ನಾಡಿನೆಲ್ಲೆಡೆ ಸಂಭ್ರಮದ ಮಹಾಶಿವರಾತ್ರಿ

ಭಕ್ತರಿಂದ ಮಹಾದೇವನ ಸ್ಮರಣೆ

Team Udayavani, Feb 21, 2020, 10:52 PM IST

kala-33

ಉಡುಪಿ: ಮಹಾಶಿವರಾತ್ರಿ ಹಿಂದೂ ಸಂಸ್ಕೃತಿಯ ಪವಿತ್ರ ಹಬ್ಬಗಳಲ್ಲಿ ಒಂದು. ಹಗಲು ಉಪವಾಸವಿದ್ದು ರಾತ್ರಿ ವೇಳೆ ಜಾಗರಣೆ ಮಾಡಿ ಶಿವಧ್ಯಾನದ ಮೂಲಕ ಶಿವನ ಕೃಪೆಗೆ ಪಾತ್ರರಾಗುವ ಶುಭದಿನ. ಹಾಗೇ ಉಡುಪಿಯ ನಗರಾದ್ಯಂತ ಶುಕ್ರವಾರ ಬೆಳಗ್ಗಿನಿಂದಲೇ ಹಬ್ಬದ ವಾತಾವರಣ ಮನೆಮಾಡಿತ್ತು. ಉಡುಪಿ ರಥಬೀದಿಯ ಅನಂತೇಶ್ವರ, ಚಂದ್ರಮೌಳೀಶ್ವರ, ಬನ್ನಂಜೆ ಮಹಾಲಿಂಗೇಶ್ವರ, ಪರ್ಕಳ ಶ್ರೀ ಮಹಾಲಿಂಗೇಶ್ವರ, ಹೆರ್ಗ ತ್ರ್ಯಂಬಕೇಶ್ವರ , ಶಿವಪಾಡಿ ಉಮಾಮಹೇಶ್ವರ ದೇಗುಲ, ಸಗ್ರಿ ಚಕ್ರತೀರ್ಥ ಉಮಾಮಹೇಶ್ವರ, ಕಲ್ಯಾಣಪುರ ಮಡಿ ಮಲ್ಲಿಕಾರ್ಜುನ ಮೊದಲಾದ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೆ ಪೂಜಾ ಕೈಂಕರ್ಯಗಳು ಜರಗಿದವು.

ಮುಂಜಾನೆಯಿಂದಲ್ಲೇ ಭಕ್ತರು ಶ್ರದ್ಧಾ ಭಕ್ತಿಯಿಂದ ವಿವಿಧ ದೇವಸ್ಥಾನಗಳಿಗೆ ತೆರಳಿ ಬಿಲ್ವಪತ್ರೆ, ಎಳ್ಳೆಣ್ಣೆ ಸೇವೆ, ರುದ್ರಾಭಿಷೇಕ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸಿ ಶಿವದರ್ಶನ ಪಡೆದು ಪುನೀತರಾದರು. ಬಗೆ ಬಗೆಯ ಹೂವಿನಿಂದ ಅಲಂಕಾರಗೊಂಡಿದ್ದ ದೇಗುಲಗಳು ಭಕ್ತರ ಗಮನ ಸೆಳೆದವು.

ಶ್ರೀ ಅನಂತೇಶ್ವರ, ಚಂದ್ರಮೌಳೀಶ್ವರ
ಅನಂತೇಶ್ವರ ಚಂದ್ರಮೌಳೀಶ್ವರ ದೇಗುಲದಲ್ಲಿ ಫೆ. 20ರಿಂದ ಫೆ. 27ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಶುಕ್ರವಾರ ಮಹಾ ಶಿವರಾತ್ರಿಯಂದು ಧ್ವಜಾರೋಹಣ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಧಾನ ಹೋಮ, ಭಜನೆ, ಧಾರ್ಮಿಕ ಪ್ರವಚನ, ವೀಣಾವಾದನ, ಸ್ಯಾಕ್ಸೋಫೋನ್‌ ವಾದನ, ಭರತನಾಟ್ಯ, ಯಕ್ಷಗಾನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪರ್ಕಳ ಮಹಾಲಿಂಗೇಶ್ವರ ಮಹಾಗಣಪತಿ
ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದಲ್ಲಿ ಸಾಮೂಹಿಕ ಶತರುದ್ರಾಭಿಷೇಕ, ಗಣಪತಿ ಸನ್ನಿಧಿಯಲ್ಲಿ 1008 ಕಾಯಿ ಮೂಡು ಗಣಪತಿ ಸೇವೆ, 40ನೇ ವರ್ಷದ ಭಜನ ಮಂಗಲೋತ್ಸವ ರಂಗಪೂಜೆ ಕಾರ್ಯಕ್ರಮಗಳು ನಡೆದವು.

ಸಗ್ರಿ ಉಮಾಮಹೇಶ್ವರ
ಕಾನನದ ಮಧ್ಯೆ ನೆಲೆನಿಂತ ಪುರಾತನ ದೇಗುಲ, ಉದ್ಭವ ಲಿಂಗ ರೂಪದಲ್ಲಿರುವ ಸಗ್ರಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಸಂಭ್ರಮದಿಂದ ಶಿವರಾತ್ರಿ ಆಚರಣೆ ನಡೆಯಿತು. ಪಂಚಾಮೃತಾಭಿಷೇಕ, ಬಿಲ್ವಾರ್ಚನೆ ಮೊದಲಾದ ಧಾರ್ಮಿಕ ಹಾಗೂ ಭಜನೆ ಕಾರ್ಯಕ್ರಮಗಳು ನಡೆದವು.

ಬನ್ನಂಜೆ ಮಹಾಲಿಂಗೇಶ್ವರ
ಶಿವರಾತ್ರಿ ಪ್ರಯುಕ್ತ ಅರ್ಘ್ಯಪ್ರದಾನ, ಉತ್ಸವ ಬಲಿ, ರಥೋತ್ಸವ, ಮಹಾರಂಗಪೂಜೆ, ಯಕ್ಷಗಾನ ಮೊದಲಾದ ಕಾರ್ಯಕ್ರಮಗಳು ನಡೆದವು. ಮುಂಜಾನೆಯಿಂದಲೆ ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರು ದೇಗುಲಕ್ಕೆ ಭೇಟಿ ನೀಡಿ ಸೇವಾ ಕೈಂಕರ್ಯದಲ್ಲಿ ತೊಡಗಿ ಕೊಂಡರು. ಶನಿವಾರ ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ.

ಹೆರ್ಗ ತ್ರ್ಯಂಬಕೇಶ್ವರ
ತ್ರ್ಯಂಬಕೇಶ್ವರ ದೇಗುಲದಲ್ಲಿ ನವಕ ಪ್ರಧಾನ ಹೋಮ, ಸಾಮೂಹಿಕ ಶತರುದ್ರಾಭಿಷೇಕ, ಭಜನೆ ಹಾಗೂ ರಂಗಪೂಜೆಗಳು ನಡೆದವು. ನೂರಾರು ಭಕ್ತರು ಧಾರ್ಮಿಕ ಕಾರ್ಯಕ್ರಮ ಗಳಲ್ಲಿ ಪಾಲ್ಗೊಂಡರು.

ಶಿವಪಾಡಿ ಉಮಾಮಹೇಶ್ವರ
ಮಣಿಪಾಲ ಶಿವಪಾಡಿ ಶ್ರೀಉಮಾಮಹೇಶ್ವರ ದೇಗುಲದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ, ಪಂಚಾಮೃತಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ರಂಗಪೂಜಾದಿಗಳು ನಡೆದವು.

ಮಡಿ ಮಲ್ಲಿಕಾರ್ಜುನ ದೇಗುಲ
ಕಲ್ಯಾಣಪುರ ಸಮೀಪದ ನಯಂಪಳ್ಳಿ ಮಡಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವರ್ಷಂಪ್ರತಿ ಮಹಾಶಿವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು ಈ ಬಾರಿ 52ನೇ ವರ್ಷದ ಭಜನಾ ಮಂಗಲೋತ್ಸವದ ಪ್ರಯುಕ್ತ ಶುಕ್ರವಾರ ಸೂರ್ಯೋದಯದಿಂದ ಮರು ದಿನ ಸೂರ್ಯೋದಯದವರೆಗೆ ಅಖಂಡ ಭಜನೆ ಸಂಪನ್ನಗೊಂಡಿತು. ಪುರಾತನವಾದ ಈ ದೇಗುಲಕ್ಕೆ ಅಸಂಖ್ಯ ಭಕ್ತರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಶನಿವಾರ ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.