ಬೇಕರಿ ಉದ್ಯಮಕ್ಕೆ ಕಾರ್ಮಿಕರ ಕೊರತೆ; ತಾಜಾ ಉತ್ಪನ್ನಕ್ಕೆ ಬೇಡಿಕೆ


Team Udayavani, Apr 11, 2020, 5:25 PM IST

ಬೇಕರಿ ಉದ್ಯಮಕ್ಕೆ ಕಾರ್ಮಿಕರ ಕೊರತೆ; ತಾಜಾ ಉತ್ಪನ್ನಕ್ಕೆ ಬೇಡಿಕೆ

ಉಡುಪಿ: ಬೇಕರಿ ಅಂಗಡಿ ತೆರೆಯಬೇಕು ಎನ್ನುವ ಸರಕಾರದ ನಿರ್ಧಾರಕ್ಕೆ ಕೋವಿಡ್ 19 ಸಾಕಷ್ಟು ಪೆಟ್ಟು ನೀಡಿದೆ. ಕಾರ್ಮಿಕರಿಲ್ಲದ ಕಡೆಗಳ ಬೇಕರಿ ಅಂಗಡಿಗಳು ತೆರೆದಿದ್ದರೂ ತಾಜಾ ತಿಂಡಿಗಳ ಕೊರತೆ ಎದುರಾಗಿದೆ.

ಲಕ್ಷಗಟ್ಟಲೆ ನಷ್ಟ
ನಗರದಲ್ಲಿ ಸುಮಾರು 35ಕ್ಕೂ ಅಧಿಕ ಬೇಕರಿ, ಕ್ಯಾಂಡಿಮೆಂಟ್‌ ಅಂಗಡಿಗಳು ಇವೆ. ಬೇಕರಿಗೆ ಅಂಗಡಿಗಳ ತೆರವಿಗೆ ಸರಕಾರ ಅನುಮತಿ ನೀಡಿ ಮೂರು ದಿನಗಳಾಗಿವೆ. ಬಹುತೇಕ ಬೇಕರಿ ಅಂಗಡಿಗಳು ತೆರೆದಿದ್ದರೂ ಅಂಗಡಿಗಳು ತೆರೆದಿಲ್ಲ. ರಾತ್ರಿ ಬೆಳಗಾಗುವುದರೊಳಗೆ ಲಾಕ್‌ಡೌನ್‌ ಜಾರಿಯಾದ್ದರಿಂದ ಉತ್ಪನ್ನಗಳು ಮಾರಾಟವಾಗದೆ ಲಕ್ಷಗಟ್ಟಲೆ ನಷ್ಟ ಅನುಭವಿಸುವಂತಾಗಿದೆ.

ವ್ಯಾಪಾರವಿಲ್ಲ
ಬೇಕರಿ ಅಂಗಡಿಗಳ ಮಾಲಕರ ಪ್ರಕಾರ ವ್ಯಾಪಾರವು ನಗರ, ಪಟ್ಟಣ ಪ್ರದೇಶಕ್ಕಿಂತ ಹಳ್ಳಿಯ ಗ್ರಾಹಕರನ್ನೇ ನೆಚ್ಚಿಕೊಂಡಿದೆ. ಸಾರಿಗೆ ವ್ಯವಸ್ಥೆ ಬಂದ್‌ ಆದ್ದರಿಂದ ಪ್ರಯಾಣಿಕರೂ ಇಲ್ಲದೆ ಬೇಕರಿ ವ್ಯಾಪಾರ ಕಷ್ಟ ಎನ್ನುವ ಅಭಿಮತ ವ್ಯಕ್ತವಾಗಿದೆ. ಸಾಮಾನ್ಯ ದಿನಗಳಲ್ಲಿ ಸಣ್ಣ ಬೇಕರಿ ಯಾದರೂ ದಿನಕ್ಕೆ 25 ರಿಂದ 30 ಕೆ.ಜಿ. ಮೈದಾ, ಅದಕ್ಕೆ ತಕ್ಕಂತೆ ಸಕ್ಕರೆ ಜತೆಗೆ ಪೂರಕವಾದ ಸಾಮಗ್ರಿ ಬೇಕೇ ಬೇಕು.

ಬೆಳಗ್ಗೆ ತಿಂಡಿಗಳನ್ನು ಸಿದ್ಧಪಡಿಸಿದರೂ ಅವುಗಳು ಮಾರಾಟಕ್ಕೆ ಸಿಗುವುದು ಮಧ್ಯಾಹ್ನ 12ರ ಮೇಲೆಯೇ. ಇವುಗಳು ರಾತ್ರಿ 10ರೊಳಗೆ ಮಾರಾಟವಾಗದಿದ್ದಲ್ಲಿ ಕೆಡುವ ಸಾಧ್ಯತೆಗಳೇ ಹೆಚ್ಚು. ಸದ್ಯದ ಪರಿಸ್ಥಿತಿಯಲ್ಲಿ ಬೆಳಗ್ಗೆ ಮತ್ತು ಸಂಜೆ ಮೂರ್ನಾಲ್ಕು ಗಂಟೆಗಳ ವ್ಯಾಪಾರಕ್ಕೆ ಈ ಬೇಕರಿ ಐಟಂ ಪ್ರಮಾಣ ಹೆಚ್ಚಿರುತ್ತದೆ.

ಕಾರ್ಮಿಕರ ಕೊರತೆ
ತಿನಿಸುಗಳನ್ನು ಸಿದ್ಧಪಡಿಸಲು ಕಾರ್ಮಿಕರು ಬೇಕೆ ಬೇಕು. ಸದ್ಯದ ಪರಿಸ್ಥಿತಿಯಲ್ಲಿ ಅವರೂ ಬರುತ್ತಿಲ್ಲ. ಸರಕಾರ ಕಿಟ್‌ಗಳನ್ನು ನೀಡುತ್ತಿರುವುದರಿಂದ ದುಡಿಯುವ ಅಗತ್ಯವೂ ಇಲ್ಲ. ಆದ್ದರಿಂದ ಅಂಗಡಿ ತೆರೆಯಲು ತೊಂದರೆಯಾಗುತ್ತಿದೆ ಎನ್ನುತ್ತಾರೆ ಮಾಲಕರು.

ಕಟ್ಟುನಿಟ್ಟು
ಲಾಕ್‌ಡೌನ್‌ ವೇಳೆ ಬೆಳಗ್ಗೆ 7ರಿಂದ 11ರ ತನಕ ಮಾತ್ರ ಬೇಕರಿ ಅಂಗಡಿ ತೆರೆದಿರುತ್ತದೆ. ಈ ಸಂದರ್ಭ ಮಾರ್ಗಸೂಚಿಗಳ ಬಗ್ಗೆ ಕಟ್ಟುನಿಟ್ಟಿನ ಆದೇಶವಿದೆ. ಸುರಕ್ಷತೆ ಕ್ರಮ ಅನುಸರಿಸಬೇಕು. ಇವೆಲ್ಲ ಕಿರಿಕಿರಿಯಿಂದ ಪಾರಾಗಲು ಲಾಕ್‌ಡೌನ್‌ ಮುಗಿಯುವ ಎ.14 ರ ತನಕ ಕಾದು, ಅನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲು ಕೆಲ ಬೇಕರಿ ಮಾಲಕರು ನಿರ್ಧರಿಸಿದ್ದಾರೆ.

ಅಡಚಣೆ
ಗ್ರಾಹಕರು ತಾಜಾ ತಿಂಡಿಗಳನ್ನೇ ಕೇಳುತ್ತಿದ್ದಾರೆ. ಕಾರ್ಮಿಕರ ಕೊರತೆಯಿಂದ ತಿಂಡಿಗಳನ್ನು ತಯಾರಿಸಲು ಅಡಚಣೆಯಾಗುತ್ತಿದೆ. ಹೀಗಾಗಿ ವ್ಯಾಪಾರ ನಿರೀಕ್ಷಿತವಾಗಿ ನಡೆಯುತ್ತಿಲ್ಲ.
-ಗಿರಿಧರ, ಬೇಕರಿ ಮಾಲಕರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.