ಉಡುಪಿಗೆ 2 ಸಾವಿರ ಪಿಪಿಇ ಕಿಟ್ ವಿತರಣೆ
ಮಣಿಪಾಲ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾಣ ಸುಧಾಕರ್ ಭೇಟಿ
Team Udayavani, Jun 4, 2020, 5:16 AM IST
ಉಡುಪಿ: ಉಡುಪಿ ಜಿಲ್ಲೆಗೆ 2 ಸಾವಿರ ಪಿಪಿಇ ಕಿಟ್ಗಳನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾಣ ಕೆ. ಸುಧಾಕರ್ ಅವರು ಭರವಸೆ ನೀಡಿದರು.
ಬುಧವಾರ ಅವರು ಮಣಿಪಾಲ ವಿ.ವಿ., ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್- 19 ಚಿಕಿತ್ಸೆಗೆ ಸಂಬಂಧಿಸಿ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರೊಂದಿಗೆ ನಡೆಸಿದ ಪ್ರಗತಿ ಪರಿಶೀಲನ ಸಭೆಯಲ್ಲಿ ಹೇಳಿದರು. ಪಿಪಿಇ ಕಿಟ್ಗಳನ್ನು ನೀಡುವಂತೆ ಶಾಸಕ ಕೆ.ರಘುಪತಿ ಭಟ್ ಅವರು ಮಾಡಿದ ಮನವಿಗೆ ಸಚಿವರು ಸ್ಪಂದಿಸಿದರು.
ಡಾಣ ಟಿ.ಎಂ.ಎ. ಪೈ ಕೋವಿಡ್-19 ಆಸ್ಪತ್ರೆಗೆ ಆವಶ್ಯವಿರುವ ಎಲ್ಲ ವೈದ್ಯಕೀಯ ಸವಲತ್ತು ಒದಗಿಸಲು ಬದ್ಧ ಎಂದರು. ಮಾಹೆಯ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ಚಂದ್ರ ಸೂಡ, ವಿ.ವಿ. ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಬಾರದೆ ಮನೆಗೆ ಕಳುಹಿಸಿದ್ದೇಕೆ?
ಕ್ವಾರಂಟೈನ್ನಲ್ಲಿ ಇದ್ದವರನ್ನು ವರದಿ ಬಾರದೆ ಮನೆಗೆ ಕಳುಹಿಸಿರುವ ಘಟನೆಗೆ ಸಂಬಂಧಿಸಿ ಅಧಿಕಾರಿಗಳನ್ನು ಶಾಸಕ ಕೆ. ರಘುಪತಿ ಭಟ್ ಸಚಿವರು ನಡೆಸಿದ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಹೊರ ದೇಶ, ಹೊರ ರಾಜ್ಯಗಳಿಂದ ಬಂದು ಕ್ವಾರಂಟೈನ್ಗೆ ಒಳಗಾದವರ ಗಂಟಲ ದ್ರವ ಪರೀಕ್ಷಾ ವರದಿ ಬಾರದೆ ಮನೆಗೆ ಕಳುಹಿಸಿದ್ದು ಸರಿಯಲ್ಲ. ಮನೆಗೆ ಹೋದ ಅನಂತರ ಕೆಲವರಿಗೆ ಕೋವಿಡ್-19 ಪಾಸಿಟಿವ್ ಬಂದಿರುವುದರಿಂದ ಮನೆಮಂದಿಯಲ್ಲದೆ ಸ್ಥಳೀಯರು ಕೂಡ ಆತಂಕಕ್ಕೀಡಾಗಿದ್ದಾರೆ. ಜಿಲ್ಲೆಯ ಜನರ ಕಾಳಜಿಯಿಂದ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದ್ದು, ಏಕಾಏಕಿ ಅಧಿಕಾರಿಗಳ ಈ ನಿರ್ಧಾರದಿಂದ ಜನತೆ ಹೊರಬರಲು ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಜನತೆ ಜನಪ್ರತಿನಿಧಿಗಳನ್ನು ಪ್ರಶ್ನಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ