ಮಾಸ್ಕ್ ರಹಿತರಿಗೆ ಮುಂದುವರಿದ ದಂಡ
Team Udayavani, Jul 3, 2020, 6:17 AM IST
ಸಾಂದರ್ಭಿಕ ಚಿತ್ರ..
ಉಡುಪಿ/ಕುಂದಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-19 ವೈರಸ್ ತಡೆ ಸಂಬಂಧ ಮಾಸ್ಕ್ ಧರಿಸುವಂತೆ ನಗರದಲ್ಲಿ ಗುರುವಾರ ನಗರಸಭೆ ಅಧಿಕಾರಿಗಳು ಜಾಗೃತಿ ಮೂಡಿಸಿದರು.
ನಗರದ ಕೆಲವು ಆಟೋ ರಿಕ್ಷಾ ನಿಲ್ದಾಣಗಳಲ್ಲಿ ಆಟೋ ಚಾಲಕರು ಮಾಸ್ಕ್ ಧರಿಸದೆ ಗುಂಪಾಗಿ ಮಾತನಾಡುತ್ತಿರು ವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಅಂತಹ ಚಾಲಕರಿಗೆ ಎಚ್ಚರಿಕೆ ನೀಡ ಲಾಯಿತು. ಇದನ್ನು ಪರಿಶೀಲಿಸಿದ ಅಧಿಕಾರಿ ಗಳು ಆಟೋ ರಿಕ್ಷಾ ಒಕ್ಕೂಟದ ಗಮನಕ್ಕೂ ತಂದರು. ನಗರದ ಸಿಟಿ ಹಾಗೂ ಕೆಎಸ್ಆರ್ಟಿಸಿ ಬಸ್ನಿಲ್ದಾಣಗಳಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ವಲಸೆ ಕಾರ್ಮಿಕರನ್ನು ವಾಪಸ್ ಮನೆಗೆ ಕಳುಹಿಸಿ ಮಾಸ್ಕ್ ಧರಿಸಿ ಬರುವಂತೆ ಎಚ್ಚರಿಕೆ ನೀಡಲಾಯಿತು. ಗುರುವಾರ 5 ಮಂದಿಗೆ ದಂಡ ವಿಧಿಸಲಾಗಿದ್ದು, ಒಟ್ಟು 500 ರೂ. ದಂಡ ಸಂಗ್ರಹಿಸಲಾಗಿದೆ.
ಕುಂದಾಪುರ
ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಗುರುವಾರ 6 ಜನರಿಗೆ ತಲಾ 100 ರೂ.ಗಳಂತೆ ಒಟ್ಟು 600 ರೂ. ದಂಡ ವಿಧಿಸಲಾಗಿದೆ.
ಕಾರ್ಕಳ
ಕಾರ್ಕಳ ನಗರ ಠಾಣೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ, ಗ್ರಾಮೀಣ ಭಾಗದಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿರುವವರ ಬಗ್ಗೆ ಪೊಲೀಸರು ನಿಗಾವಹಿಸಿ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ