![car](https://www.udayavani.com/wp-content/uploads/2024/07/car-7-415x248.jpg)
ಇಂದು ಸ್ವಾತಂತ್ರ್ಯೋತ್ಸವ; ಕೋವಿಡ್ ವಾರಿಯರ್ಸ್ಗೆ ಗೌರವ ಸೂಚಿಸುವ ವಿಭಿನ್ನ ತೈಲವರ್ಣ
Team Udayavani, Aug 15, 2020, 5:57 AM IST
![ಇಂದು ಸ್ವಾತಂತ್ರ್ಯೋತ್ಸವ; ಕೋವಿಡ್ ವಾರಿಯರ್ಸ್ಗೆ ಗೌರವ ಸೂಚಿಸುವ ವಿಭಿನ್ನ ತೈಲವರ್ಣ](https://www.udayavani.com/wp-content/uploads/2020/08/Covidwarriors-620x465.jpg)
ಕೋವಿಡ್ ವಾರಿಯರ್ಸ್ಗಳಿಗೆ ಗೌರವ ಸೂಚಿಸುವ ತೈಲ ಚಿತ್ರ.
ಉಡುಪಿ: ಇಂದು ಸ್ವಾತಂತ್ರೋತ್ಸವ. ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೊರೊನಾ ಮಹಾಮಾರಿ ಸಂದರ್ಭದಲ್ಲಿ ದೇಶದೆಲ್ಲೇಡೆ ಕೋವಿಡ್ -19 ಜಾಗೃತಿ ಮತ್ತು ಪರಿಹಾರ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಲಕ್ಷಾಂತರ ಕೊರೊನಾ ವಾರಿಯರ್ಸ್ಗಳಿಗೆ ಗೌರವ ಸೂಚಿಸುವ ತೈಲ ಚಿತ್ರಣವೊಂದು ಕಪ್ಪೆಟ್ಟು ಪರಿಸರದ ಕಲಾಕಾರರ ಕುಂಚದಲ್ಲಿ ಅತ್ಯಂತ ಸುಂದರವಾಗಿ ಮೂಡಿ ಬಂದಿದೆ. ಸ್ವಾತಂತ್ರೊéàತ್ಸವದಂದು ಕೊರೊನಾ ವಾರಿಯರ್ಗಳಿಗೆ ಈ ಮೂಲಕ ಗೌರವ ಸಲ್ಲಿಸುವ ಕೆಲಸ ನಡೆಯುತ್ತಿದೆ.
ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ಸದಸ್ಯರಾದ ಸುಧಾಕರ, ಹರೀಶ್, ಬಾಲಕೃಷ್ಣ, ಕೀರ್ತಿ, ದಯಾನಂದ್, ಸುನೀಲ್ ಅವರು ಸ್ವಂತ ಖರ್ಚಿನಿಂದ ಎಡೆಬಿಡದ ಮಳೆಯ ನಡುವೆ ಈ ಸುಂದರ ಅರ್ಥಪೂರ್ಣ ಚಿತ್ರಣವನ್ನು ಕಪ್ಪೆಟ್ಟು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಗೋಡೆಯಲ್ಲಿ ಪೈಂಟ್ ಮಾಡಿದ್ದಾರೆ.
ಸಂಸ್ಥೆಯ ಸ್ಥಾಪಕ ಸದಸ್ಯ ದಿ| ಪಾಂಡು ಕಪ್ಪೆಟ್ಟು ಇವರ ಸ್ಮರಣಾರ್ಥ ಪ್ರತೀ ವರ್ಷ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂತಹ ದೇಶ ಭಕ್ತಿ ಬಿಂಬಿಸುವ ಚಿತ್ರಣ ಸಂಸ್ಥೆಯ ಸದಸ್ಯರ ಕೊಡುಗೆಯಾಗಿ ಮೂಡಿ ಬರುತ್ತಿರುವುದು ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ.
ಜಿಲ್ಲಾಡಳಿತ ವತಿಯಿಂದ ಆಚರಣೆ
ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆ ಸಮಿತಿ ವತಿಯಿಂದ ಆ.15 ರಂದು ಬೆಳಗ್ಗೆ 9ಕ್ಕೆ ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ನಡೆಯಲಿದೆ. ಜಿಲ್ಲಾಧಿಕಾರಿ ಜಿ. ಜಗದೀಶ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ. ಈ ಸಂದರ್ಭ ಕೊರೊನಾ ವಾರಿಯರ್ರಿಗೆ ಸಮ್ಮಾನ ನಡೆಯಲಿದೆ.
ನೇರಪ್ರಸಾರ
ಕೋವಿಡ್ -19 ನಿಯಮಾವಳಿಯಂತೆ ಹೆಚ್ಚು ಜನಸೇರಲು ಅವಕಾಶ ಇಲ್ಲದ ಕಾರಣ ಸರಳವಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರಿಗೆ ಮನೆಯಲ್ಲಿಯೇ ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ನೇರ ಪ್ರಸಾರ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು Webcast URL: http://udupi.nic.in/webcast Facebook Live cast # Tag;- #dcudupi, # Aug15 udupi, #dcudupilive ಲಿಂಕ್ಗಳ ಮೂಲಕ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಬಹುದಾಗಿದೆ.
ಹಲವು ವರ್ಷಗಳಿಂದ ರಚನೆ
ಕಳೆದ ಹಲವು ವರ್ಷಗಳಿಂದ ಬೇರೆ ಬೇರೆ ವಿಷಯಗಳಾದ ಕಾರ್ಗಿಲ್ ವಿಜಯ ದಿವಸ್, ಪರಿಸರ ರಕ್ಷಣೆ ಬಗ್ಗೆ ವಿಶೇಷ ಕಲಾ ಚಿತ್ರ ರಚನೆ, ಡೈಸರ್, ಮಹಾತ್ಮಾ ಗಾಂಧಿ, ನರೇಂದ್ರ ಮೋದಿ, ಸ್ವಾಗತ ಕೋರುವ ಕಾಮನ್ ಬೋರ್ಡ್, ಭಾರತ ಮಾತೆಯನ್ನು ಭತ್ತದ ನೇಜಿಯಿಂದ ರಚನೆ ಮಾಡಿ ಶಾಲಾ ಮಕ್ಕಳಿಗೆ ಕೃಷಿ ಬಗ್ಗೆ ತಿಳಿವಳಿಕೆ ನೀಡಿ ಪರಿಸರ ನಾಗರಿಕ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![Screenshot (3) copy](https://www.udayavani.com/wp-content/uploads/2024/07/Screenshot-3-copy-150x83.jpg)
Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ](https://www.udayavani.com/wp-content/uploads/2024/07/arr-1-150x95.jpg)
27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ
![Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ](https://www.udayavani.com/wp-content/uploads/2024/07/CONGRESS-S-150x76.jpg)
Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
![7-uv-fusion](https://www.udayavani.com/wp-content/uploads/2024/07/7-uv-fusion-150x90.jpg)
UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.