ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಕುತ್ಯಾರಿನಲ್ಲಿ ರಕ್ತದಾನ ಶಿಬಿರ
Team Udayavani, Jun 21, 2020, 5:17 PM IST
ಶಿರ್ವ: ಕೋವಿಡ್-19 ಮಾಹಾಮಾರಿಯ ಸಂದರ್ಭದಲ್ಲಿ ರಕ್ತದ ತುರ್ತು ಅವಶ್ಯಕತೆ ಇರುವುದರಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಕುತ್ಯಾರಿನಲ್ಲಿ ರಕ್ತದಾನ ಶಿಬಿರ ನಡೆಯಿತು.
ಕುತ್ಯಾರು ಸಾಯಿ ರಿಕ್ರಿಯೇಷನ್ ಕ್ಲಬ್ ಆವರಣದಲ್ಲಿ ಇಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನದ ತನಕ ರಕ್ತದಾನ ಶಿಬಿರ ನಡೆಯಿತು. ಶಿರ್ವ, ಕುತ್ಯಾರು,ಪಿಲಾರು, ಸಾಂತೂರು, ಮುದರಂಗಡಿ ಪರಿಸರದ ನಾಗರಿಕರು ಶಿಬಿರದಲ್ಲಿ ಪಾಲ್ಗೊಂಡರು.
ವೇ.ಮೂ ಕೇಂಜ ಶ್ರೀಧರ ತಂತ್ರಿಗಳು, ಶಿರ್ವ ಠಾಣಾಧಿಕಾರಿ ಶ್ರೀಶೈಲ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕತ್ಯಾರು ನವೀನ್ ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಗ್ರಾ.ಪಂ ಅಧ್ಯಕ್ಷ ಧೀರಜ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಮೈಕೆಲ್ ಡಿಸೋಜಾ ಮುಂತಾದವರು ಉಪಸ್ಥಿತರಿದ್ದರು.