ಮಹಿಳೆಯರ ಆರೋಗ್ಯ ಚಿಕಿತ್ಸೆಗೆ “ಆಯುಷ್ಮತಿ ಕ್ಲಿನಿಕ್‌’

ದ.ಕ., ಉಡುಪಿಯಲ್ಲಿ ಇಂದು ಆರಂಭ

Team Udayavani, Mar 27, 2023, 6:40 AM IST

ಮಹಿಳೆಯರ ಆರೋಗ್ಯ ಚಿಕಿತ್ಸೆಗೆ “ಆಯುಷ್ಮತಿ ಕ್ಲಿನಿಕ್‌’

ಉಡುಪಿ: ಮಹಿಳೆಯರ ಆರೋಗ್ಯ ಚಿಕಿತ್ಸೆಗಾಗಿ ಆಯುಷ್ಮತಿ ಕ್ಲಿನಿಕ್‌ ರಾಜ್ಯಾದ್ಯಂತ ಆರಂಭಗೊಂಡಿದೆ.

ಮಹಿಳೆಯರಿಗೆ ತಮ್ಮ ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸಲು ಅವಕಾಶ ಕಲ್ಪಿಸುವುದು. ಹದಿಹರೆಯದ ಹೆಣ್ಣುಮಕ್ಕಳಿಗೆ ದೈಹಿಕ ಬದಲಾವಣೆ, ನೈರ್ಮಲ್ಯ ಮತ್ತು ಸಂತಾನೋತ್ಪತ್ತಿ ಕುರಿತು ಅರಿವು ಮೂಡಿಸುವುದು ಮತ್ತು ಆಪ್ತ ಸಮಾಲೋಚನೆ ನಡೆಸುವುದು. 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಅಸಾಂಕ್ರಾಮಿಕ ರೋಗಗಳ ತಪಾಸಣೆ ನಡೆಸುವುದು. ರೆಫ‌ರಲ್‌ ಸೇವೆ ಒದಗಿಸುವುದು ಈ ಆಯುಷ್ಮತಿ ಕ್ಲಿನಿಕ್‌ನ ಪ್ರಮುಖ ಉದ್ದೇಶವಾಗಿದೆ.

ಲಭ್ಯವಿರುವ ಸೇವೆಗಳು
ಕ್ಲಿನಿಕ್‌ನಲ್ಲಿ ಪ್ರತೀ ದಿನ ಒಬ್ಬ ತಜ್ಞ ವೈದ್ಯರ ಸೇವೆ ಲಭ್ಯವಿದೆ. ಸೋಮವಾರ ಫಿಸಿಶಿಯನ್‌, ಮಂಗಳವಾರ ಮೂಳೆ ಮತ್ತು ಕೀಲು ತಜ್ಞರು, ಬುಧವಾರ ಶಸ್ತ್ರಚಿಕಿತ್ಸಾ ತಜ್ಞರು, ಗುರುವಾರ ಮಕ್ಕಳ ತಜ್ಞರು, ಶುಕ್ರವಾರ ಸ್ತ್ರೀರೋಗ ತಜ್ಞರು, ಶನಿವಾರ ಇತರ ತಜ್ಞರು (ಕಿವಿ, ಮೂಗು, ಗಂಟಲು, ಚರ್ಮ, ನೇತ್ರ) ತಪಾಸಣೆ ನಡೆಸಲಿದ್ದಾರೆ. ಆಪ್ತ ಸಮಾಲೋಚನೆ ಕೂಡ ಲಭ್ಯವಿದ್ದು, ಋತುಚಕ್ರ ಸಂಬಂಧಿ ಹಾಗೂ ಋತುಚಕ್ರ ನೈರ್ಮಲ್ಯ, ಕುಟುಂಬ ಕಲ್ಯಾಣ ಯೋಜನೆಗಳು, ಅಸಾಂಕ್ರಾಮಿಕ ರೋಗಗಳು, ಸಂತಾನೋತ್ಪತ್ತಿ ಅಂಗಗಳ ಸೋಂಕು/ಲೈಂಗಿಕ ಸೋಂಕುಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು, ಹದಿಹರೆಯದ ಸಮಸ್ಯೆಗಳು, ಮುಟ್ಟು ನಿಲ್ಲುವ ಸಮಯದ ಸವåಸ್ಯೆಗಳು, ಪೌಷ್ಟಿಕಾಂಶದ ಕೊರತೆಗಳ ಬಗ್ಗೆ ವೈದ್ಯರಿಂದ ಸೂಕ್ತ ಸಲಹೆ ಸೂಚನೆಗಳನ್ನು ಪಡೆಯಬಹುದಾಗಿದೆ. ಲ್ಯಾಬ್‌ ಪರೀಕ್ಷೆಗಳ ಸೇವೆ ಮತ್ತು ಉಚಿತ ಔಷಧಗಳು ದೊರೆಯುತ್ತವೆ.

ಉಡುಪಿ: ಇಂದು ಉದ್ಘಾಟನೆ
ಮಾ. 27ರ ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿಯವರು, ಕೇಂದ್ರ ಮತ್ತು ರಾಜ್ಯದ ಆರೋಗ್ಯ ಸಚಿವರು ವರ್ಚುವಲ್‌ ಆಗಿ ಉದ್ಘಾಟಿಸಲಿದ್ದು, ಉಡುಪಿ ಅಲಂಕಾರ್‌ ಚಿತ್ರಮಂದಿರ ಬಳಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ಮತಿ ಕ್ಲಿನಿಕ್‌ನಲ್ಲಿ ಕಾರ್ಯಕ್ರಮ ನೇರ ಪ್ರಸಾರಗೊಳ್ಳಲಿದೆ. ಈ ಕ್ಲಿನಿಕ್‌ ಬೆಳಗ್ಗೆ 9ರಿಂದ ಸಂಜೆ 4.30ರ ವರೆಗೆ ತೆರೆದಿರುತ್ತದೆ.

ಮಂಗಳೂರಿನಲ್ಲಿ ನಾಲ್ಕು ಕ್ಲಿನಿಕ್‌
ಮಂಗಳೂರಿನಲ್ಲಿ ನಾಲ್ಕು ಆಯುಷ್ಮತಿ ಕ್ಲಿನಿಕ್‌ಗಳು ಆರಂಭಗೊಳ್ಳಲಿವೆ. ಪಡೀಲ್‌ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಉದ್ಘಾಟನೆ ನಡೆಯಲಿದ್ದು, ಮೇಯರ್‌ ಜಯಾನಂದ ಅಂಚನ್‌, ಉಪಮೇಯರ್‌ ಪೂರ್ಣಿಮಾ, ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌., ಸಿಇಒ ಡಾ| ಕುಮಾರ್‌, ಮನಪಾ ಆಯುಕ್ತ ಚನ್ನಬಸಪ್ಪ ಕೆ. ಭಾಗವಹಿಸಲಿದ್ದಾರೆ. ಜತೆಗೆ, ಬಂದರು, ಸುರತ್ಕಲ್‌, ಬಿಜೈ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮತಿ ಕ್ಲಿನಿಕ್‌ಗಳು ಕಾರ್ಯಾಚರಿಸಲಿವೆ. ಈ ಕ್ಲಿನಿಕ್‌ಗಳನ್ನು ಕ್ರಮಮವಾಗಿ ಎ.ಜೆ. ಆಸ್ಪತ್ರೆ, ಫಾದರ್‌ ಮುಲ್ಲರ್‌, ಮುಕ್ಕ ಶ್ರೀನಿವಾಸ ಆಸ್ಪತ್ರೆ ಮತ್ತು ಕೆ.ಎಂ.ಸಿ. ಆಸ್ಪತ್ರೆಗಳು ನಿರ್ವಹಿಸಲಿವೆ. ಪ್ರತೀ ದಿನ ಓರ್ವ ತಜ್ಞ ವೈದ್ಯರು ಕ್ಲಿನಿಕ್‌ನಲ್ಲಿ ಮಹಿಳೆಯರ ಆರೋಗ್ಯ ತಪಾಸಣೆ ಮಾಡಲಿದ್ದಾರೆ ಎಂದು ಡಿಎಚ್‌ಒ ಡಾ| ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಶುಲ್ಕ ನೀಡಲಾಗದೆ ತಜ್ಞ ವೈದ್ಯರ ಸೇವೆಯಿಂದ ವಂಚಿತರಾಗಿ ಸಾಕಷ್ಟು ಮಹಿಳೆಯರು ಮತ್ತು ಹದಿಹರೆಯದವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆಯುಷ್ಮತಿ ಕ್ಲಿನಿಕ್‌ಗಳಲ್ಲಿ ಮಹಿಳೆಯರು ಮತ್ತು ಹದಿ ಹರೆಯದವರಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ, ಆಪ್ತ ಸಮಾಲೋಚನೆಯೊಂದಿಗೆ ಅಗತ್ಯ ಔಷಧಗಳನ್ನು ಉಚಿತವಾಗಿ ನೀಡಲಾಗುವುದು.
-ಕೂರ್ಮಾರಾವ್‌ ಎಂ., ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.