ಬ್ರಹ್ಮಾವರ ಸೇವಾ ಸಿಂಧು ಕಚೇರಿಗೆ ನುಗ್ಗಿದ ಬಸ್: ತಪ್ಪಿದ ಭಾರಿ ಅನಾಹುತ!
Team Udayavani, Oct 11, 2020, 12:49 PM IST
ಬ್ರಹ್ಮಾವರ: ತಾಂತ್ರಿಕ ಕಾರಣಗಳಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇವಾಸಿಂಧು ಕಚೇರಿಯೊಳಗೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ರವಿವಾರ ನಡೆದಿದೆ.
ಘಟನೆಯಲ್ಲಿ ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ರಜಾದಿನವಾದ ಹಿನ್ನಲೆಯಲ್ಲಿ ಸೇವಾ ಸಿಂಧು ಕಚೇರಿಯಲ್ಲಿ ಯಾರೂ ಇಲ್ಲದ ಕಾರಣ ಸಂಭವನೀಯ ಅನಾಹುತವೊಂದು ತಪ್ಪಿದೆ.
ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಸ್ಟಾರ್ಟ್ ಆಗದ ಕಾರಣ ಸಿಬ್ಬಂದಿ ಹಿಂದಿನಿಂದ ದೂಡಿಕೊಂಡು ಹೋಗಿದ್ದರು. ಇಳಿಜಾರಾದ ಕಾರಣ ಬಸ್ ವೇಗವಾಗಿ ಚಲಿಸಿದ್ದು, ಎದುರಿದ್ದ ತಾಲೂಕು ಪಂಚಾಯತ್ ಕಟ್ಟಡದ ಕಡೆಗೆ ಸಾಗಿದೆ. ಬಸ್ ನಲ್ಲಿ ಚಾಲಕನಿದ್ದರೂ ತಾಂತ್ರಿಕ ದೋಷ ಉಂಟಾಗಿ ಬ್ರೇಕ್ ಕೂಡಾ ಕೆಲಸ ಮಾಡದೆ ಬಸ್ ನ್ನು ನಿಯಂತ್ರಣ ತರಲು ಸಾಧ್ಯವಾಗಿಲ್ಲ. ವೇಗವಾಗಿ ಬಂದ ಬಸ್ ಸೇವಾ ಸಿಂಧು ಕಟ್ಟಡಕ್ಕೆ ಢಿಕ್ಕಿ ಹೊಡೆದಿದೆ.
ಕಟ್ಟಡದ ಮುಂಭಾಗಕ್ಕೆ ಹಾನಿಯಾಗಿದ್ದು, ಕಚೇರಿಯ ಒಳಗಿದ್ದ ಕಂಪ್ಯೂಟರ್ ಕೂಡಾ ಜಖಂ ಆಗಿದೆ. ಬಸ್ ನಲ್ಲಿ ಸುಮಾರು ಹತ್ತು ಮಂದಿ ಪ್ರಯಾಣಿಕರಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ತಪ್ಪಿದ ಅನಾಹುತ: ಭಾನುವಾರವಾದ ಕಾರಣ ಸೇವಾ ಸಿಂಧು ಕಚೇರಿಯಲ್ಲಿ ಯಾರೂ ನಾಗರಿಕರು, ಸಿಬ್ಬಂದಿ ಇರಲಿಲ್ಲ. ಆದರೆ ಇತರ ದಿನಗಳಲ್ಲಿ ಆಧಾರ್ ತಿದ್ದುಪಡಿ ಮುಂತಾದ ಕಾರ್ಯಗಳಿಗೆ ಇಲ್ಲಿ ದೊಡ್ಡ ಮಟ್ಟದ ಕ್ಯೂ ಇರುತ್ತದೆ. ಹೀಗಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು