ಬ್ರಹ್ಮಾವರ: ಕಳಪೆ ಗುಣಮಟ್ಟದ ಕಾಂಕ್ರೀಟ್ ರಸ್ತೆ
Team Udayavani, Jun 30, 2020, 5:24 AM IST
ಬ್ರಹ್ಮಾವರ: ಬ್ರಹ್ಮಾವರ ಪರಿಸರದಲ್ಲಿ ಹಲವು ರಸ್ತೆಗಳು ಕಾಂಕ್ರಿಟೀಕರಣಗೊಂಡಿದೆ. ಮುಖ್ಯವಾಗಿ ಲೋಕೋಪಯೋಗಿ ಇಲಾಖೆಯಡಿ, ಜಿ.ಪಂ. ಯೋಜನೆಯಡಿ ಹಾಗೂ ಇತರೆ ಯೋಜನೆಯಡಿ ಡಾಂಬರೀಕರಣ ರಸ್ತೆಗಳನ್ನು ನವೀಕರಿಸಿ ಕಾಂಕ್ರೀಟ್ ರಸ್ತೆಯನ್ನಾಗಿ ಮಾರ್ಪಾಡುಗೊಳಿಸಿ ಕಾಮಗಾರಿ ಮಾಡಲಾಗಿದೆ. ಆದರೆ ಹಲವು ಕಡೆ ಗುಣಮಟ್ಟದ ಕೊರತೆ ಎದ್ದು ಕಾಣುತ್ತಿದೆ.
ಕಳೆದ 2 ತಿಂಗಳ ಹಿಂದೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು ರೂ. 40 ಲಕ್ಷ ವೆಚ್ಚದಲ್ಲಿ ಚಾಂತಾರು ಅಗ್ರಹಾರ ರಸ್ತೆ ಕಾಂಕ್ರಿಟೀಕರಣಗೊಳಿಸಲಾಯಿತು. ಕೇವಲ 2 ತಿಂಗಳಲ್ಲಿ ರಸ್ತೆಯು ಸಂಪೂರ್ಣವಾಗಿ ಬಿರುಕುಬಿಟ್ಟು ಕಾಮಗಾರಿ ಗುಣಮಟ್ಟವನ್ನು ಎತ್ತಿ ತೋರಿಸುತ್ತಿದೆ. ಈಗ ಅದಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಲಾಗುತ್ತಿದೆ.
ಈ ಹಿಂದೆ ಕಾಂಕ್ರೀಟ್ ರಸ್ತೆಗಳನ್ನು ಕಬ್ಬಿಣದ ಸರಳುಗಳಿಂದ ನಿರ್ಮಾಣ ಮಾಡುತ್ತಿದ್ದು, ಹತ್ತಾರು ವರ್ಷ ಬಾಳಿಕೆ ಬಂದಿರುವ ಉದಾಹರಣೆಗಳಿದೆ. ಆದರೆ ಈಗ ಇಲಾಖೆ ಬೇರೆ ಬೇರೆ ನೆಪಗಳನ್ನೊಡ್ಡಿ ಈ ರೀತಿ ಕಳಪೆ ಕಾಮಗಾರಿಗೆ ಸಹಕಾರ ನೀಡುತ್ತಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಇಂತಹ ಕಾಮಗಾರಿಗಳಿಗೆ ಕಡಿವಾಣ ಹಾಕುವುದರ ಮೂಲಕ ಜನರ ತೆರಿಗೆ ಹಣ ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಬೇಕಾಗಿ ಹೇರೂರು ನಾಗರೀಕ ಹೋರಾಟ ಸಮಿತಿ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ