಮಜನ್ಮಭೂಮಿಗೆ ಹೋರಾಟ ಮಾಡಿದ ಕರಸೇವಕರನ್ನು ಗೌರವಿಸುವ ಹಾಗೂ ಮಡಿದ ಕರಸೇವಕರಿಗೆ ಶ್ರದ್ಧಾಂಜಲಿ ಸಮರ್ಪಣೆ ಜರಗಿತು. ದೃಶ್ಯ ಮಾಧ್ಯಮಗಳ ಮೂಲಕ ಮನೆಗಳಲ್ಲಿ ಜನರು ನೇರಪ್ರಸಾರ ವೀಕ್ಷಿಸಿ ಸಂಭ್ರಮಪಟ್ಟರು.

ಮಂಗಳೂರು-ಸಂಭ್ರಮ
ಮಂಗಳೂರಿನಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ವಿವಿಧ ಕಡೆ ಬಲೂನ್‌ಗಳನ್ನು ಹಾರಿಸಿ, ಸಿಹಿತಿಂಡಿ ಹಂಚಿ ಸಂಭ್ರಮಪಟ್ಟರು. ಕದ್ರಿಯ ವಿಹಿಂಪ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕರಾದ ಡಿ. ವೇದವ್ಯಾಸ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ, ಮೇಯರ್‌ ದಿವಾಕರ ಪಾಂಡೇಶ್ವರ ಮುಂತಾದವರು ಭಾಗವಹಿಸಿದರು. ಕರಸೇವಕರನ್ನು ಗೌರವಿಸಲಾಯಿತು.

ಬಿಗು ಭದ್ರತೆ
ಭೂಮಿಪೂಜೆ ಹಿನ್ನೆಲೆಯಲ್ಲಿ ದ.ಕ., ಉಡುಪಿ ಜಿಲ್ಲೆಯಾದ್ಯಂತ ಪೊಲೀಸ್‌ ಬಂದೋಬಸ್ತು ಬಿಗಿಗೊಳಿಸಲಾಗಿತ್ತು. ಮದ್ಯ ಮಾರಾಟವನ್ನು ನಿಷೇಧಿಸ ಲಾಗಿತ್ತು. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿ ಮತ್ತು ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಪೇಜಾವರ ಶ್ರೀಗಳಿಂದ ಲಕ್ಷ ತುಳಸಿ ಅರ್ಚನೆ
ಅಯೋಧ್ಯೆಯಲ್ಲಿ ಭೂಮಿಪೂಜೆ ನೆರವೇರಿದ ಸಂದರ್ಭ ರಾಮಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸದಸ್ಯ ರಾಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉಪಾಸ್ಯಮೂರ್ತಿ ರಾಮದೇವರಿಗೆ ಲಕ್ಷ ತುಳಸೀ ಅರ್ಚನೆ ಮಾಡಿದರು. ಕಾರ್ಯಕ್ರಮದ ನಿರ್ವಿಘ್ನತಾ ಸಿದ್ಧಿ, ಎಲ್ಲ ದೋಷ ನಿವಾರಣೆಯಾಗಿ ಅತೀ ಶೀಘ್ರ ಸುಸೂತ್ರವಾಗಿ ಭವ್ಯ ಮಂದಿರ ನಿರ್ಮಾಣವಾಗಿ ಸಮಸ್ತ ಲೋಕಕ್ಕೆ ಸೀತಾರಾಮದೇವರ ಪೂರ್ಣ ಕೃಪೆ ಪ್ರಾಪ್ತಿಯಾಗುವಂತೆ ಪ್ರಾರ್ಥಿಸಿ ಚಾತುರ್ಮಾಸ್ಯ ನಿಮಿತ್ತ ಅಯೋಧ್ಯೆಗೆ ತೆರಳದೆ ನೀಲಾವರ ಗೋಶಾಲೆಯ ಆವರಣದ ಶಾಖಾ ಮಠದಲ್ಲಿ ನವಗ್ರಹ ಯಾಗ, ಬಳಿತ್ಥಾ ಸೂಕ್ತ ಹೋಮ, ರಾಮತಾರಕ ಮಂತ್ರ ಯಾಗವನ್ನು ವೈದಿಕರ ಮೂಲಕ ನೆರವೇರಿಸಿದರು. ಶ್ರೀರಾಮ ಜನ್ಮಭೂಮಿ ಆಂದೋ ಲನಕ್ಕೆ ಅವಿರತ ಶ್ರಮಿಸಿದ ಗುರು ಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರವನ್ನಿಟ್ಟು ತುಲಸೀ ಅರ್ಪಿಸಿ ಗುರುಗಳಿಗೂ ಮಂಗಳಾರತಿ ಬೆಳಗಿ ಗೌರವ ಅರ್ಪಿಸಿದರು.

ಉಡುಪಿ: ವಿಶೇಷ ಪೂಜೆ
ಉಡುಪಿ ಶ್ರೀಕೃಷ್ಣ ಮಠ ಸಹಿತ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಸಂಭ್ರಮಾಚರಣೆ ನಡೆಯಿತು. ಪರ್ಯಾಯ ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. ಅಪರಾಹ್ನ 12.15ಕ್ಕೆ ಕೃಷ್ಣಮಠದ ಗೋಶಾಲೆಯ ಗೋವೊಂದು ಜನ್ಮನೀಡಿದ ಗಂಡು ಕರುವಿಗೆ “ರಾಮ’ ಎಂಬ ಹೆಸರನ್ನು ಇಡಲಾಯಿತು. ವಿಹಿಂಪ, ಬಜರಂಗದಳದ ಕಾರ್ಯ ಕರ್ತರು ಬಜರಂಗ ದಳದ ರಾಜ್ಯ ಸಂಚಾ ಲಕ ಸುನೀಲ್‌ ಕೆ.ಆರ್‌. ನೇತೃತ್ವದಲ್ಲಿ ಶ್ರೀಕೃಷ್ಣ ಮಠ, ಕನಕನ ಕಿಂಡಿ ಎದುರು, ರಥ ಬೀದಿಯಲ್ಲಿ ಭಜನೆಗಳನ್ನು ಹಾಡಿದರು.

ಟಾಪ್ ನ್ಯೂಸ್

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.