ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ, ಶಿಕ್ಷಣ ತಜ್ಞ ದಾಮೋದರ್ ಐತಾಳ್ ನಿಧನ
Team Udayavani, Dec 8, 2020, 8:09 AM IST
ಉಡುಪಿ: ಶಿಕ್ಷಣ ತಜ್ಞ, ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಕೆ.ದಾಮೋದರ್ ಐತಾಳ್ (85) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದ ಕಾರಣದಿಂದ ನಿಧನರಾದರು.
ಉಡುಪಿ ಕಡಿಯಾಳಿ ನಿವಾಸಿಯಾದ ದಾಮೋದರ್ ಐತಾಳ್ ಅವರು ಕನ್ನಡ ಪಂಡಿತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಪತ್ರಿಕಾ ವರದಿಗಾರನಾಗಿ, ಉಡುಪಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಮಂಗಳೂರು ಡಿಡಿಪಿಐ ಕಚೇರಿಯಲ್ಲಿ ವಿಷಯ ಪರಿವೀಕ್ಷಣಾ ಅಧಿಕಾರಿಯಾಗಿದ್ದ ಐತಾಳರು, ಉಡುಪಿ ಶಿಕ್ಷಕರ ಸಹಕಾರಿ ಬ್ಯಾಂಕ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ದಾಮೋದರ್ ಐತಾಳ್ ಅವರು ಉಡುಪಿ ಕೃಷ್ಣ ಮಠದ ಚಿನ್ನರ ಸಂತರ್ಪಣೆ ಯೋಜನೆಯ ಆರಂಭದಲ್ಲಿ ಸ್ಪೂರ್ತಿದಾಯಕರಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಕಡಿಯಾಳಿಯಲ್ಲಿರುವ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಮೃತರು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ