ಪೂರ್ಣವಾಗದ ಅನುಮೋದಿತ ಬಿಪಿಎಲ್‌ ಅರ್ಜಿ ವಿಲೇ!


Team Udayavani, Mar 1, 2023, 7:50 AM IST

ಪೂರ್ಣವಾಗದ ಅನುಮೋದಿತ ಬಿಪಿಎಲ್‌ ಅರ್ಜಿ ವಿಲೇ!

ಉಡುಪಿ: ಅರ್ಹ ಫ‌ಲಾನುಭವಿಗಳಿಗೆ ಆದ್ಯತ ಪಡಿತರ ಚೀಟಿ (ಬಿಪಿಎಲ್‌ ಕಾರ್ಡ್‌) ವಿತರಣೆ ಪ್ರಕ್ರಿಯೆ ಆರಂಭವಾಗಿದ್ದು, ಹೊಸದಾಗಿ 2,921 ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ಒದಗಿಸಲಾಗಿದೆ. 1,446 ಕುಟುಂಬಗಳಿಗೆ ಕಾರ್ಡ್‌ ನೀಡಲು ಬಾಕಿಯಿದೆ.

ಉಡುಪಿ ಜಿಲ್ಲೆಯ 7 ತಾಲೂಕುಗಳಿಂದ ಹೊಸದಾಗಿ ಬಿಪಿಎಲ್‌ ಕಾರ್ಡ್‌ಗಳಿಗೆ 11,151 ಕುಟುಂಬಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಅದರಲ್ಲಿ 10,465 ಕುಟುಂಬ ಬಿಪಿಎಲ್‌ ಕಾರ್ಡ್‌ ಪಡೆಯಲು ಅರ್ಹವಿದೆ ಎಂಬುದನ್ನು ಪರಿಶೀಲನೆ ವೇಳೆ ಖಾತರಿಪಡಿಸಲಾಗಿತ್ತು. ಆದರೆ ಇದರಲ್ಲಿ 4,367 ಕುಟುಂಬಗಳಿಗೆ ಮಾತ್ರ ಕಾರ್ಡ್‌ ಹಂಚಿಕೆಗೆ ಸರಕಾರ ಅನುಮೋದನೆ ನೀಡಿದೆ. 6,098 ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಲು ಸರಕಾರ ಇನ್ನೂ ಆದೇಶ ನೀಡಿಲ್ಲ. ಸರಕಾರ ಒಪ್ಪಿಗೆ ಸೂಚಿಸಿರುವ 4,367 ಕುಟುಂಬಗಳಲ್ಲಿ 1,446 ಕುಟುಂಬಗಳಿಗೆ ಇನ್ನೂ ಕಾರ್ಡ್‌ ಹಂಚಿಕೆ ಅಧಿಕಾರಿಗಳಿಂದ ಸಾಧ್ಯವಾಗಿಲ್ಲ.

ದ.ಕ. ಜಿಲ್ಲೆಯ 9 ಕಂದಾಯ ತಾಲೂಕುಗಳಿಂದ 15,464 ಅರ್ಜಿ ಬಂದಿದ್ದು, 14,739 ಖಾತರಿಪಡಿಸಿ, 725 ತಿರಸ್ಕರಿಸಲಾಗಿದೆ. ಈವರೆಗೆ 9,979 ಕುಟುಂಬಗಳಿಗೆ ಕಾರ್ಡ್‌ ವಿತರಿಸಲಾಗಿದ್ದು, 4,760 ಹಂಚಿಕೆಗೆ ಬಾಕಿಯಿದೆ.

ನಿಯಮ
ಒಂದು ಜಿಲ್ಲೆಯಲ್ಲಿ ನಿರ್ದಿಷ್ಟ ಪ್ರಮಾಣದಷ್ಟು ಬಿಪಿಎಲ್‌ ಕಾರ್ಡ್‌ ಮಾತ್ರ ಇರಬೇಕು ಎಂಬ ನಿಯಮವಿದೆ. ಶೇ. 100ರಷ್ಟು ಜನಸಂಖ್ಯೆಯಲ್ಲಿ ಎಲ್ಲರಿಗೂ ಬಿಪಿಎಲ್‌ ಕಾರ್ಡ್‌ ನೀಡಲು ಸಾಧ್ಯವಿಲ್ಲ. ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಿದವರಲ್ಲಿ ಎಲ್ಲರೂ ಅರ್ಹರಿದ್ದರೂ ನಿರ್ದಿಷ್ಟ ಪ್ರಮಾಣ ಮೀರದಂತೆ ಅದರಲ್ಲಿ ಹಂತಹಂತವಾಗಿ ವಿತರಣೆ ಮಾಡಲಾಗುತ್ತದೆ. ಹೀಗಾಗಿ ಉಭಯ ಜಿಲ್ಲೆಯಲ್ಲಿ 25,104 ಕುಟುಂಬಗಳು ಅರ್ಹವಿದ್ದರೂ 14,346 ಕುಟುಂಬಗಳಿಗೆ ಮಾತ್ರ ವಿತರಣೆಗೆ ಸರಕಾರ ಅನುಮೋದನೆ ನೀಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ರಾತ್ರಿ ಪಾಳಿ ಇದ್ದಂತೆ
ಬಿಪಿಎಲ್‌ ಕಾರ್ಡ್‌ ಕೋರಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, ಅದನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗುತ್ತದೆ. ಜಿಲ್ಲೆಯಿಂದ ರಾಜ್ಯಕ್ಕೆ ಕಳುಹಿಸಿ, ರಾಜ್ಯದಿಂದ ಅನುಮೋದನೆ ಪಡೆದು ಹಂಚಿಕೆ ಮಾಡಲಾಗುತ್ತದೆ. ಹಂಚಿಕೆ ಮಾಡುವ ಪ್ರಕ್ರಿಯೆಯು ಆಹಾರ ನಿರೀಕ್ಷಕರ ಮೂಲಕ ಮಾಡಲಾಗುತ್ತದೆ. ಆನ್‌ಲೈನ್‌ ಮೂಲಕವೇ ಪ್ರಕ್ರಿಯೆ ನಡೆಯುವುದರಿಂದ ಇದರ ಲಿಂಕ್‌ ತೆರೆದುಕೊಳ್ಳುವುದೇ ಸಂಜೆ 5ರ ಅನಂತರ ಮತ್ತು ರಾತ್ರಿ 8ಕ್ಕೆ ಕ್ಲೋಸ್‌ ಆಗುತ್ತದೆ. ಈ ಅವಧಿಯೊಳಗೆ ಆಹಾರ ನಿರೀಕ್ಷಕರು ಲಾಗಿನ್‌ ಆಗಿ ಅನುಮೋದನೆ ನೀಡಬೇಕು. ಇದೊಂದು ರೀತಿಯಲ್ಲಿ ರಾತ್ರಿ ಪಾಳಿಯಿದ್ದಂತೆ ಎಂದು ಆಹಾರ ನಿರೀಕ್ಷಕರು ಹೇಳುತ್ತಿದ್ದಾರೆ.

15 ದಿನ ಮಾತ್ರ ಅವಕಾಶ
ಅನುಮೋದಿತ ಅರ್ಜಿಗಳನ್ನು ಅಂಗೀಕರಿಸಿಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಯಿಂದ ತಿಂಗಳು ಪೂರ್ತಿ ಅವಕಾಶ ನೀಡುವುದಿಲ್ಲ. ಬದಲಾಗಿ ಪ್ರತೀ ತಿಂಗಳ ಅಥವಾ ಎರಡು ಮೂರು ತಿಂಗಳಿಗೆ ಒಮ್ಮೆ 15 ದಿನಗಳ ಅವಕಾಶ ಮಾತ್ರ ನೀಡಲಾಗುತ್ತದೆ. ಈ ಅವಧಿಯಲ್ಲೇ ಅನುಮೋದನೆಯನ್ನು ಆಹಾರ ನಿರೀಕ್ಷಕರು ನೀಡಬೇಕಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಸಮಯ ನೀಡುವುದಿಲ್ಲ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.