ಶಿರ್ವ: ಸ್ಕೂಟಿಗೆ ಕಂಟೈನರ್ ಢಿಕ್ಕಿ; ಸವಾರ ಗಂಭೀರ
Team Udayavani, Nov 24, 2020, 10:47 AM IST
ಶಿರ್ವ: ಇಲ್ಲಿನ ಮುಖ್ಯ ರಸ್ತೆಯ ನ್ಯಾರ್ಮ ಸೇತುವೆಯ ಬಳಿ ಶಿರ್ವದಿಂದ ಉಡುಪಿ ಕಡೆ ಹೋಗುತ್ತಿದ್ದ ಕಂಟೈನರ್ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ನ. 23ರ ರಾತ್ರಿ ನಡೆದಿದೆ.
ಶಿರ್ವದಿಂದ ಉಡುಪಿ ಕಡೆ ಹೋಗುತ್ತಿದ್ದ ಕಂಟೈನರ್ ನ್ಯಾರ್ಮ ಇಳಿಜಾರಿನಲ್ಲಿ ಹೋಗುವಾಗ ಓವರ್ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಶಿರ್ವ ಮಸೀದಿ ಕಡೆ ಹೋಗುವ ಸ್ಕೂಟಿಗೆ ಢಿಕ್ಕಿ ಹೊಡೆದು ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದರು. ಚಾಲಕ ಬ್ರೇಕ್ ಹಾಕಿದರೂ ಕಂಟೈನರ್ನ ಬಂಪರ್ಗೆ ಸಿಲುಕಿಕೊಂಡ ಸ್ಕೂಟಿಯನ್ನು ಸುಮಾರು 50 ಮೀ. ದೂರ ಎಳೆದುಕೊಂಡು ಹೋಗಿದೆ.
ಸ್ಕೂಟಿ ಸವಾರ ಶಿರ್ವ ಮಸೀದಿ ಬಳಿಯ ನಿವಾಸಿ ಜಾನ್ಸನ್ ಡಿಸೋಜಾ (34) ರಿಗೆ ತಲೆಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹಸವಾರ ರೋಹನ್ ಡಿಸೋಜಾ (14) ಕೂಡಾ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಮಂಗಳೂರು: ಫಳ್ನೀರ್ ಬಳಿ ಯುವಕನ ಮೇಲೆ ತಲವಾರು ದಾಳಿ
ಸವಾರ ಮತ್ತು ಸಹಸವಾರ ಅಣ್ಣ ತಮ್ಮಂದಿರ ಮಕ್ಕಳಾಗಿದ್ದು, ಜಾನ್ಸನ್ ಡಿಸೋಜಾ 2-3 ದಿನಗಳ ಹಿಂದೆ ವಿದೇಶದಿಂದ ಬಂದಿದ್ದರು ಎನ್ನಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಫಘಾತ ವಲಯ
ಆತ್ರಾಡಿ-ಶಿರ್ವ-ಬಜ್ಪೆ ರಸ್ತೆ ವಿಸ್ತರಣೆ ವೇಳೆ ಶಿರ್ವ ನ್ಯಾರ್ಮ ಸೇತುವೆ ಪುನರ್ನಿರ್ಮಾಣಗೊಂಡಿದ್ದು, ತಿರುವಿನಿಂದ ಕೂಡಿದ ರಸ್ತೆ ಕಾಮಗಾರಿಯಿಂದಾಗಿ ಎದುರಿನಿಂದ ಬರುವ ವಾಹನಗಳು ಚಾಲಕರಿಗೆ ಸರಿಯಾಗಿ ಕಾಣದೆ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಕಳೆದ 25 ದಿನಗಳ ಹಿಂದೆ ಇದೇ ಜಾಗದಲ್ಲಿ ಕಲ್ಲು ಸಾಗಾಟದ ಟೆಂಪೋವೊಂದು ಪಲ್ಟಿಯಾಗಿ ಬಿದ್ದಿದ್ದು, ಚಾಲಕ ಪವಾಡ ಸದೃಶವಾಗಿ ಬದುಕುಳಿದಿದ್ದರು. ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ಶಿರ್ವದ ನಾಗರಿಕರು ಸೇತುವೆ ನಿರ್ಮಾಣದ ಸಂದರ್ಭದಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ