ಕಾಪು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿಯ ಶಶಿಪ್ರಭಾ ಅವಿರೋಧ ಆಯ್ಕೆ
ಉಪಾಧ್ಯಕ್ಷರಾಗಿ ಕಾಂಗ್ರೆಸ್ ನ ಯು.ಸಿ ಶೇಖಬ್ಬ ಆಯ್ಕೆ
Team Udayavani, Nov 3, 2020, 11:39 AM IST
ಕಾಪು: ನೂತನ ಕಾಪು ತಾಲೂಕು ಪಂಚಾಯತ್ ಪ್ರಥಮ ಅಧ್ಯಕ್ಷರಾಗಿ ಬಿಜೆಪಿಯ ಶಶಿಪ್ರಭಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯು.ಸಿ ಶೇಖಬ್ಬ ಉಚ್ಚಿಲ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.
ಆಗಸ್ಟ್ 10 ರಂದು ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಹೈಕೋರ್ಟ್ ತಡೆಯಾಜ್ಞೆ ಹಿನ್ನೆಲೆ ಫಲಿತಾಂಶ ಘೋಷಿಸದಂತೆ ತಡೆಹಿಡಿಯಲಾಗಿತ್ತು.ಅಕ್ಟೋಬರ್ 20 ಹೈಕೋರ್ಟ್ ಅದೇಶದಂತೆ ಚುನಾವಣಾ ಕುಂದಾಪುರ ಉಪ ವಭಾಗ ಅಧಿಕಾರಿ ರಾಜು ಕೆ. ಅವರು ಮಂಗಳವಾರ ಫಲಿತಾಂಶ ಘೋಷಣೆ ಮಾಡಿದರು
ಸರ್ಕಾರದ ಅಧಿಸೂಚನೆಯಂತೆ ಉಡುಪಿ ತಾಪಂ ನಿಂದ ಪ್ರತ್ಯೇಕವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ 7 ಹಾಗೂ ಬಿಜೆಪಿ 5 ಸದಸ್ಯರು ಸೇರಿ 12 ಸದಸ್ಯ ಬಲದ ತಾಪಂ ನ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಮಹಿಳೆಗೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಅದರಂತೆ ಬಿಜೆಪಿಯ ಏಕ ಮಾತ್ರ ಅಭ್ಯರ್ಥಿ ಶಶಿಪ್ರಭಾ ಶೆಟ್ಟಿ ಆಯ್ಕೆ ಖಚಿತವಾಗಿತ್ತು.
ಈ ನಡುವೆ ಹಿಂದುಳಿದ ವರ್ಗ ಅ ಮಹಿಳೆ ಅಭ್ಯರ್ಥಿ ಇಲ್ಲದ ಪಕ್ಷದಲ್ಲಿ ಬಿ ಮಹಿಳೆ ಅಭ್ಯರ್ಥಿ ಆಯ್ಕೆಗೆ ಅವಕಾಶವಿದೆ ಎಂಬ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಅವರ ನೊಟೀಸ್ ನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡಾ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ನೋಟೀಸ್ ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಹೈಕೋರ್ಟ್ ಮೆಟ್ಟಿಲೇರಿದೆ.
ಸದ್ರಿ ಮೀಸಲಿನಂತೆ ತಾಲೂಕು ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಶಶಿಪ್ರಭಾ ಶೆಟ್ಟಿ ಮತ್ತು ಕಾಂಗ್ರೆಸ್ ನಿಂದ ರೇಣುಕಾ ಪುತ್ರನ್, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಕೇಶವ ಮೊಯ್ಲಿ, ಕಾಂಗ್ರೆಸ್ ನಿಂದ ಯು. ಸಿ. ಶೇಖಬ್ಬ ಅವರು ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ರೇಣುಕಾ ಪುತ್ರನ್ ರವರ ನಾಮಪತ್ರ ತಿರಸ್ಕೃತವಾಗಿತ್ತು.ಅಧ್ಯಕ್ಷ ಸ್ಥಾನಕ್ಕೆ ಶಶಿಪ್ರಭಾ ಏಕಮಾತ್ರ ಅಭ್ಯರ್ಥಿಯಾಗಿ ಉಳಿದಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಯು.ಸಿ ಶೇಖಬ್ಬ ಹಾಗು ಕೇಶವ ಮೊಯ್ಲಿ ಕಣದಲ್ಲಿದ್ದರು. ಯು.ಸಿ ಶೇಖಬ್ಬ 7 ಮತಗಳನ್ನು ಪಡೆದರೆ ಕೇಶವ ಮೊಯ್ಲಿ 5 ಮತಗಳನ್ನು ಪಡಿದಿದ್ದಾರೆ.
ಶಾಸಕ ಲಾಲಾಜಿ ಆರ್ ಮೆಂಡನ್, ತಹಶಿಲ್ದಾರ್ ಮುಹಮ್ಮದ್ ಇಸಾಖ್, ಮುಖ್ಯಾಧಿಕಾರಿ ವೆಂಕಟೇಶ ನಾವಡ, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಯೋಜನ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ ಮಲ್ಲಾರ್, ತಾ.ಪಂ ಕಾರ್ಯ ನಿರ್ವಾಹಣ ಅಧಿಕಾರಿ ವಿವೇಕಾನಂದ ಗಾವ್ಕರ್,ಜಿ.ಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಜಿ.ಪಂ ಶಿಲ್ಪಾ ಸುವರ್ಣ ಹಾಗು ಪ್ರಮುಖರು ಉಪಸ್ಥಿತರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..