ಅರಣ್ಯಇಲಾಖೆ ಸಸಿಗಳಿಗೆ ರಿಯಾಯಿತಿ ಕಡಿತ: 3 ರೂ. ಇದ್ದ ಹಣ್ಣಿನ ಗಿಡಕ್ಕೆ ಈಗ 23 ರೂ.!


Team Udayavani, May 22, 2023, 8:00 AM IST

ಅರಣ್ಯಇಲಾಖೆ ಸಸಿಗಳಿಗೆ ರಿಯಾಯಿತಿ ಕಡಿತ: 3 ರೂ. ಇದ್ದ ಹಣ್ಣಿನ ಗಿಡಕ್ಕೆ ಈಗ 23 ರೂ.!

ಉಡುಪಿ: ಅರಣ್ಯ ಇಲಾಖೆಯು ಸಾರ್ವಜನಿಕ ವಿತರಣೆಗಾಗಿ ಸಸಿಗಳನ್ನು ಬೆಳೆಸುವ ಯೋಜನೆ (RSPD) ಅಡಿಯಲ್ಲಿ ವಿತರಿಸುವ ಗಿಡಗಳಿಗೆ ಈ ವರ್ಷ ರಿಯಾಯಿತಿಯನ್ನು ಕಡಿತಗೊಳಿಸಿದೆ.

ಸಸಿಗಳಿಗೆ ಶೇ. 80ರಿಂದ 90 ಇದ್ದ ರಿಯಾಯಿತಿ ದರವನ್ನು ಇದೀಗ ಶೇ. 50ಕ್ಕೆ ಇಳಿಸಲಾಗಿದೆ. ಈ ಬಗ್ಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ದರ ನಿಗದಿ ಪಡಿಸಿ ಸುತ್ತೋಲೆ ಹೊರಡಿಸಿದೆ. ವಿವಿಧ ಅಳತೆಗೆ ಸಂಬಂಧಿಸಿ 1 ರೂ., 3 ರೂ. ದರಕ್ಕೆ ಸಿಗುತ್ತಿದ್ದ ಗಿಡಗಳಿಗೆ ಇನ್ನೂ 5 ರೂ., 6 ರೂ., 23 ರೂ. ನೀಡಿ ಖರೀದಿಸಬೇಕಿದೆ.

ಮಳೆ ಬರುತ್ತಿದ್ದಂತೆ ಕೃಷಿ ಚಟುವಟಿಕೆ ಆರಂಭವಾಗಲಿದ್ದು, ಮತ್ತೂಂದೆಡೆ ಅರಣ್ಯ ಇಲಾಖೆ ಸಸಿಗಳನ್ನು ನೆಡುವ ಮೂಲಕ ಹಸುರು ಹೆಚ್ಚಿಸಲು ಮುಂದಾಗುತ್ತದೆ. ಈ ವೇಳೆ ಸಸಿಗಳಿಗೆ ಹೆಚ್ಚು ಬೇಡಿಕೆ ಇರುತ್ತದೆ. ಪ್ರಸಕ್ತ ಸಾಲಿನಲ್ಲಿ ಸರಕಾರಿ ಮತ್ತು ಖಾಸಗಿ ಜಮೀನಿನಲ್ಲಿ ಲಕ್ಷಾಂತರ ಗಿಡ ನೆಡುವ ಗುರಿಯನ್ನು ವಿವಿಧ ಅರಣ್ಯ ವಿಭಾಗಗಳು ಹೊಂದಿವೆ.

5×8, 6×9 ಅಳತೆಯಲ್ಲಿ ಮಹಾಗನಿ, ಸಾಗುವಾನಿ ರೀತಿಯ ಗಿಡಗಳು, 8×12 ಅಳತೆಯಲ್ಲಿ ಮಾವು ಸಹಿತ ಇತರ ಹಣ್ಣಿನ ಗಿಡಗಳು ಲಭಿಸುತ್ತವೆ. ಕಳೆದ ವರ್ಷ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಕೃಷಿ ಮತ್ತು ಖಾಸಗಿ ಜಮೀನಿನಲ್ಲಿ ನೆಡಲು ಒಟ್ಟು 3 ಲಕ್ಷಕ್ಕೂ ಅಧಿಕ ಸಸಿಗಳನ್ನು ಸಸಿಯ ಗಾತ್ರಕ್ಕನುಸಾರ 3ರಿಂದ 5 ರೂ. ವರೆಗೆ ಮಾರಾಟ ಮಾಡಲಾಗಿತ್ತು.

ಅಸಮಾಧಾನ
ಮಳೆಗಾಲದಲ್ಲಿ ಗಿಡ ನೆಡುವ ರೈತರು ಮತ್ತು ಇತರ ಸಾರ್ವಜನಿಕರು ರಿಯಾಯಿತಿ ದರ ಕಡಿತಗೊಳಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಿಡಗಳನ್ನು ನೆಟ್ಟು ಬೆಳೆಸುವ ಸಾರ್ವಜನಿಕರಿಗೆ ರಿಯಾಯಿತಿ ದರವನ್ನು ಮುಂದುವರಿಸಿ ಪ್ರೋತ್ಸಾಹ ನೀಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ರಿಯಾಯಿತಿ ದರದಲ್ಲಿ ಗಿಡಗಳು ದೊರಕದೆ ಇದ್ದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಗಿಡಗಳನ್ನು ಬೆಳೆಸುವ ಸಾಧ್ಯತೆ ಕಡಿಮೆ ಇದೆ.

ಉತ್ಪಾದನ ವೆಚ್ಚ ಏರಿಕೆ
ಕಳೆದ ವರ್ಷ 5×8 ಅಳತೆಯ ಗಿಡಕ್ಕೆ ಉತ್ಪಾದನೆ ವೆಚ್ಚ 7.23 ರೂ. ಇದ್ದರೆ ಈ ವರ್ಷ 9.73 ರೂ. ಆಗಿದೆ. ಅದೇ ರೀತಿ 6×9 ಅಳತೆಯ ಗಿಡಕ್ಕೆ 9.88 ದರವಿದ್ದರೆ ಈ ವರ್ಷ 12.88 ರೂ. ಆಗಿದೆ. 8×12 ಅಳತೆಯ ಗಿಡಕ್ಕೆ 26.29 ಇದ್ದರೆ ಈ ವರ್ಷ 32.29 ರೂ. ವೆಚ್ಚವಿದೆ.

ಕಳೆದ ವರ್ಷದಂತೆ ಈ ವರ್ಷವೂ ರಿಯಾಯಿತಿ ದರದಲ್ಲಿ ಸಸಿಗಳನ್ನು ವಿತರಿಸುವ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿತ್ತು. ಉತ್ಪಾದನ ವೆಚ್ಚಕ್ಕೆ ಅನುಗುಣವಾಗಿ ಸಸಿಗಳಿಗೆ ದರ ನಿಗದಿಪಡಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಅದರಂತೆ ಜೂನ್‌ನಲ್ಲಿ ಸಸಿ ವಿತರಿಸುತ್ತೇವೆ.
– ಉದಯ ನಾಯ್ಕ, ಡಿಎಫ್ಒ, ಕುಂದಾಪುರ ಉಪ ವಿಭಾಗ, ಅರಣ್ಯ ಇಲಾಖೆ

– ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.