ನ. 7: ಉಡುಪಿಗೆ ಶ್ರೀ ರಾಮಚಂದ್ರ ದೇವರ ದಿಗ್ವಿಜಯ ರಥಯಾತ್ರೆ
Team Udayavani, Nov 4, 2022, 9:04 AM IST
ಉಡುಪಿ: ಅಖಿಲ ಭಾರತೀಯ ಸಂತ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅಯೋಧ್ಯೆಯ ಪ್ರಭು ಶ್ರೀ ರಾಮಚಂದ್ರ ದೇವರ ದಿಗ್ವಿಜಯ ರಥಯಾತ್ರೆಯು ನ. 7ರಂದು ಉಡುಪಿಗೆ ಪ್ರವೇಶಿಸಲಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅ. 5ರಂದು ರಥಯಾತ್ರೆಗೆ ಚಾಲನೆ ನೀಡಿದ್ದು, 60 ದಿನಗಳಲ್ಲಿ 27 ರಾಜ್ಯಗಳಲ್ಲಿ 15,000 ಕಿ.ಮೀ. ಸಂಚರಿಸಿದೆ. ಬೆಳಗ್ಗೆ 10 ಗಂಟೆಗೆ ಉಡುಪಿಯ ಸಂತೆಕಟ್ಟೆಯ ಜಂಕ್ಷನ್ನಲ್ಲಿ ಧಾರ್ಮಿಕ ಸಭೆ ನಡೆಯಲಿದೆ.
ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಶಕ್ತಿ ಶಾಂತಾನಂದ ಮಹರ್ಷಿಯವರು ಹಾಗೂ ಅಯೋಧ್ಯೆ ಶ್ರೀ ರಾಮ ಮಂದಿರದ ನಿರ್ಮಾಣ ಟ್ರಸ್ಟ್ನ ವಿಶ್ವಸ್ತರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಕ್ಷೀರಾಭಿಷೇಕ: ರಥಯಾತ್ರೆ ಜತೆಗೆ ಅಯೋಧ್ಯೆಯಿಂದ ಬರುವ ಶ್ರೀ ರಾಮ ದೇವರ ವಿಗ್ರಹಕ್ಕೆ ಕ್ಷೀರಾಭಿಷೇಕ ಮಾಡುವ ಅವಕಾಶ ಭಕ್ತರಿಗೆ ಸಿಗ ಲಿದೆ. ಭಕ್ತರು ಶುದ್ಧ ಹಾಲಿನಲ್ಲಿ ಶ್ರೀರಾಮನ ಮೂರ್ತಿಗೆ ಅಭಿಷೇಕ ಮಾಡಬಹುದಾಗಿದೆ.
ಬೃಹತ್ ರ್ಯಾಲಿ: ಸಂತೆಕಟ್ಟೆಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವರೆಗೂ ದಿಗ್ವಿಜಯ ರಥಯಾತ್ರೆ ಸಾಗಲಿದೆ. ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಇರಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ