ಬೀಡಿ ಕಾರ್ಮಿಕರ ಸ್ವಾವಲಂಬಿ ಬದುಕಿಗೆ ಧಕ್ಕೆ ತಂದ ಕೋವಿಡ್‌-19


Team Udayavani, Apr 17, 2020, 5:49 AM IST

ಬೀಡಿ ಕಾರ್ಮಿಕರ ಸ್ವಾವಲಂಬಿ ಬದುಕಿಗೆ ಧಕ್ಕೆ ತಂದ ಕೋವಿಡ್‌-19

ಸಾಂದರ್ಭಿಕ ಚಿತ್ರ.

ಉಡುಪಿ: ಬೀಡಿ ಕಟ್ಟುವುದನ್ನೇ ನಂಬಿ ಜೀವನ ಸಾಗಿಸುವ ಸಹಸ್ರಾರು ಕುಟುಂಬಗಳು ಜಿಲ್ಲೆಯಲ್ಲಿವೆ. ಅವರೆಲ್ಲರೂ ಈಗ ಕೋವಿಡ್‌-19 ವೈರಸ್‌ನಿಂದ ಸಂಕಷ್ಟಕ್ಕೊಳಗಾಗಿದ್ದಾರೆ. 

ಸ್ವಂತ ಮನೆಗಳಲ್ಲಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವ ಒಂಟಿ ಮಹಿಳೆಯರು, ವಿಧವೆಯರು, ಸಂಸಾರದ ನಿರ್ವಹಣೆ ಹೊಣೆ ಹೊತ್ತ ಹೆಚ್ಚಿನ ಮಹಿಳೆಯರು ಬೀಡಿ ಕಟ್ಟುವ ಕೆಲಸಗಳಲ್ಲಿ ಬಹಳಷ್ಟು ವರ್ಷಗಳಿಂದ ತೊಡಗಿಸಿಕೊಳ್ಳುತ್ತ ಬಂದಿದ್ದಾರೆ. ಅವರೆಲ್ಲರಿಗೂ ಈಗ ಕೋವಿಡ್‌-19 ದೊಡ್ಡ ಆತಂಕವನ್ನೇ ತಂದಿಟ್ಟಿದೆ.

ಅಷ್ಟಿಷ್ಟು ಆದಾಯ
ಮನೆಯಲ್ಲೇ ಇದ್ದುಕೊಂಡು ಬೀಡಿ ಸುತ್ತಿ ಗುತ್ತಿಗೆದಾರ ಅಥವಾ ಏಜೆನ್ಸಿಗಳಿಗೆ ಅದನ್ನು ನೀಡಿ ಕೂಲಿ ಪಡೆಯುತ್ತಿದ್ದರು. ಬಹುತೇಕ ಮಹಿಳೆಯರು ಬೀಡಿ ಸುತ್ತುವುದರಿಂದ ಸ್ವಾವಲಂಬಿಗಳಾಗಿದ್ದರು. ಮನೆಯ ಖರ್ಚು, ಮಕ್ಕಳ ಶಿಕ್ಷಣದ ವೆಚ್ಚವನ್ನು ಕೂಡಿಟ್ಟ ಅಷ್ಟಿಷ್ಟು ಆದಾಯದಿಂದ ಭರಿಸುತ್ತಿದ್ದರು. ಅವರೆಲ್ಲರ ಆದಾಯಕ್ಕೆ ಈಗ ಕೋವಿಡ್‌-19 ಹೊಡೆತ ನೀಡಿದೆ.

ಅಸಂಘಟಿತ ಕಾರ್ಮಿಕರ ಅಡಿಯಲ್ಲಿ ಬರುವ ಬೀಡಿ ಕೈಗಾರಿಕೆಯಲ್ಲಿ ಜಿಲ್ಲೆಯಲ್ಲಿ 50 ಸಾವಿರ ಸಂಖ್ಯೆಯ ಮಹಿಳಾ ಬೀಡಿ ಕಾರ್ಮಿಕರಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳ ಹಳ್ಳಿ ಹಳ್ಳಿಗಳಿಗೆ ಬೀಡಿ ಉದ್ಯಮ ಹರಡಿಕೊಂಡಿದ್ದು, ಲಾಕ್‌ಡೌನ್‌ ಸಮಸ್ಯೆ ಈ ವಲಯದ ಕಾರ್ಮಿಕರನ್ನು ಅತಿಯಾಗಿ ಕಾಡುತ್ತಿದೆ. ಕಳೆದ 23 ದಿನಗಳಿಂದ ಕೂಲಿಯೂ ಸಿಗದೆ, ಕಟ್ಟಿದ ಬೀಡಿಯನ್ನು ಏಜೆಂಟರು ಪಡೆಯದ ಕಾರಣದಿಂದ ಕಾರ್ಮಿಕರು ಸಂಕಷ್ಟದ ಸುಳಿಗೆ ಸಿಲುಕಿದ್ದಾರೆ. ಬೀಡಿ ಉದ್ಯಮ ಬಾಗಿಲು ಮುಚ್ಚಿದೆ. ಇದರಿಂದ ಕಾರ್ಮಿಕರು ಮತ್ತು ಅವರು ಕುಟುಂಬದವರು ಹಸಿವಿಗೆ ಗುರಿಯಾಗಿದ್ದಾರೆ. ಈ ವಲಯದ ಕಾರ್ಮಿಕರಿಗೆ ಬಹು ದೊಡ್ಡ ಹೊಡೆತ ನೀಡಿದೆ.

ಮಾಲಕರು,ಸರಕಾರ ನೆರವಿಗೆ ಬರಬೇಕು
ಬೀಡಿ ಕಾರ್ಮಿಕರ ಕುಟುಂಬ ನಿರ್ವಹಣೆಗಾಗಿ ಆರ್ಥಿಕ ನೆರವಿನ ಅಗತ್ಯವಿದೆ. ಮಾಲಕರು ಮತ್ತು ಸರಕಾರ ದಿನವೊಂದಕ್ಕೆ 200 ರೂ.ನಂತೆ ಒಂದು ತಿಂಗಳ ಭತ್ತೆ 6 ಸಾವಿರ ರೂ.ಗಳನ್ನು ಎಲ್ಲ ಬೀಡಿ ಕಾರ್ಮಿಕರಿಗೆ ನೀಡಬೇಕು. ಇತರೆ ಕಾರ್ಮಿಕರಂತೆ ಬೀಡಿ ಕಾರ್ಮಿಕರಿಗೂ ಲಾಕ್‌ಡೌನ್‌ ಅವಧಿಯ ವೇತನವನ್ನು ಬೀಡಿ ಮಾಲಕರು ನೀಡಿದ್ದಲ್ಲಿ ಪರಿಸ್ಥಿತಿ ಚೇತರಿಕೆಯಾಗಬಹುದು ಎನ್ನುತ್ತಾರೆ ಉಡುಪಿ ಸಿಐಟಿಯು ಕಾರ್ಮಿಕ ಮುಖಂಡ ಬಾಲಕೃಷ್ಣ.

ಸರಕಾರಕ್ಕೆ ಮನವಿ
ಅಖೀಲ ಭಾರತ ಬೀಡಿ ಫೆಡರೇಶನ್‌ ಮೂಲಕ ಕೇಂದ್ರ, ರಾಜ್ಯ ಸರಕಾರಕ್ಕೆ ಮನವಿ ಮಾಡಿ ದ್ದೇವೆ. ಕಾರ್ಮಿಕ ಕಲ್ಯಾಣ ನಿಧಿ ಹಣ ಬಳಸಿ ಕೊಂಡು ಮಹಿಳೆಯರ ಖಾತೆಗೆ ಹಣ ಪಾವತಿಸಿ ಅವರ ಬದುಕನ್ನು ಉಜ್ವಲಗೊಳಿಸುವ ಕೆಲಸವಾಗ ಬೇಕು. ಆದರೇ ಎರಡೂ ಸರಕಾರಗಳು ಬೇಡಿಕೆಗೆ ಸ್ಪಂದಿಸದೆ ಇರುವುದು ಬೇಸರ ತಂದಿದೆ.
-ಮಹಾಬಲ ವಡೇರಹೋಬಳಿ,
ಅಧ್ಯಕ್ಷರು, ಜಿಲ್ಲಾಬೀಡಿ ಕಾರ್ಮಿಕರ ಫೆಡರೇಶನ್‌, ಉಡುಪಿ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.