ಮಲ್ಪೆಯಲ್ಲಿ ಬೋಟ್ ಮುಳುಗಡೆ; 7 ಮೀನುಗಾರರ ರಕ್ಷಣೆ, 80 ಲಕ್ಷ ರೂ. ನಷ್ಟ
Team Udayavani, Aug 24, 2020, 10:37 PM IST
ಮಲ್ಪೆ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟೊಂದು ಮಲ್ಪೆ ಬಂದರಿನಿಂದ ಸುಮಾರು 2.22 ನಾಟಿಕಲ್ ಮೈಲು ದೂರದಲ್ಲಿ ಬಂಡೆಗೆ ಢಿಕ್ಕಿ ಹೊಡೆದು ಮುಳುಗಿರುವ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ. ಬೋಟಿನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಉದ್ಯಾವರ ಪಿತ್ರೋಡಿಯ ಗಿರೀಶ್ ಸುವರ್ಣ ಅವರಿಗೆ ಸೇರಿದ ಬಾಹುಬಲಿ ಬೋಟ್ ಸೋಮವಾರ ಮುಂಜಾನೆ 3.30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. 5.30ರ ವೇಳೆಗೆ ಬಂದರಿನಿಂದ 2.22 ನಾಟಿಕಲ್ ದೂರ ತಲುಪಿದಾಗ ಅಲೆಗಳ ಅಬ್ಬರಕ್ಕೆ ಬೋಟು ನಿಯಂತ್ರಣ ಕಳೆದುಕೊಂಡು ಬಂಡೆಕಲ್ಲಿಗೆ ಢಿಕ್ಕಿ ಹೊಡೆಯಿತು. ಬೋಟಿನ ತಳಭಾಗ ಜಖಂಗೊಂಡು ಎಂಜಿನ್ ಕೊಠಡಿಯೊಳಗೆ ನೀರು ಹೊಕ್ಕು ಮುಳುಗಲಾರಂಭಿಸಿತು.
ತತ್ಕ್ಷಣ ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತವಕಲ್ ಬೋಟಿನವರು ಧಾವಿಸಿ ಬಂದು ಎಲ್ಲ ಮೀನುಗಾರರನ್ನು ರಕ್ಷಿಸಿದರೂ ಮುಳುಗುತ್ತಿದ್ದ ಬೋಟನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಬೋಟಿನಲ್ಲಿದ್ದ ಡೀಸೆಲ್, ಬಲೆ ಮಂಜುಗಡ್ಡೆ ಸೇರಿ 80 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ