1,320 ಮರಗಳಿಗೆ ಬೀಳಲಿದೆ ಕೊಡಲಿ; ಬ್ರಹ್ಮಾವರ-ಸೀತಾನದಿ ಚತುಷ್ಪಥ ರಸ್ತೆ ಅಭಿವೃದ್ಧಿ


Team Udayavani, Sep 20, 2022, 1:23 PM IST

9

ಉಡುಪಿ: ಬ್ರಹ್ಮಾವರ-ಸೀತಾನದಿ ರಸ್ತೆ ಅಭಿವೃದ್ಧಿ ಯೋಜನೆ ಭಾಗವಾಗಿ ಚೇರ್ಕಾಡಿಯಿಂದ ಕೆಳಕರ್ಜೆವರೆಗಿನ 5.5 ಕಿ. ಮೀ. ರಸ್ತೆ ಅಭಿವೃದ್ಧಿ ಮತ್ತು ವಿಸ್ತರಣೆ ಕಾಮಗಾರಿಗಾಗಿ 1,320 (ಚೇರ್ಕಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 579, ಕರ್ಜೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ 741 ವಿವಿಧ ಜಾತಿಯ ಹಳೆಯ ಮರಗಳು) ವಿವಿಧ ಜಾತಿಯ ಮರಗಳಿಗೆ ಕೊಡಲಿ ಏಟು ಬೀಳುತ್ತಿದೆ.

ಹಲವು ವರ್ಷಗಳಿಂದ ಬೇಡಿಕೆಯ ಯೋಜನೆಯಾಗಿರುವ ಈ ರಸ್ತೆ ಅಭಿವೃದ್ಧಿಗೆ (ಚತುಷ್ಪಥ ಹೆದ್ದಾರಿ) ಸರಕಾರ ಮುಂದಾಗಿದ್ದು, ರಾಜ್ಯ ಹೆದ್ದಾರಿ ಯೋಜನೆಯಡಿಯಲ್ಲಿ ಹಂತಹಂತವಾಗಿ ಕಾಮಗಾರಿಯನ್ನು ಕೈಗೊಂಡಿದೆ.

ಉಡುಪಿ ಲೋಕೋಪಯೋಗಿ ಇಲಾಖೆ ಉಪವಲಯ ನೋಡಲ್‌ ಏಜೆನ್ಸಿಯಾಗಿದೆ. ಕಾಮಗಾರಿ ಕಾರ್ಯಾದೇಶ, ಅನುದಾನ ಬಿಡುಗಡೆ, ಗುತ್ತಿಗೆ, ಟೆಂಡರ್‌ ಪ್ರಕ್ರಿಯೆ ಎಲ್ಲವೂ ಬೆಂಗಳೂರಿನಲ್ಲಿ ನಡೆಯುತ್ತದೆ. ಈಗಾಗಲೇ ಬ್ರಹ್ಮಾವರ ಪೇಟೆಯಿಂದ ಚೇರ್ಕಾಡಿ ಶಾರದಾ ಸ್ಕೂಲ್‌ವರೆಗೆ ಎರಡು ಬದಿಯಲ್ಲಿ 7 ಮೀಟರ್‌ (ಡಿವೈಡರ್‌ ಹೊರತುಪಡಿಸಿ) ಅಗಲಕ್ಕೆ ವಿಸ್ತರಿಸಲಾಗುತ್ತದೆ. ಪಿಡಬ್ಲ್ಯುಡಿ ಇಲಾಖೆ ಮಾಹಿತಿಯಂತೆ ಮುಂದಿನ ಹಂತದಲ್ಲಿ 5 ಕಿ.ಮೀ. ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.

ಪರಿಸರಹಾನಿ ಪ್ರಮಾಣ ಕಡಿಮೆಯಾಗಲಿ

ನಮ್ಮದು “ಸುಸ್ಥಿರ ಅಭಿವೃದ್ಧಿ’ ಮಂತ್ರ. ಅಭಿವೃದ್ಧಿ ಕೆಲಸಗಳೂ ನಡೆಯಬೇಕು, ಪರಿಸರ ಹಾನಿಯನ್ನೂ ಗರಿಷ್ಠ ಪ್ರಮಾಣದಲ್ಲಿ ಕಡಿಮೆ ಮಾಡಬೇಕು. ರಸ್ತೆಯಂತಹ ಕಾಮಗಾರಿಗಳಲ್ಲಿ ಒಂದಿಷ್ಟು ಮರಗಳು ಕೊನೆಯುಸಿರೆಳೆಯುತ್ತವೆ. ಆದರೆ ನಿಯಮಾನುಸಾರ ಇದರ ಹತ್ತು ಪಟ್ಟು ಗಿಡಗಳನ್ನು ನೆಡಬೇಕೆಂದಿದೆ. ಕಡಿಯುವ ಮರಗಳಿಗೆ ಹೋಲಿಸಿದರೆ ನೆಡುವ ಮರಗಳ ಕೊಡುಗೆ ಪ್ರಕೃತ ಏನೇನೂ ಅಲ್ಲ. ಇದನ್ನಾದರೂ ಸರಿಯಾಗಿ ಪಾಲಿಸುತ್ತೇವೆಯೇ ಎಂಬುದು ಜನತೆಯನ್ನು ಸದಾ ಕಾಡುವ ಪ್ರಶ್ನೆ. ಇಷ್ಟನ್ನಾದರೂ ಪಾಲಿಸುವಂತಾಗಲಿ ಎಂದು ಹಾರೈಕೆ.

ಒಂದು ಕಿ. ಮೀ.ಗೆ 3 ಲಕ್ಷ ರೂ. ಪರಿಹಾರ: ಲೋಕೋಪಯೋಗಿ ಗುರುತಿಸಿದ ಮರಗಳನ್ನು ಪಟ್ಟಿ ಮಾಡಿದ್ದಾರೆ. ಈ ಬಗ್ಗೆ ಜಂಟಿ ಸಮೀಕ್ಷೆಯೂ ನಡೆದಿದೆ. ಗ್ರಾ. ಪಂ.ನಲ್ಲಿ ಸಾರ್ವಜನಿಕರ ಸಭೆ ಕರೆದು ಅಭಿಪ್ರಾಯ ಪಡೆಯಲಾಗುವುದು. ಸೆ. 29 ರಂದು ಹೆಬ್ರಿ ಆರ್‌ಎಫ್ಒ ಕಚೇರಿಯಲ್ಲಿ ಅಹವಾಲು ಸಭೆಯನ್ನು ಕರೆಯಲಾಗಿದೆ. ಸರಕಾರಿ ನಿಯಮದಂತೆ ಒಂದು ಮರ ಕಡಿದಲ್ಲಿ 10 ಗಿಡಗಳನ್ನು ನೆಡುವ ಮಾರ್ಗಸೂಚಿ ಇದೆ. ಇದನ್ನು ಅರಣ್ಯ ಇಲಾಖೆ ವ್ಯವಸ್ಥಿತವಾಗಿ ಪಾಲಿಸಲಿದೆ. ಇದರ ಪರಿಹಾರವನ್ನು ರಸ್ತೆ ಕಾಮಗಾರಿ ಕೈಗೊಳ್ಳುವ ಇಲಾಖೆಯೇ ನೀಡಬೇಕು. ಅಲ್ಲದೆ ರಸ್ತೆ ಬದಿಯಲ್ಲಿ ಗಿಡ-ಮರಗಳನ್ನು ಬೆಳೆಸುವ ಸಲುವಾಗಿ ಪ್ರತೀ ಕಿ.ಮೀ.ಗೆ 3 ಲ.ರೂ. ಪರಿಹಾರವನ್ನು ಅರಣ್ಯ ಇಲಾಖೆಗೆ ನೀಡುವ ನಿಯಮವನ್ನು ಸರಕಾರ ರೂಪಿಸಿದೆ. – ಆಶಿಶ್‌ ರೆಡ್ಡಿ, ಡಿಎಫ್ಒ, ಅರಣ್ಯ ಇಲಾಖೆ, ಕುಂದಾಪುರ ಉಪ ವಿಭಾಗ

ವಿದ್ಯುತ್‌, ನೀರು ಪೈಪ್‌ಲೈನ್‌ ಸ್ಥಳಾಂತರ: ಬ್ರಹ್ಮಾವರ ಸೀತಾನದಿ ರಸ್ತೆ ಅಭಿವೃದ್ಧಿ ಯೋಜನೆ ಹಂತಹಂತವಾಗಿ ನಡೆಯುತ್ತಿದೆ. ಮುಂದಿನ ಭಾಗದಲ್ಲಿ 5.5 ಕಿ. ಮೀ. ರಸ್ತೆ ಅಭಿವೃದ್ಧಿಯಾಗಲಿದೆ. ಕಾಮಗಾರಿಗೆ ಸಲುವಾಗಿ ಮರಗಳನ್ನು ತೆರವುಗೊಳಿಸಲು ಸಮೀಕ್ಷೆ ವರದಿ ಕೊಡಲಾಗಿದೆ. ಅರಣ್ಯ ಇಲಾಖೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡು ಅನುಮತಿ ನೀಡಬೇಕಿದೆ. ಈ ಮಾರ್ಗದಲ್ಲಿ ವಿದ್ಯುತ್‌, ಕುಡಿಯುವ ನೀರು ಪೈಪ್‌ಲೈನ್‌ಗಳು ಹಾದುಹೋಗಿದ್ದು, ಇದೆಲ್ಲ ಸಂಪೂರ್ಣ ಸ್ಥಳಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲಾಗುತ್ತದೆ. ಈ ನಿಟ್ಟಿನಲ್ಲಿ ಪೂರ್ವ ತಯಾರಿ ನಡೆಯುತ್ತಿದೆ. – ಜಗದೀಶ್‌ ಭಟ್‌, ಎಇಇ, ಲೋಕೋಪಯೋಗಿ ಇಲಾಖೆ ಉಡುಪಿ

ಟಾಪ್ ನ್ಯೂಸ್

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.