ಕೋಟ : ಸಾಹೇಬ್ರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಕೊಡುಗೆ
Team Udayavani, Jun 30, 2021, 7:42 PM IST
ಕೋಟ: ಸಾಹೇಬ್ರಕಟ್ಟೆ ಸ.ಹಿ.ಪ್ರಾಥಮಿಕ ಶಾಲೆಗೆ ದಾನಿಗಳಾದ ಮಾನ್ಯ ಅಶೋಕ ಕುಮಾರ್ ಕಿಣಿ ಬೆಂಗಳೂರು ಇವರು ಕೊಡಮಾಡಿದ ಲ್ಯಾಪ್ಟಾಪ್, ಕಂಪ್ಯೂಟರ್ ಹಾಗೂ ಕಂಪ್ಯೂಟರ್ ಶಿಕ್ಷಣದ ಪೂರಕ ಪರಿಪರಕರಗಳ ಹಸ್ತಾಂತರ ಇಂದು ಜರಗಿತು.
ಈ ಸಂದರ್ಭ ಸುಮಾರು 3.5ಲಕ್ಷಕ್ಕೂ ಹೆಚ್ಚು ಮೌಲ್ಯದ 6ಲ್ಯಾಪ್ಟಾಪ್, 6 ಕಂಪ್ಯೂಟರ್ ಹಾಗೂ ಪೂರಕ ಪರಿಕರಗಳನ್ನು ಹಸ್ತಾಂತರಿಸಿ ಮಾತನಾಡಿದ ದಾನಿಗಳಾದ ಅಶೋಕ ಕಿಣಿಯವರು, ನಾನು ಕಲಿತ ಶಾಲೆಯ ಹಳ್ಳಿಗಾಡಿನ ಈ ಶಾಲೆಯ ಮಕ್ಕಳು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಈ ಸೌಲಭ್ಯವನ್ನು ನೀಡಿದ್ದೇನೆ. ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿರುವುದು ತುಂಬಾ ಸಂತೋಷ ನೀಡಿದೆ ಎಂದರು.
ಗರಿಕೆಮಠ ಅರ್ಕಗಣಪತಿ ದೇಗುಲದ ಮುಖ್ಯಸ್ಥ ವೇ|ಮೂ| ರಾಮಪ್ರಸಾದ್ ಅಡಿಗರು ದಾನಿಗಳಾದ ಅಶೋಕ್ ಕಿಣಿಯವರನ್ನು ಸಮ್ಮಾನಿಸಿ ಗೌರವಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ಅನುದಾನದಲ್ಲಿ ಅಭಿವೃದ್ಧಿಪಡಿಸಲಾದ ಕಂಪ್ಯೂಟರ್ ಕೊಠಡಿಯನ್ನು ಕೂಡ ಈ ಸಂದರ್ಭ ಉದ್ಘಾಟಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಸತೀಶ್ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಿರಿಯಾರ ವ್ಯಾವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರದೀಪ್ ಬಲ್ಲಾಳ್ , ಉಪಾಧ್ಯಕ್ಷ ಅಲ್ತಾರು ನಿರಂಜನ ಹೆಗ್ಡೆ , ಗ್ರಾ.ಪಂ. ಸದಸ್ಯ ಅಮೃತ್ ಪೂಜಾರಿ, ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ, ಸಿ.ಆರ್.ಪಿ. ಚಂದ್ರ ಶೇಖರ ಮೊಗೇರ, ಹಿರಿಯರಾದ ಉಪೇಂದ್ರ ಕಿಣಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ ಪ್ರಭು, ಸ್ಥಳೀಯರಾದ ನಾರಾಯಣ ಶೆಟ್ಟಿ ಶರತ್ ಶೆಟ್ಟಿ, ರವೀಂದ್ರನಾಥ ಕಿಣಿ , ಯು.ಪ್ರಸಾದ್ ಭಟ್, ಕಿಶೋರ್ ಶೆಟ್ಟಿ, ಪುರುಷೋತ್ತಮ ದೇವಾಡಿಗ, ಜಯಕರ ಶೆಟ್ಟಿ ಉಪಸ್ಥಿತರಿದ್ದರು.
ಶಿಕ್ಷಕ ಸುರೇಂದ್ರ ಕಾರ್ಯಕ್ರಮ ನಿರೂಪಿಸಿ , ಗಜೇಂದ್ರ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ