ಉಚ್ಚಿಲ: ರಾ. ಹೆದ್ದಾರಿಯಲ್ಲಿ ಕಾರು- ಆಮ್ನಿ ಮುಖಾಮುಖಿ ಢಿಕ್ಕಿ. ಓರ್ವ ಗಂಭೀರ ಗಾಯ
Team Udayavani, Jul 18, 2020, 10:28 AM IST
ಪಡುಬಿದ್ರಿ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ-ಪಣಿಯೂರು ಹೆದ್ದಾರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಮಂಗಳೂರು ಕಡೆಯಿಂದ ಬಂದು ಉಚ್ಚಿಲ ಪಣಿಯೂರು ಕಡೆಗೆ ಬರುತ್ತಿದ್ದ ಕಾರು ಮತ್ತು ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಅಮ್ನಿ ಕಾರು ಮುಖಾಮುಖಿ ಢಿಕ್ಕಿಯಾಗಿದೆ.
ಅಪಘಾತದ ತೀವ್ರತೆಗೆ ಅಮ್ನಿ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರುಗಳೆರಡು ನಜ್ಜುಗುಜ್ಜಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಾಗಿದೆ.