ದಾನಿಗಳ ನೆರವಿನಿಂದ ಮನೆ ನಿರ್ಮಾಣಕ್ಕೆ ಅಡಿಗಲ್ಲು
Team Udayavani, Dec 14, 2018, 10:00 AM IST
ಶಿರ್ವ: ಚಿಮಿಣಿ ದೀಪದ ಬೆಳಕಿನಲ್ಲಿ ಓದಿ ಸಾಧನೆಗೈದ ಸಾಧಕಿ ಅಕ್ಷಿತಾ ಹೆಗ್ಡೆ ಅವರಿಗೆ ಹೊಸ ಮನೆ ನಿರ್ಮಾಣಕ್ಕೆ ಗುರುವಾರ ಭೂಮಿ ಪೂಜೆ ನೆರವೇರಿಸಿ ಅಡಿಗಲ್ಲು ಹಾಕಲಾಯಿತು.
ಶಿರ್ವ ಮಹಾಲಸಾ ನಾರಾಯಣೀ ದೇವಸ್ಥಾನದ ಅರ್ಚಕ ರಘುರಾಮ ಭಟ್ ಭೂಮಿ ಪೂಜೆ ನೆರವೇರಿಸಿದರೆ ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ಸುಧಾಕರ ಮಾರ್ಲ ಹಾಗೂ ಹಿರಿಯರಾದ ಜಿ. ವಸಂತ ಶೆಣೈ ಶಿಲಾನ್ಯಾಸ ನೆರವೇರಿಸಿದರು.
ಶಿರ್ವ ಬಂಟರ ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ, ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಅಶೋಕ್ ಗೌಡ, ಆನಂದ ಅರಾನ್ಹಾ, ಲ| ಗ್ಯಾಬ್ರಿಯಲ್ ಮೆನೇಜಸ್, ಅಕ್ಷಿತಾ ಹೆಗ್ಡೆ ಮತ್ತವಳ ತಾಯಿ ಜಯಲಕ್ಷ್ಮೀ ಹೆಗ್ಡೆ ಉಪಸ್ಥಿತರಿದ್ದರು.
ಶಿರ್ವದ ದಾನಿಗಳು ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಬಳಿ ಜಾಗ ನೀಡಿದ್ದಾರೆ. ಕಾಲೇಜಿನ ಅಲುಮ್ನಿ ಎಸೋಸಿಯೇಶನ್ ಮುಂಬಯಿ ಮತ್ತು ಶಿರ್ವ ಬಂಟರ ಸಂಘ ಹಾಗೂ ಇತರ ದಾನಿಗಳ ಸಹಕಾರದೊಂದಿಗೆ ಸುಮಾರು 8 ಲ.ರೂ. ವೆಚ್ಚದಲ್ಲಿ 5 ತಿಂಗಳಲ್ಲಿ ಆರ್ಸಿಸಿ ಮನೆ ನಿರ್ಮಾಣಗೊಳ್ಳಲಿದೆ.
ಅಕ್ಷಿತಾ ಹೆಗ್ಡೆ ಕುರಿತು ಜು. 24ರಂದು “ಉದಯವಾಣಿ’ ವರದಿ ಪ್ರಕಟಿಸಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಹಲವಾರು ಮಂದಿ ದಾನಿಗಳು ನೆರವಿನ ಭರವಸೆ ನೀಡಿದ್ದರು.
“ಉದಯವಾಣಿ’ ವರದಿಯಿಂದಾಗಿ ಹಲವಾರು ಮಂದಿ ದಾನಿಗಳು ನೆರವಿನ ಭರವಸೆ ನೀಡಿದ್ದಾರೆ. ಎಲ್ಲರ ಸಹಕಾರದಿಂದ ಮನೆ ನಿರ್ಮಾಣಗೊಳ್ಳಲಿದ್ದು, ದಾನಿಗಳ ಕಾಳಜಿಗೆ ಆಭಾರಿಯಾಗಿದ್ದೇನೆ.
ಅಕ್ಷಿತಾ ಹೆಗ್ಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ