ಮಲ್ಪೆ ಬೀಚ್ಗೆ ಹರಿದು ಬಂದ ಜನಸಾಗರ
Team Udayavani, Nov 15, 2020, 10:36 PM IST
ಮಲ್ಪೆ: ಇಲ್ಲಿನ ಕಡಲತೀರದಲ್ಲಿ ರವಿವಾರ ಸಂಜೆ ಕಣ್ಣು ಹಾಯಿಸಿದಷ್ಟು ಉದ್ದಕ್ಕೂ ಜನಸಾಗರ. ದೀಪಾವಳಿ ಹಬ್ಬದ ಪ್ರಯುಕ್ತ ಮಲ್ಪೆ ಬೀಚ್ಗೆ ಸ್ಥಳೀಯರು ಸೇರಿದಂತೆ ಪ್ರವಾಸಿಗರ ದಂಡು ಹರಿದು ಬಂದಿದೆ.
ಮಲ್ಪೆ ಕಡಲತೀರದಲ್ಲಿ ಪ್ರವಾಸಿಗರ ಮನೋರಂಜನೆಗೆ ಜೆಟ್ಸ್ಕೀ, ಸ್ಪೀಡ್ಬೋಟ್, ಬನಾನಾ ರೈಡ್, ವಿಂಚ್ ಪ್ಯಾರಾಸೈಲಿಂಗ್ ಸೇರಿದಂತೆ ವಿವಿಧ ಬಗೆಯ ಜಲಸಾಹಸ ಕ್ರೀಡೆಗಳು ಆರಂಭಗೊಂಡಿರುವುದು ಇಷ್ಟರ ವರೆಗೆ ಕೊರೊನಾ ಭೀತಿಯಿಂದ ಮನೆಯೊಳಗೇ ಕುಳಿತಿದ್ದ ಜನರಲ್ಲಿ ಉಲ್ಲಾಸ ಮೂಡಿಸಿದೆ.
ಲಾಕ್ಡೌನ್ ತೆರವಿನ ಬಳಿಕ ಬೀಚ್ಗೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರತೀ ದಿನ ಸುಮಾರು 3,000 ಜನ, ವಾರಾಂತ್ಯದಲ್ಲಿ 7ರಿಂದ 8 ಸಾವಿರ ಮಂದಿ ಭೇಟಿ ನೀಡುತ್ತಿದ್ದಾರೆ. ದೀಪಾವಳಿ ಪಾಡ್ಯದ ಪ್ರಯುಕ್ತ ರವಿವಾರ 25 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದರು. ಮಲ್ಪೆ ಸೀವಾಕ್ನಲ್ಲೂ ಜನಸಂದಣಿ ಕಂಡು ಬಂದಿದೆ.
ಮಧ್ಯಾಹ್ನದ ಬಳಿಕ ಬೀಚ್ ಸಂಪರ್ಕದ ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಪ್ರವಾಸಿಗರ ವಾಹನ ನಿಲುಗಡೆಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬೀಚ್ ನಿರ್ವಾಹಕರು ಪತ್ರಿಕೆಗೆ ತಿಳಿಸಿದ್ದಾರೆ.
ಮಟ್ಟು ಬೀಚ್ ಆಕರ್ಷಣೆ
ಕಟಪಾಡಿ: ಪ್ರವಾಸಿಗರ ಆಕರ್ಷ ಣೆಯ ಕೇಂದ್ರವಾಗಿ ಬೆಳೆಯುತ್ತಿರುವ ಪ್ರಕೃತಿಯ ರಮಣೀಯ ಮಟ್ಟು ಬೀಚ್ಗೂ ರವಿವಾರ ಪ್ರವಾಸಿಗರ ದಂಡು ಹರಿದು ಬಂದಿತ್ತು.
ಒಂದೆಡೆ ಪಿನಾಕಿನಿ ಹೊಳೆ, ಸೇತುವೆ, ಸಮುದ್ರ ಮತ್ತು ಹೊಳೆಯ ನಡುವಿನ ಪಯಣವು ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಮಟ್ಟು ಬೀಚ್ನತ್ತ ಸೆಳೆಯುವಂತೆ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ