ಪರ್ಯಾಯ ಉತ್ಸವಕ್ಕೆ ಕಣ್ಮನ ಸೆಳೆವ ದೇಸೀ ಶೈಲಿಯ ಅಲಂಕಾರ


Team Udayavani, Jan 12, 2020, 12:47 AM IST

n-34

ಉಡುಪಿ: ಪರ್ಯಾಯ ಉತ್ಸವದ ನಿಮಿತ್ತ ನಗರ ಕಳೆಗಟ್ಟುತ್ತಿದ್ದು, ಮೆರವಣಿಗೆ ಹಾದು ಬರುವ ಮಾರ್ಗದಲ್ಲಿ ಸಾಂಪ್ರದಾಯಿಕ ಅಲಂಕಾರಕ್ಕೆ ಆದ್ಯತೆ ನೀಡಲಾಗಿದೆ.

ಬಾಳೆಗಿಡದ ಆಕರ್ಷಣೆ
ಪುರಪ್ರವೇಶಕ್ಕೆ ಮಾಡಿದ ಅಲಂಕಾರ ಕೆಲ ಭಾಗಗಳನ್ನು ಪರ್ಯಾಯ ದಿನದ ಮೆರವಣಿಗೆಗೆ ಬದಲಾಯಿ ಸಲಾಗುತ್ತದೆ. ಜ. 17ರಂದು ಇಲ್ಲಿ ತಳಿರುತೋರಣ, ಬಾಳೆಗಿಡಗಳನ್ನು ಹಾಕಲಾಗುವುದು. ಪುರಪ್ರವೇಶಕ್ಕೆ ಹಾಕಿದ ಬಾಳೆಗಿಡಗಳನ್ನು ಬುಡಸಹಿತ ಕಿತ್ತು ತಂದ ಕಾರಣ ಅವ‌ನ್ನು ವಾಪಸು ನೆಡಲಾಗಿದೆ. ಪರ್ಯಾಯ ಮೆರವಣಿಗೆ ದಿನವೂ ಬೇರುಸಹಿತ ಕಿತ್ತ ಬಾಳೆಗಿಡಗಳನ್ನು ತಂದು ನೆಡಲಾಗುವುದು ಮತ್ತು ಬಳಿಕ ವಾಪಸು ಆ ಗಿಡಗಳನ್ನು ತಂದ ಸ್ಥಳದಲ್ಲಿಯೇ ನೆಡಲಾಗುವುದು. ಬಾಳೆಗಿಡಗಳು ಹಾಳಾಗಬಾರದೆಂದು ಹೀಗೆ ಮಾಡಲಾಗಿದೆ.

ಪ್ಲಾಸ್ಟಿಕ್‌ ನಿಮೂಲನೆಗೆ ಪಣ ತೊಟ್ಟಂತಿರುವ ಶ್ರೀಕೃಷ್ಣಸೇವಾ ಬಳಗವು ಫ್ಲೆಕ್ಸ್‌ ಬ್ಯಾನರ್‌ಗಳಿಗೆ ಅವಕಾಶ ನೀಡಿಲ್ಲ. ಬ್ಯಾನರ್‌ ಮತ್ತು ಸ್ವಾಗತ ಕಮಾನುಗಳು ಪ್ಲಾಸ್ಟಿಕ್‌ರಹಿತವಾಗಿವೆ. 23 ದೊಡ್ಡ ಕಮಾನುಗಳು, 20 ಸಣ್ಣ ಕಮಾನುಗಳು ಸೇರಿದಂತೆ 43 ಕಮಾನುಗಳ ರಚನೆಯಾಗಿವೆ. ರಥಬೀದಿಯನ್ನು ಪ್ರವೇಶಿಸುವ ದಾರಿಯಲ್ಲಿ ಹಾಕಿದ ಕಮಾನುಗಳಲ್ಲಿ ಅದಮಾರು ಮಠದ ಹಿಂದಿನ 32 ಗುರುಗಳ ಹೆಸರುಗಳನ್ನು ಬರೆಯಲಾಗಿದೆ.

ಗೂಡುದೀಪಗಳ ಸೌಂದರ್ಯ
ಉಡುಪಿ ರಥಬೀದಿಯಿಂದ ಜೋಡುಕಟ್ಟೆವರೆಗೆ 400 ಕಂಬಗಳಲ್ಲಿ 800 ಗೂಡುದೀಪಗಳನ್ನು ಅಳವಡಿಸುವ ಕೆಲಸ ಶುಕ್ರವಾರ ರಾತ್ರಿಯಿಂದ ಆರಂಭಗೊಂಡಿದೆ. 100 ದೊಡ್ಡ ಬ್ಯಾನರ್‌ಗಳನ್ನು ಉಡುಪಿ ಸುತ್ತಮುತ್ತ, 70 ದೊಡ್ಡ ಬ್ಯಾನರ್‌ಗಳು ಮಂಗಳೂರಿನಿಂದ ಕುಂದಾಪುರದ ವರೆಗೆ, 200 ಸಣ್ಣ ಬ್ಯಾನರ್‌ಗಳು ಮಂಗಳೂರಿನಿಂದ ಕುಂದಾಪುರ, ಉಡುಪಿಯಿಂದ ಕಾರ್ಕಳದವರೆಗೆ ಕಟ್ಟಲಾಗಿದೆ. ಕಮಾನುಗಳ ಸುತ್ತ ಪ್ಲಾಸ್ಟಿಕ್‌ನಿಂದ ತಯಾರಿಸಿದ ಬಣ್ಣದ ಹೊದಿಕೆಯ ಬದಲು ಬಟ್ಟೆಗಳನ್ನೇ ಬಳಸಲಾಗಿದೆ. ಜನಪದ, ದೇಸೀ ಶೈಲಿ ಕಮಾನುಗಳಲ್ಲಿ ಕಾಣುತ್ತಿದೆ. ಶುಕ್ರವಾರ ರಾತ್ರಿಯಿಂದ ಬಂಟಿಂಗ್ಸ್‌ ಹಾಕಲಾಗುತ್ತಿದೆ. ಜೋಡುಕಟ್ಟೆಯಿಂದ ಕೇಸರಿ ಬಣ್ಣದ ಬಂಟಿಂಗ್‌ಗಳನ್ನು ಹಳೆಯ ಡಯಾನ ವೃತ್ತ, ಕೊಳದ ಪೇಟೆ, ತೆಂಕಪೇಟೆಯಲ್ಲಿ ಹಾಕಲಾಗಿದೆ. ಇನ್ನು ಕಲ್ಸಂಕ, ಬಡಗುಪೇಟೆ, ಪಾರ್ಕಿಂಗ್‌ ಪ್ರದೇಶದಲ್ಲಿ ಹಾಕಲಾಗುತ್ತದೆ. ಬಂಟಿಂಗ್ಸ್‌ ಎಲ್ಲವೂ ಬಟ್ಟೆಯಿಂದ ತಯಾರಿಸಿದ್ದಾಗಿದೆ. ಒಟ್ಟು 100 ಕೆ.ಜಿ. ಬಂಟಿಂಗ್ಸ್‌ಗಳನ್ನು ತರಿಸಲಾಗಿದೆ.

100ಕೆ.ಜಿ. ಬಟ್ಟೆ
ಒಟ್ಟು 100 ಕೆ.ಜಿ. ಬಟ್ಟೆಯ ಬಂಟಿಂಗ್ಸ್‌ ತರಿಸಿ ಪರ್ಯಾಯ ಮೆರವಣಿಗೆ ಬರುವ ಸ್ಥಳಗಳಲ್ಲಿ ಹಾಕಲಾಗುತ್ತಿದೆ. ಮುಂದೆ ಕಲ್ಸಂಕ ಮತ್ತು ರಾಜಾಂಗಣ ಪಾರ್ಕಿಂಗ್‌ ಪ್ರದೇಶ, ಬಡಗುಪೇಟೆಗೆ ಹಾಕಲಾಗುತ್ತದೆ.
-ಸುವರ್ಧನ ನಾಯಕ್‌, ಶ್ರೀಕೃಷ್ಣ ಸೇವಾ ಬಳಗ.

ಟಾಪ್ ನ್ಯೂಸ್

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.