2,757 ಹೆಕ್ಟೇರ್‌ನಲ್ಲಿ ಹಿಂಗಾರು ಭತ್ತದ ಕೃಷಿ ನಾಟಿ ಪೂರ್ಣ

ನಾಟಿಯಾದ ಕೃಷಿಗೆ ಜಿಗಿಹುಳು ಬಾಧೆ

Team Udayavani, Dec 29, 2020, 6:05 AM IST

2,757 ಹೆಕ್ಟೇರ್‌ನಲ್ಲಿ ಹಿಂಗಾರು ಭತ್ತದ ಕೃಷಿ ನಾಟಿ ಪೂರ್ಣ

ನಾಟಿ ಪೂರ್ಣಗೊಂಡ ಭತ್ತದ ಗದ್ದೆ.

ಅಜೆಕಾರು: ಹಿಂಗಾರು ಭತ್ತದ ಬೆಳೆ ನಾಟಿ ಕಾರ್ಯವು ಜಿಲ್ಲೆಯಲ್ಲಿ ಬಹುತೇಕ ಪೂರ್ಣಗೊಂಡಿದೆ. ಆದರೆ ಕಾರ್ಕಳ ಸೇರಿದಂತೆ ಕೆಲವು ಭಾಗಗಳಲ್ಲಿ ನಾಟಿಯ ಕೆಲವೇ ದಿನದಲ್ಲಿ ನೇಜಿಗೆ ಜಿಗಿಹುಳು ಬಾಧೆ ಉಂಟಾಗಿದೆ.

2757 ಹೆಕ್ಟೇರ್‌ನಲ್ಲಿ ನಾಟಿ
ಜಿಲ್ಲೆಯಲ್ಲಿ ಸುಮಾರು 4000 ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರು ಭತ್ತ ನಾಟಿ ಮಾಡುವ ಗುರಿಯನ್ನು ಕೃಷಿ ಇಲಾಖೆ ಹೊಂದಿತ್ತು. ಇದರಲ್ಲಿ 2757 ಹೆಕ್ಟೇರ್‌ ಪ್ರದೇಶದಲ್ಲಿ ನಾಟಿ ಕಾರ್ಯವಾಗಿದೆ.

ಕಾರ್ಕಳ ತಾಲೂಕಿನಲ್ಲಿ 1800 ಹೆಕ್ಟೇರ್‌ ಪ್ರದೇಶದಲ್ಲಿ ನಾಟಿ ಮಾಡುವ ಗುರಿ ಹೊಂದಲಾಗಿದ್ದು ಇದರಲ್ಲಿ 1747 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನಾಟಿ ಪೂರ್ಣಗೊಂಡಿದೆ. ಕುಂದಾಪುರ ತಾಲೂಕಿನಲ್ಲಿ 1400 ಹೆಕ್ಟೇರ್‌ನಲ್ಲಿ ಗುರಿ ಹೊಂದಲಾಗಿದ್ದು ಇದರಲ್ಲಿ 410 ಹೆಕ್ಟೇರ್‌ ನಾಟಿಯಾಗಿದೆ. ಉಡುಪಿ ತಾಲೂಕಿನಲ್ಲಿ 800 ಹೆಕ್ಟೇರ್‌ ಪ್ರದೇಶದಲ್ಲಿ ಗುರಿ ಹೊಂದಲಾಗಿದ್ದು ಇದರಲ್ಲಿ 600 ಹೆಕ್ಟೇರ್‌ ಸಾಧನೆ ಮಾಡಲಾಗಿದೆ. ಕಳೆದ ವರ್ಷ 3632 ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರು ಭತ್ತ ನಾಟಿ ಮಾಡಲಾಗಿತ್ತು.

ಹುಳು ಬಾಧೆ
ಕಾರ್ಕಳ ರೈತ ಸಂಪರ್ಕ ಕೇಂದ್ರ ಹಾಗೂ ಅಜೆಕಾರು ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ನಾಟಿಯಾದ ಪ್ರದೇಶದಲ್ಲಿ ಜಿಗಿಹುಳು ಬಾಧೆ ಕಾಣಿಸಿಕೊಂಡಿದೆ. ಕಳೆದ ವರ್ಷ ಕಾರ್ಕಳ ತಾಲೂಕಿನ ಭತ್ತ ಬೆಳೆಯುವ ಪ್ರದೇಶಗಳ ಪೈಕಿ ಶೇ.30ರಷ್ಟು ಜಿಗಿಹುಳು ಬಾಧೆಗೆ ಒಳಪಟ್ಟಿತ್ತು.

ಒಮ್ಮೆ ಹುಳಬಾಧೆ ಪ್ರಾರಂಭಗೊಂಡರೆ ಸಂಪೂರ್ಣ ಗದ್ದೆಗೆ ಆವರಿಸಿ ಪೈರು ಒಣಗಿಹೋದಂತೆ ಕಾಣುತ್ತದೆ. ಹುಳಗಳು ಭತ್ತದ ಗದ್ದೆಯ ನೀರಿನ ಮೇಲ್ಭಾಗ ಹಾಗೂ ಭತ್ತದ ಪೈರಿನ ಬುಡಭಾಗದಲ್ಲಿ ಕುಳಿತು ಎಲೆಗಳಿಂದ ರಸ ಹೀರುವುದರಿಂದ ಭತ್ತದ ಪೈರಿನ ಬೆಳವಣಿಗೆ ಕುಂಠಿತಗೊಂಡು ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದರಿಂದ ಭತ್ತದ ಪೈರು ಹಿಳ್ಳೆ ಹೊಡೆಯದೆ ಹಾನಿಗೊಳ್ಳುತ್ತದೆ. ಹಿಂದೆಯೂ ಭತ್ತದ ಬೆಳೆಗೆ ಹುಳುಬಾಧೆ ಇತ್ತಾದರೂ ಕಳೆದ 2-3 ವರ್ಷಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದ್ದು ರೈತರು ಹುಳುಬಾಧೆಯಿಂದ ಕಂಗೆಡುವಂತಾಗಿದೆ.

ಮುನ್ನೆಚ್ಚರಿಕೆ
ಹುಳುಬಾಧೆ ತಡೆಯಲು ಗದ್ದೆಯ ನೀರನ್ನು ಬಸಿದು ಹೋಗುವಂತೆ ಮಾಡಿ ತೇವಾಂಶ ಕಡಿಮೆಯಾಗಿರುವಂತೆ ಮಾಡಬೇಕು. ಹುಳುಬಾಧೆಗೆ ಒಳಪಟ್ಟ ಭತ್ತದ ಪೈರಿಗೆ ಯೂರಿಯಾ ಬಳಸುವುದರಿಂದ ರೋಗಬಾಧೆ ಉಲ್ಬಣಗೊಳ್ಳುತ್ತದೆ. ಆದ್ದರಿಂದ ಅದನ್ನು ಬಳಸದಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಹುಳುಬಾಧೆ ಹತೋಟಿ
ಅಸಿಫೇಟ್‌ ಕೀಟನಾಶಕದಿಂದ ಹುಳ ಬಾಧೆ ಕಡಿಮೆ ಮಾಡಬಹುದು. ಇದರ ಬಳಕೆ ಹೀಗಿದೆ; 1.5 ಗ್ರಾಂ ಅಸಿಫೇಟ್‌ ಕೀಟನಾಶಕವನ್ನು 1 ಲೀಟರ್‌ ನೀರಿಗೆ ಮಿಶ್ರ ಮಾಡಿ ಬೆಳಗ್ಗೆ 9 ಗಂಟೆ ಮೊದಲು ಅಥವಾ ಸಂಜೆ 4 ಗಂಟೆ ಅನಂತರ ಸಿಂಪಡಿಸಬೇಕು. ಈ ರಾಸಾಯನಿಕವನ್ನು ರೈತರು ಸಹಾಯಧನದ ಮೂಲಕ ರೈತ ಸಂಪರ್ಕ ಕೇಂದ್ರದಲ್ಲಿ ಪಡೆದುಕೊಳ್ಳಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಬಾರಿ ಹುಳು ಬಾಧೆ ಕಡಿಮೆ
ಹಿಂಗಾರು ಭತ್ತ ನಾಟಿ ಜಿಲ್ಲೆಯಲ್ಲಿ ಬಹುತೇಕ ಪೂರ್ಣಗೊಂಡಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಲ್ಲಿ ಈ ಬಾರಿ ಜಿಲ್ಲೆಯಲ್ಲಿ ಜಿಗಿ ಹುಳು ಬಾಧೆ ಕಡಿಮೆ. ಹುಳು ಬಾಧೆ ತಡೆಯುವ ನಿಟ್ಟಿನಲ್ಲಿ ಅಸಿಫೇಟ್‌ ಕೀಟನಾಶಕವನ್ನು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಇಡಲಾಗಿದೆ.
– ಎಚ್‌.ಕೆಂಪೇ ಗೌಡ , ಜಂಟಿ ಕೃಷಿ ನಿರ್ದೇಶಕರು, ಉಡುಪಿ ಜಿಲ್ಲೆ

ಹೆಚ್ಚಿನ ಹಾನಿಯಾಗಿಲ್ಲ
ಹುಳು ಬಾಧೆಯಿಂದ ಭತ್ತದ ಕೃಷಿ ಹಾನಿಗೊಳ್ಳುತ್ತದೆ. ಈ ಬಾರಿ ಕೃಷಿ ಇಲಾಖೆಯಲ್ಲಿ ಹುಳು ಬಾಧೆಯ ಕೀಟ ನಾಶಕ ನಾಟಿ ಸಂದರ್ಭದಲ್ಲಿಯೇ ದೊರೆತಿರುವುದರಿಂದ ಹೆಚ್ಚಿನ ಹಾನಿ ತಡೆಯಲು ಸಾಧ್ಯವಾಗಿದೆ. -ನರಸಿಂಹ ನಾಯಕ್‌ ಮರ್ಣೆ, ಭತ್ತ ಬೆಳೆಯುವ ರೈತ

ಜಗದೀಶ್‌ ಅಂಡಾರು

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.