ಕೆದಿಂಜೆಯಲ್ಲಿ ತಂಗುದಾಣ ನಿರ್ಮಿಸಲು ಆಗ್ರಹ

ಮಳೆ ಬಿಸಿಲಿಗೆ ಸುಸ್ತಾಗುತ್ತಿರುವ ಪ್ರಯಾಣಿಕರು

Team Udayavani, Sep 20, 2022, 11:31 AM IST

5

ಬೆಳ್ಮಣ್‌: ಕಾರ್ಕಳ-ಪಡುಬಿದ್ರಿ ಹೆದ್ದಾರಿಯ ಮಂಜರಪಲ್ಕೆಯ ಕೆದಿಂಜೆಯಲ್ಲಿ ತಂಗುದಾಣವಿಲ್ಲದೆ ಪ್ರಯಾಣಿಕರು ಮಳೆ ಬಿಸಿಲಿನಿಂದ ಬಸವಳಿಯುತ್ತಿದ್ದು ಶೀಘ್ರ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಬೋಳ-ಕಾಂತಾವರ-ಬೇಲಾಡಿ ಕಡೆಯಿಂದ ಕಾರ್ಕಳ, ಮಂಗಳೂರು, ಉಡುಪಿ ಕಡೆ ಪ್ರಯಾಣಿಸುವ ಜನ ಇಲ್ಲಿ ಬಸ್‌ಗಾಗಿ ಕಾಯುತ್ತಾರೆ. ಅಗತ್ಯವಾಗಿ ತಂಗುದಾಣ ಬೇಕಾಗಿದ್ದು ಬಹು ಕಾಲಗಳಿಂದ ಬೇಡಿಕೆ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಹಿಂದೆ ಕೆಡವಲಾಗಿತ್ತು

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿ ವಿಸ್ತರಣೆಯ ಸಂದರ್ಭ ಕೆಡವಲಾದ ಕೆದಿಂಜೆ ಮಂಜರಪಲ್ಕೆಯ ಪ್ರಯಾಣಿಕರ ತಂಗುದಾಣವನ್ನು ಮತ್ತೆ ನಿರ್ಮಿಸದೆ ಇರುವುದರಿಂದ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ. ಬೋಳ, ಬರಬೈಲು, ಕಾಂತಾವರ, ಬೇಲಾಡಿ, ವಂಜಾರಕಟ್ಟೆ, ಬೆಳುವಾಯಿ ಮಾರ್ಗವಾಗಿ ಮೂಡುಬಿದಿರೆ ಕಡೆಗೆ ಪ್ರಯಾಣಿಸುವ ಜನ ಬಸ್‌ ಪ್ರಯಾಣಕ್ಕಾಗಿ ಕಾಯಲು ಆಸರೆಯಿಲ್ಲದೆ ತೊಂದರೆಗೀಡಾಗಿದ್ದಾರೆ ಅಲ್ಲದೆ ಕೆದಿಂಜೆಯಿಂದ ಬೆಳ್ಮಣ್‌, ಪಡುಬಿದ್ರಿ, ಮಂಗಳೂರು ಕಡೆ ಪ್ರಯಾಣಿಸುವ ಪ್ರಯಾಣಿಕರು ರಸ್ತೆ ಬದಿ ಮಳೆ, ಬಿಸಿಲಿಗೆ ಮೈಯ್ಯೊಡ್ಡಿ ಬಸ್‌ಗಾಗಿ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಹಿಂದೆ ಬೋಳ ಹಾಗೂ ಬೆಳ್ಮಣ್‌ ಕಡೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಆಸರೆಯಾಗಿದ್ದ ಬಸ್‌ ತಂಗುದಾಣವನ್ನು ಹಲವು ವರ್ಷಗಳ ಹಿಂದೆ ಹೆದ್ದಾರಿ ವಿಸ್ತರಣೆಯ ಸಂದರ್ಭ ಕೆಡವಲಾಗಿದ್ದು ಇದರ ವಿರುದ್ಧ ದಿಕ್ಕಿನಲ್ಲಿ ಕಾರ್ಕಳ ಕಡೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸುಸಜ್ಜಿತ ಬಸ್ಸು ತಂಗುದಾಣವನ್ನು ಕೆಶಿಪ್‌ ನಿರ್ಮಿಸಿತ್ತು. ಆದರೆ ಬೋಳ, ಕಾಂತಾವರ ಹಾಗೂ ಬೆಳ್ಮಣ್‌ ಕಡೆ ಪ್ರಯಾಣಿಸುವ ಪ್ರಯಾಣಿಕರಿಗೆ ತಂಗುದಾಣವನ್ನು ನಿರ್ಮಿಸದೆ ಇದೀಗ ಪ್ರಯಾಣಿಕರಿಗೆ ಅಂಗಡಿ, ಬೇಕರಿ ಹಾಗೂ ಗೂಡಂಗಡಿಗಳೇ ಆಸರೆಯಾಗಿದೆ.

ಕಾರ್ಕಳ -ಪಡುಬಿದ್ರಿ ರಾಜ್ಯ ಹೆದ್ದಾರಿಯ‌ಲ್ಲಿ ಸುಮಾರು 32 ಸುಸಜ್ಜಿತ ಪ್ರಯಾಣಿಕರ ತಂಗುದಾಣ ಗಳನ್ನು ನಿರ್ಮಿಸಿರುವ ಕೆಶಿಪ್‌ ಸಂಸ್ಥೆಯವರು ಮಂಜರಪಲ್ಕೆಯಲ್ಲಿಯೂ ಒಂದು ಬಸ್‌ ತಂಗುದಾಣ ನಿರ್ಮಿಸಿಕೊಡಿ ಎನ್ನುವುದು ಜನರ ಬೇಡಿಕೆಯಾಗಿದೆ.

ಪ್ರಯಾಣಿಕರು ಹೆದ್ದಾರಿ ಪಕ್ಕದ ಬೇಕರಿ, ಅಂಗಡಿ ಹಾಗೂ ಮೆಡಿಕಲ್‌ಗ‌ಳ ಆಶ್ರಯ ಪಡೆಯುತ್ತಿದ್ದು ಇದರಿಂದ ಅಂಗಡಿಯವರಿಗೂ ವ್ಯಾಪಾರಕ್ಕೆ ತೊಂದರೆ ಉಂಟಾಗಿದೆ.

ಜಮೀನು ಸಮಸ್ಯೆ

ಹೆದ್ದಾರಿ ನಿರ್ಮಾಣದ ವೇಳೆಯಲ್ಲಿ ಹಿಂದೆ ಇದ್ದ ಪ್ರಯಾಣಿಕರ ತಂಗುದಾಣವನ್ನು ಸಂಪೂರ್ಣ ಕೆಡವಲಾಗಿತ್ತು. ಆದರೆ ಮತ್ತೆ ಅದೇ ಜಾಗದಲ್ಲಿ ತಂಗು ದಾಣವನ್ನು ನಿರ್ಮಿಸಲು ಖಾಸಗಿ ಜಾಗದ ಸಮಸ್ಯೆ ಎದುರಾಗಿದೆ. ಇದರಿಂದ ಸುತ್ತ ಮುತ್ತಲಲ್ಲಿ ಖಾಸಗಿ ಜಮೀನು ಇರುವುದರಿಂದ ಎಲ್ಲೂ ಕೂಡ ಸರಿಯಾದ ತಂಗುದಾಣವನ್ನು ನಿರ್ಮಿಸಲು ಇಲಾಖೆಯಾಗಲೀ ಸ್ಥಳೀಯಾಡಳಿತಕ್ಕಾಗಲೀ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ನಂದಳಿಕೆ ಗ್ರಾಮ ಪಂಚಾಯತ್‌ ಕೂಡ ಶ್ರಮಿಸಿದ್ದರೂ ಪ್ರಯೋಜನವಾಗಿಲ್ಲ.

ಬೆಳೆಯುತ್ತಿರುವ ಕೆದಿಂಜೆ ಜಂಕ್ಷನ್‌ನಲ್ಲಿ ಸೂಕ್ತ ಬಸ್‌ ತಂಗುದಾಣದ ಕೊರತೆಯನ್ನು ಇಲಾಖೆ ಹಾಗೂ ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಬಹು ವರ್ಷದ ಬೇಡಿಕೆ ಈಡೇರುವಲ್ಲಿ ಸ್ಥಳೀಯಾಡಳಿತ ಜತೆ ಖಾಸಗಿಯವರೂ ಕೈ ಜೋಡಿಸಬೇಕಾಗಿದೆ. ಬಿಸಿಲು ಮಳೆಯಿಂದ ಪ್ರಯಾಣಿಕರು ಆಸರೆಯನ್ನು ಪಡೆಯಲು ಕೂಡಲೇ ಕೆದಿಂಜೆಯಲ್ಲೊಂದು ತಂಗುದಾಣ ನಿರ್ಮಿಸು ವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಸ್ತೆ ಬದಿಯಲ್ಲಿ ಕಾಯಬೇಕು: ಇಲ್ಲಿ ಸುಸಜ್ಜಿತ ಬಸ್‌ ತಂಗುದಾಣದ ಅಗತ್ಯ ಇದೆ. ವಿದ್ಯಾರ್ಥಿಗಳು, ವೃದ್ಧರು, ಎಲ್ಲರೂ ಮಳೆ ಬಿಸಿಲಿಗೆ ರಸ್ತೆ ಬದಿಯಲ್ಲಿ ನಿಂತು ಬಸ್‌ಕಾಯುವಂತಾಗಿದೆ. ಮಕ್ಕಳು ಮಳೆ ಬರುವ ಸಂದರ್ಭ ಒದ್ದೆಯಾಗಿ ರಸ್ತೆ ಬದಿಯಲ್ಲೇ ನಿಂತು ಬಸ್‌ ಕಾಯುವಂತಾಗಿದೆ. –ಸಂತೋಷ್‌ ಬೋಳ, ಗ್ರಾಮಸ್ಥ

ಜಾಗದ ಸಮಸ್ಯೆ: ಇಲ್ಲಿ ಪ್ರಯಾಣಿಕರ ತಂಗುದಾಣದ ಆವಶ್ಯಕತೆಯಿದ್ದು ಹಲವಾರು ಬೇಡಿಕೆಗಳು ಬಂದಿವೆ. ಈ ಬಗ್ಗೆ ಹಲವು ಬಾರಿ ಪ್ರಯತ್ನಗಳು ನಡೆದರೂ ಇಲ್ಲಿ ಜಾಗದ ಸಮಸ್ಯೆಯಿಂದ ತಂಗುದಾಣ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಯತ್ನಗಳು ನಡೆಯುತ್ತಿದೆ. ಖಾಸಗಿ ಜಮೀನಿನ ಮಾಲಕರು ಜಾಗ ಬಿಟ್ಟು ಕೊಟ್ಟಲ್ಲಿ ತಂಗುದಾಣವನ್ನು ನಿರ್ಮಿಸಲು ಪಂಚಾಯತ್‌ ಸಿದ್ದವಿದೆ.-ನಿತ್ಯಾನಂದ ಅಮೀನ್‌, ನಂದಳಿಕೆ ಗ್ರಾ.ಪಂ.ಅಧ್ಯಕ್ಷ

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.