ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ಇದೀಗ ಮತ್ತೊಮ್ಮೆ ಭಗವದ್ಭಕ್ತರ ಗಮನವನ್ನು ಸೆಳೆಯುತ್ತಿರುವ ಶ್ರೀ ಕ್ಷೇತ್ರ

Team Udayavani, Mar 24, 2023, 6:25 PM IST

1-ewr-ew-rwer

ಅಲ್ಲಿರುವುದು ಕೃಷಿಯಾಧಾರಿತ ಭೂಮಿ, ಅದು ದೇವ ಭೂಮಿ, ಹಸಿರು ಉಡುಗೆ ತೊಟ್ಟು ನಿಂತಿರುವ ಭೂಮಾತೆಯ ಗರ್ಭದಲ್ಲಿ ಅದೆಷ್ಟೋ ಕಾಲವಿದ್ದ ಶ್ರೀ ಉಮಾಮಹೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನಗಳು ದೈವ ಪ್ರೇರಣೆಯಂತೆ ಸುಮಾರು 25 ವರ್ಷಗಳ ಹಿಂದೆ ಜೀರ್ಣೋದ್ಧಾರಗೊಂಡು ಇಂದು ಸಾವಿರಾರು ಭಕ್ತರನ್ನು ತನ್ನೆಡೆಗೆ ಸೆಳೆಯುತ್ತಿರುವುದರ ಹಿನ್ನೆಲೆಯೂ ರೋಚಕವಾಗಿದೆ. ಹೌದು ಭಕ್ತರೇ ನಾವು ನಿಮಗೆ ಹೇಳಲು ಹೊರಟಿರುವುದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಅಡಪಾಡಿ ಕೋಡಿ ಎಂಬಲ್ಲಿನ ಗ್ರಾಮೀಣ ಪ್ರಕೃತಿಯ ಮಡಿಲಲ್ಲಿರುವ ದೇವಸ್ಥಾನದ ಬಗ್ಗೆ ಶ್ರೀ ಉಮಾಮಹೇಶ್ವರ ದುರ್ಗಾಪರಮೇಶ್ವರಿ ಪ್ರಧಾನ ದೇವರುಗಳ ಜೊತೆಗೆ ಸುಮಾರು 36 ಪರಿವಾರ ಶಕ್ತಿಗಳನ್ನು ಹೊಂದಿರುವ ಈ ಕ್ಷೇತ್ರ ಇದೀಗ ಮತ್ತೊಮ್ಮೆ ಭಗವದ್ಭಕ್ತರ ಗಮನವನ್ನು ಸೆಳೆಯುತ್ತಿದೆ.

ಇಲ್ಲಿಯ ವೈಶಿಷ್ಟ್ಯವೇನೆಂದರೆ ಎಲ್ಲಾ ವರ್ಗದ ಭಕ್ತರು ಇಲ್ಲಿ ವಿಶೇಷ ಹರಕೆ ಹೊತ್ತು ತಮ್ಮ ಮನದ ಕೋರಿಕೆಗಳನ್ನು ಈಡೇರಿಸಿಕೊಂಡು ನೆಮ್ಮದಿಯಿಂದ ಬಾಳುವುದು ಹಾಗೂ ಈ ಕ್ಷೇತ್ರದಲ್ಲಿ ವಿಶ್ವಾಸವನ್ನಿಟ್ಟುಕೊಂಡು ಪ್ರತಿ ವಿಶೇಷ ಆಚರಣೆಗಳಲ್ಲಿ ಪಾಲ್ಗೊಳ್ಳುತ್ತಾ ಬಂದಿರುವುದು. ದೇವಸ್ಥಾನದಲ್ಲಿ ಪ್ರತಿ ವರ್ಷವೂ ನವರಾತ್ರಿಯ ಹತ್ತು ದಿನಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ಚಂಡಿಕಾ ಹವನಗಳು ಜರುಗುತ್ತದೆ. ಈ ಕಾಲದಲ್ಲಿ ಹರಕೆ ಪೂಜೆಗಳೇ ಜಾಸ್ತಿಯಾಗಿರುತ್ತದೆ. ಭಾದ್ರಪದ ಗಣೇಶೋತ್ಸವವು ವಿಜೃಂಭಣೆಯಿಂದ ಸಾಗುತ್ತದೆ. ವಿಶೇಷವಾಗಿ ಶಿವರಾತ್ರಿಯ ಪರ್ವಕಾಲದಲ್ಲಿ ಶ್ರೀ ಕ್ಷೇತ್ರದಲ್ಲಿ ಮೂರು ದಿನಗಳ ಉತ್ಸವ ಹಾಗೂ ಪರಿವಾರ ಧರ್ಮದೈವಗಳಿಗೆ ಧರ್ಮ ನೇಮೋತ್ಸವವು ವಿಜೃಂಭಣೆಯಿಂದ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯುತ್ತದೆ.

ಅಂದಾಜು 500ಕ್ಕಿಂತಲೂ ಹೆಚ್ಚು ವರ್ಷಗಳ ಹಿಂದೆ ಅಡಪ್ಪ ಎಂಬ ತೌಳವ ಜೈನ ಅರಸನ ಆಳ್ವಿಕೆಯ ಕಾಲದ ನಂತರ ಕಾರಣಾಂತರಗಳಿಂದ ಭೂಗರ್ಭದಲ್ಲಿ ಅಡಗಿ ಹೋಗಿದ್ದ ತುಳುನಾಡಿನಲ್ಲಿ ವೈಶಿಷ್ಟ್ಯವಾಗಿ ಆರಾಧನೆಗೊಂಡು ಬಂದಿರುವ ಆಲಡೆ, ದೈವ ಪ್ರೇರಣೆಯಂತೆ ಆಲಡೆಯನ್ನು ಪುನಶ್ಚೇತನಗೊಳಿಸಿ ನೂತನ ಆಲಡೆ (ದೇವಸ್ಥಾನ) ನಿರ್ಮಾಣಕ್ಕೆ ನಿಶ್ಚಯಿಸಿ ಇದೀಗ ಶ್ರೀ ಉಮಾಮಹೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ವಾಯುವ್ಯ ಭಾಗದಲ್ಲಿರುವ ಪಿಂಗಾರ ಪಾಡಿಯಲ್ಲಿ ನೂತನ ಆಲಯದಲ್ಲಿ ಆಲಡೆ ಶಕ್ತಿಗಳಾದ ಶ್ರೀ ವೀರಭದ್ರ, ಬ್ರಹ್ಮ, ನಾಗ, ಕುಮಾರ, ಅಬ್ಬಗ ದಾರಗ ಮೊದಲಾದ ಸಿರಿ ಶಕ್ತಿಗಳನ್ನು ಪುನಃಪ್ರತಿಷ್ಠಾಪಿಸಿ ನೂತನ ಶಿಲಾಮಯ ಗರ್ಭಗ್ರಹ ಉತ್ಸರ್ಗ ಹಾಗೂ ಸುತ್ತು ಪೌಳಿಯನ್ನು ನಿರ್ಮಿಸಿ ಆಲಡೆಯ ಸಿರಿವಂತಿಕೆಯನ್ನು ಪುನರ್ ನಿರ್ಮಾಣಗೊಳಿಸುವ ಬಗ್ಗೆ ಶ್ರೀ ದೇವರು ನಡೆಸಿಕೊಂಡು ಬಂದಿರುತ್ತಾರೆ.

ದೇವಸ್ಥಾನ ಎಂದರೆ ಸಾತ್ವಿಕ ಕಂಪನವಿರುವ ಸ್ಥಳ. ಯಾವುದೇ ಒಂದು ದೇವಸ್ಥಾನ ಪ್ರತಿಷ್ಠಾಪನೆ ಆಗಬೇಕಾದರೆ ಅಲ್ಲಿ ಸಾತ್ವಿಕ ಶಕ್ತಿಯ ವೃದ್ಧಿಗಾಗಿ ನಿರಂತರವಾಗಿ ಲೋಕೋದ್ಧಾರ ಯಾಗಗಳು ನಡೆದಿರಬೇಕು. ಅದರಂತೆ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ಸಹಸ್ರ ಚಂಡಿಕಾ ಮಹಾಯಾಗವು ಮಾರ್ಚ್ 22 ಬುಧವಾರದಿಂದ ಆರಂಭಗೊಂಡಿದ್ದು ಮಾರ್ಚ್ 28 ಮಂಗಳವಾರದವರೆಗೆ ನಡೆಯಲಿರುವುದು.

ಭಗವದ್ಭಕ್ತರು ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ದೇವಳದ ಧರ್ಮದರ್ಶಿಗಳು, ಅರ್ಚಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.