ಉಡುಪಿ: ಪೊಲೀಸರಲ್ಲೂ ಸೋಂಕು ಪತ್ತೆ ; ಇಲಾಖೆಯಿಂದ ಹಲವು ಮುನ್ನೆಚ್ಚರಿಕೆ
Team Udayavani, May 27, 2020, 5:57 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಉಡುಪಿ: ಜಿಲ್ಲೆಯಲ್ಲಿ ಪೊಲೀಸ್ ಸಿಬಂದಿಗೂ ಕೋವಿಡ್ ಸೋಂಕು ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬಂದಿಗೆ ಆತಂಕ ಎದುರಾಗಿದೆ.
ಇದನ್ನು ನಿವಾರಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈಗಾಗಲೇ 540 ಸಿಬಂದಿಯ ಗಂಟಲಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 60 ವರದಿಗಳು ಬಂದಿದ್ದು, ನಾಲ್ಕು ಪಾಸಿಟಿವ್ ಬಂದಿದೆ. ಮುಂದಿನ 3 – 4 ದಿನಗಳೊಳಗೆ ಎಲ್ಲ ಸಿಬಂದಿಯ ವರದಿ ಲಭಿಸುವ ನಿರೀಕ್ಷೆಯಿದೆ.
ಆದ್ಯತೆಯ ಮೇರೆಗೆ ಎಲ್ಲ ಪೊಲೀಸ್ ಸಿಬಂದಿಯ ಗಂಟಲಿನ ಮಾದರಿಯನ್ನು ಪರೀಕ್ಷೆಗೊಳಪಡಿಸುವ ಪ್ರಕ್ರಿಯೆಯೂ ನಡೆಯುತ್ತಿದೆ.
ಹಿರಿಯ ಪೊಲೀಸರ ಮೇಲೆ ಕಾಳಜಿ
ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 50 ವರ್ಷ ಮೇಲ್ಪಟ್ಟ ಪೊಲೀಸ್ ಸಿಬಂದಿಯ ಆರೋಗ್ಯ ರಕ್ಷಣೆಗೆ ಅಧಿಕ ಆದ್ಯತೆ ನೀಡಲಾಗಿದೆ. ಮನೆಯಿಂದಲೇ ಆಹಾರ ತರುವಂತೆ ಸೂಚಿಸಲಾಗಿದೆ. ಜತೆಗೆ ಮಾಸ್ಕ್, ಸ್ಯಾನಿಟೈಸರ್ಗಳನ್ನು ಎಲ್ಲ ಠಾಣೆಗಳಿಗೂ ನೀಡಲಾಗಿದೆ.
ಮೇ 31ರ ಅನಂತರ ವಿಶೇಷ ವ್ಯವಸ್ಥೆ ಹೊರ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಜಿಲ್ಲೆಯಲ್ಲಿ ಮೇ 31ರ ವರೆಗೆ ನಿರ್ಬಂಧ ವಿಧಿಸಲಾಗಿದೆ. ಅನಂತರ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ಮಾಡಲು ವಿಶೇಷ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪ್ರಯಾಣಿಕರನ್ನು ಯಾವುದೇ ಕಾರಣಕ್ಕೂ ಸ್ಪರ್ಶಿಸದೆ ದೂರದಿಂದಲೇ ಸ್ಕ್ರೀನಿಂಗ್ ಮಾಡುವ ಬಾಕ್ಸ್ ರೀತಿಯ ವ್ಯವಸ್ಥೆ ಮಾಡುವ ಬಗ್ಗೆ ಇಲಾಖೆ ಚಿಂತನೆ ನಡೆಸುತ್ತಿದೆ.
ಪೊಲೀಸ್ ಸಿಬಂದಿಗೆ ಮುನ್ನೆಚ್ಚರಿಕೆ ವಹಿಸುವಂತೆ ಈಗಾಗಲೇ ಹಲವಾರು ಮಾರ್ಗಸೂಚಿಗಳನ್ನು ನೀಡಲಾಗಿದೆ. ಸೋಂಕು ಲಕ್ಷಣ ಕಂಡು ಬಂದಿರುವ ಸಿಬಂದಿ ಕಾರ್ಯನಿರ್ವಹಿಸಿದ್ದ ಎಸ್ಪಿ ಕಚೇರಿ ಮತ್ತು ಎಲ್ಲ ಠಾಣೆಗಳನ್ನೂ ಸ್ಯಾನಿಟೈಸ್ಗೆ ಒಳಪಡಿಸಲಾಗುವುದು. ಈ ಪ್ರಕ್ರಿಯೆ ಜಾರಿಯಲ್ಲಿದೆ.
– ಎನ್. ವಿಷ್ಣುವರ್ಧನ್, ಉಡುಪಿ ಜಿಲ್ಲಾ ಎಸ್ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ