ಬಿದಿರು ಬೆಳೆದರೆ 50 ಸಾವಿರ ರೂ. ಪ್ರೋತ್ಸಾಹ ಧನ

ರಾಷ್ಟ್ರೀಯ ಬಿದಿರು ಮಿಷನ್‌ ಯೋಜನೆಯಡಿ ಉತ್ತೇಜನ

Team Udayavani, Oct 15, 2020, 5:46 AM IST

ಕಾರ್ಕಳ: ಆರ್ಥಿಕ ಸಂಕಷ್ಟದ ಜತೆಗೆ ಉದ್ಯೋಗ ಸಮಸ್ಯೆಗೆ ಸಿಲುಕಿರುವ ಕೃಷಿಕರಿಗೆ ಕೇಂದ್ರ ಸರಕಾರ ರಾಷ್ಟ್ರೀಯ ಬಿದಿರು ಮಿಷನ್‌ ಯೋಜನೆಯಡಿ ಬಿದಿರು ಬೆಳೆಗೆ ಪ್ರೋತ್ಸಾಹ ನೀಡುತ್ತಿದ್ದು, ಕೃಷಿ ಪ್ರೋತ್ಸಾಹ ಯೋಜನೆಯಡಿ ಸಹಾಯ ಧನವನ್ನೂ ಒದಗಿಸುತ್ತಿದೆ.

ರಾಷ್ಟ್ರೀಯ ಬಿದಿರು ಮಿಷನ್‌ ಯೋಜನೆ ಯಡಿ 2010-21ನೇ ಸಾಲಿನಲ್ಲಿ ಕೇಂದ್ರ ಮತ್ತು ರಾಜ್ಯದ 60:40 ಅನುಪಾತದಲ್ಲಿ 2091.64 ರೂ. ಮೊತ್ತದ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುಮೋದನೆ ನೀಡಲಾಗಿದೆ. ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗಗಳಿಗೆ ಭೌತಿಕ ಮತ್ತು ಆರ್ಥಿಕ ಗುರಿ ಹಂಚಿಕೆ ಮಾಡಿದೆ.

ಪ್ರತಿ ಸಸಿಗೆ 120 ರೂ. ನಿರ್ವಹಣೆ ವೆಚ್ಚ
ಪ್ರತಿ ಸಸಿಗೆ 120 ರೂ. ನಿರ್ವಹಣೆ ಹಣವನ್ನು ಬದುಕುಳಿದ ಸಸಿಗಳ ಅಧಾರದ ಮೇಲೆ ರೈತರಿಗೆ ನೀಡಲಾಗುತ್ತದೆ. ಪ್ರತಿ ಹೆಕ್ಟೇರಿಗೆ 375ರಿಂದ 450 ಸಸಿಗಳನ್ನು ನೆಡುವುದು. ಇದರಲ್ಲಿ 260 ಸಸಿಗಳು ಟಿಶ್ಯೂ ಕಲ್ಚರ್‌ ಒರಿಜಿನ್‌ನಿಂದ ಶಿಫಾರಸು ಪಡೆದ ಸಸಿಗಳಾಗಿರಬೇಕು. ಉಳಿದ 140 ಸಸಿಗಳನ್ನು ಸ್ಥಳಿಯ ನರ್ಸರಿಗಳಿಂದ ಪಡೆಯಬೇಕಿದೆ.

2018ರಲ್ಲಿ ಮರು ಚಾಲನೆ
ಕೇಂದ್ರ ಸರಕಾರ 2018ರಲ್ಲಿ ರಾಜ್ಯಗಳ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಮಿಷನ್‌ಗೆ ಮರು ಚಾಲನೆ ನೀಡಿತ್ತು. ಬಿದಿರು ಬೆಳೆ ಯಲು ಪ್ರೋತ್ಸಾಹಿಸುವ ದೃಷ್ಟಿಯಿಂದ ಹಣ ಮೀಸಲಿಡುತ್ತ ಬಂದಿದೆ. ವಿವಿಧ ರಾಜ್ಯಗಳು ಬಿದಿರು ಬೆಳೆಸಲು ಯೋಜನೆಗಳನ್ನು ಪ್ರತಿ ವರ್ಷ ರೂಪಿಸುತ್ತಿವೆ. ಕುಂದಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಸುಮಾರು 1125 ಹೆಕ್ಟೇರ್‌ ಬಿದಿರು ಬೆಳೆಯಲು ಯೋಜನೆ ರೂಪಿಸಲಾಗಿದೆ.

2 ಹೆಕ್ಟೇರ್‌ ಭೂಮಿ ಮಿತಿ
ಬಿದಿರು ಬೆಳೆಯಲು ಯಾವುದೇ ಮಿತಿ ಇರುವುದಿಲ್ಲ. ಸಹಾಯಧನ ಪಡೆಯಲು 2 ಹೆಕ್ಟೇರ್‌ನ ಮಿತಿಯಿದೆ. ರೈತರು ಪಹಣಿಯಲ್ಲಿನ ಸರ್ವೆ ನಂಬರಿನ ಆಧಾರಿತ ಕನಿಷ್ಠ 400 ಬಿದಿರು ಸಸಿ ನೆಟ್ಟಲ್ಲಿ ಸಹಾಯಧನ ಸಿಗುತ್ತದೆ. ಒಂದೇ ಸ್ಥಳದಲ್ಲಿ ಅರಣ್ಯ ಕೃಷಿಯನ್ನಾಗಿ 1 ಎಕರೆ, ಅರ್ಧ ಎಕರೆ, ಎರಡು ಎಕರೆ ಹೀಗೆ ಎಷ್ಟೇ ಪ್ರದೇಶದಲ್ಲಿ ನಾಟಿ ಮಾಡಿಕೊಂಡಿದ್ದರೂ ಸಹಾಯಧನ ಸಿಗುತ್ತದೆ. 3 ವರ್ಷದಲ್ಲಿ 3 ಹಂತದಲ್ಲಿ ದೊರಕುತ್ತದೆ. ನಾಟಿ ಮಾಡಿದ ಗಿಡಗಳು ಶೇ. 100 ಬೆಳೆದಿರಬೇಕು. ಗಿಡಗಳು ಸತ್ತು ಹೋದಲ್ಲಿ ಅಥವಾ ಬೆಳವಣಿಗೆ ಆಗದೇ ಇದ್ದಲ್ಲಿ ಬದಲಿ ಗಿಡ ನಾಟಿ ಮಾಡಬೇಕಾಗುತ್ತದೆ.

ಸಾಮಾನ್ಯ ಬಳಕೆಯ ವಸ್ತು!
ಬಿದಿರು ಉತ್ಪನ್ನಗಳ ವಹಿವಾಟು ಹಳ್ಳಿಗಳಲ್ಲಿ ಅಧಿಕ. ಬಿದಿರಿನ ಸಲಾಕೆ, ಬಿದಿರಿನ ಪಕ್ಕಾಸು ಬಳಕೆ ಒಂದು ಕಾಲದಲ್ಲಿ ಸಾಮಾನ್ಯವಾಗಿತ್ತು. ಕಾಲ ಕ್ರಮೇಣ ಮರ ಬಳಕೆ, ತಾರಸಿ ಮನೆಗಳು ಬಂದುದರಿಂದ ಬಿದಿರಿನ ಮನೆಗಳು ಕಾಣೆಯಾಗತೊಡಗಿವೆ. ಕೆಲ ಕಡೆಗಳಲ್ಲಿ ಅಲಂಕಾರಿನ ಮನೆಗಳಿಗೆ ಬಿದಿರನ್ನು ಈಗಲೂ ಉಪಯೋಗಿಸಲಾಗುತ್ತಿದೆ. ಬಿದಿರು ಗುಡ್ಡಗಾಡುಗಳಲ್ಲಿ ಬೆಳೆಯುವ ನೈಸರ್ಗಿಕ ಬೆಳೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿದಿರು ಕಾಣಲು ಸಾಧ್ಯ.

ಅರ್ಜಿ ಸಲ್ಲಿಸುವ ವಿಧಾನ
ಬಿದಿರು ಬೆಳೆಯಲು ಇಚ್ಛಿಸುವ ರೈತರು ಆನ್‌ಲೈನ್‌ನ ಮೂಲಕ ಅರ್ಜಿ ಹಾಕಬೇಕು. ಆನ್‌ಲೈನ್‌ ಅರ್ಜಿ ಖಾತರಿಪಡಿಸಿಕೊಂಡ ಬಳಿಕ ಲಿಖೀತ ಅರ್ಜಿಯನ್ನು ಹೆಸರು, ವಿಳಾಸ, ಸರ್ವೇ ನಂಬರ್‌, ವಿಸ್ತೀರ್ಣ, ವೈಯಕ್ತಿಕ ಬ್ಯಾಂಕ್‌ ಖಾತೆ ಸಹಿತ ಅಗತ್ಯ ವಿವರಗಳ ದಾಖಲೆ ಗಳೊಂದಿಗೆ ತಾ| ಅರಣ್ಯಾಧಿಕಾರಿ ಗಳಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿದ ಬಿದಿರು ಆಕರ್ಷಣೆ
ವಿನಾಶದ ಅಂಚಿನಲ್ಲಿರುವ ಬಿದಿರನ್ನು ಉಳಿಸುವ ನಿಟ್ಟಿನಲ್ಲಿ ಸರಕಾರ ಅರಣ್ಯ ಇಲಾಖೆ ಮೂಲಕ ಪ್ರಯತ್ನ ನಡೆಸುತ್ತಿದೆ. ಉದ್ಯೋಗ ಸೃಷ್ಟಿಗೂ ಕಾರಣವಾಗಿದೆ. ಕೇರಳ, ತಮಿಳುನಾಡು, ಮಹಾರಾಷ್ಟ್ರ ದಲ್ಲಿ ಹೆಚ್ಚು ಕೃಷಿಕರು ಇದರ ಪ್ರಯೋ ಜನವನ್ನು ಪಡೆದು ಕೊಂಡಿ¨ªಾರೆ. ಕರಾವಳಿ ಕೃಷಿಕರು ಬಿದಿರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ ಎನ್ನುತ್ತಿದ್ದಾರೆ ಅಧಿಕಾರಿಗಳು.

ಅಂಕಿಅಂಶ
ಗರಿಷ್ಠ ಸಸಿಗಳು- 375ರಿಂದ 450
ಅವಧಿ-3ವರ್ಷ
ಪ್ರತಿ ಹೆಕ್ಟೇರಿಗೆ
ಒಟ್ಟು ಸಹಾಯಧನ-50 ಸಾವಿರ ರೂ.
ಮೊದಲ ವರ್ಷ-25 ಸಾವಿರ ರೂ.
ಎರಡನೇ ವರ್ಷ-15 ಸಾವಿರ ರೂ.
ಮೂರನೇ ವರ್ಷ-10 ಸಾವಿರ ರೂ.
ಅನ್‌ಲೈನ್‌ ವಿಳಾಸ- www.nbm.nic.in

ಆರ್ಥಿಕ ಸುಧಾರಣೆ
ಬಿದಿರು ಬೇಸಾಯಕ್ಕೆ ಸರಕಾರ ಅರಣ್ಯ ಇಲಾಖೆ ಮೂಲಕ ಪ್ರೋತ್ಸಾಹ ನೀಡುತ್ತಿದೆ. ಕ್ರಷಿ ಭೂಮಿ ಹೊಂದಿದ ಆಸಕ್ತಿವುಳ್ಳ ಕೃಷಿಕರು ಇದರ ಸದುಪಯೋಪ ಪಡೆದು ಕೊಳ್ಳಬಹುದು. ಬಿದಿರಿ ನಿಂದ ಆರ್ಥಿಕ ಸುಧಾರಣೆ ಸಾಧ್ಯವಿದೆ.
-ವಾರಿಜಾಕ್ಷಿ, ವಲಯ ಅರಣ್ಯಾಧಿಕಾರಿ, ಸಾಮಾಜಿಕ ಅರಣ್ಯ ಕಾರ್ಕಳ ವಿಭಾಗ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.