ಗುತ್ತಿಗೆದಾರರಿಗೆ ಡಿಸಿ ಎಚ್ಚರಿಕೆ: ಕಾರ್ಮಿಕರನ್ನು ರಸ್ತೆ ಬದಿ ಬಿಟ್ಟರೆ ಕ್ರಿಮಿನಲ್ ಕೇಸು
Team Udayavani, May 13, 2020, 11:01 AM IST
ಸಾಂದರ್ಭಿಕ ಚಿತ್ರ
ಉಡುಪಿ: ಕಟ್ಟಡ ನಿರ್ಮಾಣ ಸಹಿತ ನಿರ್ಮಾಣ ಹಂತದ ಕೆಲಸಗಳನ್ನು ಮಾಡುವ ವೇಳೆ ಗುತ್ತಿಗೆದಾರರು ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಂಡ ಬಳಿಕ ಎಲ್ಲೆಂದರಲ್ಲಿ ಅಥವಾ ರಸ್ತೆ ಬದಿಗಳಲ್ಲಿ ಬಿಟ್ಟು ಹೋದರೆ ಅಂತಹ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದು ನಗರದಲ್ಲಿ ವಾಸವಿದ್ದ 7 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಜಿಲ್ಲಾಡಳಿತ ಈಗಾಗಲೇ ಅವರ ಊರುಗಳಿಗೆ ಕಳುಹಿಸಿಕೊಟ್ಟಿದೆ. ಹೀಗಾಗಿ ಗುತ್ತಿಗೆದಾರರು ಪಕ್ಕದ ಹಳ್ಳಿಗಳ ಕಾರ್ಮಿಕರನ್ನು ಅವರಿರುವ ಸ್ಥಳದಿಂದಲೇ ವಾಹನಗಳ ಮೂಲಕ ಕರೆತಂದು ಕಟ್ಟಡ ನಿರ್ಮಾಣ ಇತ್ಯಾದಿ ಕೆಲಸಗಳನ್ನು ಮಾಡಿಸುತ್ತಿದ್ದಾರೆ. ಇವರನ್ನು ಕರೆತಂದ ಸ್ಥಳಕ್ಕೆ ಮರಳಿ ಬಿಡುವುದು ಗುತ್ತಿಗೆದಾರರ ಜವಾ ಬ್ದಾರಿ. ಈ ಕೆಲಸವನ್ನು ಕರೆತಂದವರೇ ಮಾಡಬೇಕು. ಕಾರ್ಮಿಕರನ್ನು ಅರ್ಧದಲ್ಲಿ ಬಿಡು ವಂತಿಲ್ಲ. ಅಮಾನವೀಯವಾಗಿ ನಡೆಸಿಕೊಳ್ಳುವಂತಿಲ್ಲ. ಅಂತಹ ಗುತ್ತಿಗೆದಾರರ ಮೇಲೆ ಕಣ್ಣಿಡಲು ಎಲ್ಲ ತಹಶೀಲ್ದಾರ್ಗಳಿಗೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ಬೇರೆ ರಾಜ್ಯದ ಕಾರ್ಮಿಕರು ಉಳಿದುಕೊಂಡಿದ್ದರೆ, ಅವರನ್ನು ಗುತ್ತಿಗೆದಾರರು ಊರಿಗೆ ಕಳುಹಿಸಿ ಕೊಡುವ ವ್ಯವಸ್ಥೆ ಮಾಡಬೇಕು. ಕಳುಹಿಸುವವರೆಗೆ ಊಟ-ತಿಂಡಿಯ ವ್ಯವಸ್ಥೆ ಯನ್ನು ಗುತ್ತಿಗೆದಾರರು ಮಾಡಬೇಕು. ಇಷ್ಟು ದಿನ ದುಡಿಸಿ ಈಗ ಕೈಬಿಡುವುದು ಕೂಡ ಮಾನವೀಯ ಲಕ್ಷಣ ಅಲ್ಲ ಎಂದು ಡಿಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ