ಬಸ್‌ ನಿಲ್ದಾಣಗಳು ಶೀಘ್ರದಲ್ಲಿ ಮೇಲ್ದರ್ಜೆಗೆ

ಪಾರ್ಕಿಂಗ್‌ ಸಮಸ್ಯೆಗೆ ಸಿಗಲಿದೆ ಮುಕ್ತಿ; ಆರಂಭದಲ್ಲಿ ಮಣಿಪಾಲ ನಿಲ್ದಾಣ ಅಭಿವೃದ್ಧಿ

Team Udayavani, Oct 9, 2020, 1:42 AM IST

UDUPIಬಸ್‌ ನಿಲ್ದಾಣಗಳು ಶೀಘ್ರದಲ್ಲಿ ಮೇಲ್ದರ್ಜೆಗೆ

ಉಡುಪಿ ಸಿಟಿ ಬಸ್‌ ನಿಲ್ದಾಣ

ಉಡುಪಿ: ಡೆಲ್ಟ್ ಯೋಜನೆ ಮೂಲಕ ನಿರ್ಮಿಸಲು ಉದ್ದೇಶಿಸಿದ ಸುಸಜ್ಜಿತ ಮಾದರಿ ಬಸ್‌ಸ್ಟಾಂಡ್‌ ನಿರ್ಮಿಸುವ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು, ಇದೀಗ ಮತ್ತೆ ಮರುಜೀವ ಪಡೆದಿದೆ. ವಾರದ ಹಿಂದೆ ಅಧಿಕಾರಿಗಳು ಮತ್ತೂಮ್ಮೆ ಸರ್ವೇ ನಡೆಸುವ ಮೂಲಕ ಕಾಮಗಾರಿ ಆರಂಭಕ್ಕೆ ಹಸುರು ನಿಶಾನೆ ತೋರಿದ್ದಾರೆ. ಮಲ್ಪೆ, ಉಡುಪಿ, ಮಣಿಪಾಲದ ಬಸ್‌ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಯೋಜನೆ ಇದಾಗಿದೆ. ಇದರಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣವಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.
ಯೋಜನೆಯಲ್ಲಿ ಪ್ರಥಮ ಹಂತವಾಗಿ ಮಣಿಪಾಲದ ಬಸ್‌ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗುತ್ತದೆ. ಪ್ರಸ್ತುತ ಇಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರ ಸುಸಜ್ಜಿತ ಬಸ್‌ ನಿಲ್ದಾಣ ಹಾಗೂ ಪಾರ್ಕಿಂಗ್‌ಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ.

ಮಲ್ಪೆಯಲ್ಲಿ ತುಸು ಗೊಂದಲ
ಮಲ್ಪೆಯಲ್ಲಿ ಪ್ರಸ್ತುತ ಇರುವ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಸುಮಾರು 70ರಿಂದ 80ರಷ್ಟು ಮೀನುಗಾರ ಮಹಿಳೆಯರು ಮೀನು ಒಣಗಿಸುತ್ತಿದ್ದಾರೆ. ಒಂದು ವೇಳೆ ಬಸ್‌ ನಿಲ್ದಾಣ ಯೋಜನೆ ರೂಪುಗೊಂಡದ್ದೇ ಆದಲ್ಲಿ ಆ ಜಾಗಕ್ಕೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕಾರಣಕ್ಕಾಗಿ ಮಲ್ಪೆ ಬೀಚ್‌ಗೆ ಬಸ್‌ ನಿಲ್ದಾಣ ಸ್ಥಳಾಂತರಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಆದರೆ ಅದರ ಅನುಕೂಲ, ನಿರ್ಮಾಣ ಕುರಿತ ರೂಪುರೇಖೆ ಇತ್ಯಾದಿಗಳ ಬಗ್ಗೆ ಅಂತಿಮ ನಿರ್ಣಯ ಇನ್ನಷ್ಟೇ ಆಗಬೇಕಿದೆ ಎಂದು ಮೂಲಗಳು ಹೇಳಿವೆ.

ತಾಂತ್ರಿಕ ಸಮಸ್ಯೆ ನಿವಾರಣೆ
ಈ ಯೋಜನೆಯ ಪ್ರಾರಂಭದಲ್ಲಿ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಆದರೆ ಈ ಎಲ್ಲ ತಾಂತ್ರಿಕ ಅಡಚಣೆಗಳನ್ನು ನಿವಾರಿಸಿ ಮರುಪ್ರಸ್ತಾವನೆ ಕಳುಹಿಸಲಾಗಿದೆ. ಈಗಾಗಲೇ ಸಿಟಿ ಬಸ್‌ ನಿಲ್ದಾಣದ ಬಳಿಯೇ ನರ್ಮ್ ಬಸ್‌ ನಿಲ್ದಾಣವೂ ನಿರ್ಮಾಣವಾಗುತ್ತಿದ್ದು, ಎರಡೂ ಬಸ್‌ ನಿಲ್ದಾಣಗಳನ್ನು ಕೇಂದ್ರೀಕರಿಸಿ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಅದರಂತೆ ಬಸ್‌ ನಿಲ್ದಾಣದ ಮೇಲ್ಭಾಗದಲ್ಲಿ ಸ್ಲಾéಬ್‌ಗಳನ್ನು ನಿರ್ಮಿಸಿ ಅದರ ಮೇಲ್ಭಾಗದಲ್ಲಿ ಪಾರ್ಕಿಂಗ್‌ ಮಾಡುವ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಗಿದೆ. ಇದು ಅಂತಿಮಗೊಂಡರೆ ಪೇಯ್ಡ ಪಾರ್ಕಿಂಗ್‌ ಮೂಲಕ ಸಾರ್ವಜನಿಕರು ವಾಹನವನ್ನು ಇದರಲ್ಲಿ ನಿಲುಗಡೆ ಮಾಡಬಹುದಾಗಿದೆ.

8.95 ಕೋ.ರೂ.ಯೋಜನೆ
ಮಣಿಪಾಲ ಬಸ್‌ ನಿಲ್ದಾಣವನ್ನು 3.50 ಕೋ.ರೂ. ಹಾಗೂ ಉಡುಪಿ ಬಸ್‌ ನಿಲ್ದಾಣವನ್ನು 5.45 ಕೋ.ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಗುರಿ ಇದೆ. ಡೆಲ್ಟ್ ಯೋಜನೆ ಮೂಲಕ ಇದಕ್ಕಾಗಿ 8.95 ಕೋ.ರೂ.ಗಳನ್ನು ಮೀಸಲಿರಿಸಲಾಗಿದೆ.

ಸರ್ವೇ ಕಾರ್ಯ ಪೂರ್ಣ
ಬಸ್‌ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಬಗೆಗಿನ ಸರ್ವೇ ಕಾರ್ಯ ಕೆಲವೆಡೆ ಪೂರ್ಣಗೊಂಡಿದೆ. ಇನ್ನು ಕೆಲವೆಡೆ ನಡೆಯುತ್ತಿದೆ. ಅತ್ಯಾಧುನಿಕ ರೀತಿಯಲ್ಲಿ ಎಲ್ಲ ಸೌಲಭ್ಯಗಳು ಈ ನಿಲ್ದಾಣದಲ್ಲಿರಲಿವೆ. ಇದರಿಂದ ಪಾರ್ಕಿಂಗ್‌ ಸಮಸ್ಯೆಯೂ ತಕ್ಕ ಮಟ್ಟಿಗೆ ನಿವಾರಣೆಯಾಗಲಿದೆ.
-ರಘುಪತಿ ಭಟ್‌, ಶಾಸಕರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.