ಮಲ್ಪೆ ಬಂದರಿನಲ್ಲಿ ಹೂಳು: ಡ್ರಜ್ಜಿಂಗ್‌ ಬೇಡಿಕೆಗೆ ಇನ್ನೂ ಸಿಗಲಿಲ್ಲ ಮನ್ನಣೆ

ವರ್ಷಗಳಲ್ಲಿ 100ಕ್ಕೂ ಅಧಿಕ ಜೀವ ಬಲಿ, ಕೋಟ್ಯಂತರ ರೂ. ಸೊತ್ತು ಹಾನಿ...!

Team Udayavani, May 26, 2022, 12:39 PM IST

dredge

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೃಹತ್‌ ಪ್ರಮಾಣದಲ್ಲಿ ಹೂಳು ತುಂಬಿ ಕೊಂಡಿದ್ದು ನೀರಿನ ಇಳಿತದ ಸಂದರ್ಭದಲ್ಲಿ ಮೀನು ಗಾರಿಕೆ ಬೋಟ್‌ಗಳ ಲಂಗರು ಮತ್ತು ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಸಮರ್ಪಕವಾದ ಡ್ರಜ್ಜಿಂಗ್‌ ಕೆಲಸ ನಡೆಯ ದಿರುವುದರಿಂದ ದಿನದಿಂದ ದಿನಕ್ಕೆ ಸಮಸ್ಯೆ ಗಂಭೀರ ಸ್ವರೂಪಕ್ಕೆ ತಿರುಗಿದ್ದು, ಬೋಟ್‌ ಮಾಲಕರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇಲ್ಲಿ ಸಂಪೂರ್ಣ ಡ್ರಜ್ಜಿಂಗ್‌ ಕಾಮಗಾರಿ ಆಗಬೇಕು ಎಂಬ ಬೇಡಿಕೆ ಇನ್ನೂ ಕೈಗೂಡಿಲ್ಲ. ವರ್ಷ ವರ್ಷ ಡ್ರಜ್ಜಿಂಗ್‌ ನಡೆಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯವಾಗುತ್ತದೆ ಎಂಬುದು ಮೀನುಗಾರರ ಅಭಿಪ್ರಾಯ.

ಇಲ್ಲಿ ಜೀವಕ್ಕೆ ಗ್ಯಾರಂಟಿ ಇಲ್ಲ

ಈ ಹಿಂದೆ ಹೂಳೆತ್ತಿದ್ದ ಸಂಸ್ಥೆಯೊಂದು ಅರ್ಧಂಬರ್ಧ ಕೆಲಸ ಮಾಡಿ ಹಣ ಪಡೆದು ಹೋಗಿದೆ ಎಂದು ಮೀನುಗಾರರು ಆರೋಪಿಸುತ್ತಾರೆ. ಬೆಳಗ್ಗೆ ಮತ್ತು ರಾತ್ರಿ ವೇಳೆ ಬೋಟ್‌ನಿಂದ ಮೀನುಗಳನ್ನು ಇಳಿಸುವ ಕಾರ್ಯ ನಡೆಯುತ್ತಿದೆ. ಬೋಟ್‌ನಿಂದ ಬೋಟ್‌ಗೆ ನಡೆದುಕೊಂಡು ಹೋಗುವ ಸಮಯ ದಲ್ಲಿ ಆಯ ತಪ್ಪಿ ನೀರಿಗೆ ಬಿದ್ದರೆ ಜೀವಕ್ಕೆ ಮಾತ್ರ ಇಲ್ಲಿ ಯಾವುದೇ ಗ್ಯಾರಂಟಿ ಇಲ್ಲ. ಸುಮಾರು ಆಳದವರೆಗೆ ಕೆಸರು ತುಂಬಿಕೊಂಡಿರುವುದರಿಂದ ಬಿದ್ದ ವ್ಯಕ್ತಿ ಮೇಲೆ ಬರದೆ ನೇರ ಅಡಿಭಾಗವನ್ನು ಸೇರುತ್ತಾನೆ. ಇಂತಹ ಆನೇಕ ಪ್ರಕರಣಗಳು ಮಲ್ಪೆ ಬಂದರಿನಲ್ಲಿ ನಡೆಯುತ್ತಲೇ ಇದೆ. ಇದರಲ್ಲಿ ಹೊರರಾಜ್ಯದ ಮೀನುಗಾರರ ಸಂಖ್ಯೆಯೇ ಹೆಚ್ಚು. ಬೋಟ್‌ನಿಂದ ಆಕಸ್ಮಿಕವಾಗಿ ನೀರಿಗೆ ಬಿದ್ದವರ ಬಗ್ಗೆ ಬೋಟು ಮಾಲಕರಿಗಾಗಲಿ, ಮನೆ ಮಂದಿಗಾಗಲಿ ಮಾಹಿತಿ ಇಲ್ಲದೆ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್‌ ಠಾಣೆಗೂ ಮಾಹಿತಿ ನೀಡದೆ ಕಾದು ನೋಡುವ ಪರಿಸ್ಥಿತಿ ಎದುರಾಗಿದೆ.

ತತ್‌ಕ್ಷಣ ಇಲ್ಲಿ ಹೂಳೆತ್ತುವ ಕೆಲಸ ಆಗಬೇಕಾಗಿದೆ ಎನ್ನುತ್ತಾರೆ ಇಲ್ಲಿ ಜನ ನೀರಿಗೆ ಬಿದ್ದರೆ ಮೊದಲ ಕರೆ ಸ್ವೀಕರಿಸುವ ಮುಳುಗು ತಜ್ಞ ಈಶ್ವರ್‌ ಮಲ್ಪೆ ಅವರು.

ಮಲ್ಪೆಯಲ್ಲಿರುವ ಬೋಟ್‌ಗಳು

ಮಲ್ಪೆ ಬಂದರಿನಲ್ಲಿ ಸುಮಾರು 1,200ರಷ್ಟು ಡೀಪ್‌ಸೀ ಟ್ರಾಲ್‌ಬೋಟ್‌ಗಳು, 100 ಪಸೀìನ್‌, 500ರಷ್ಟು ತ್ರಿಸೆವೆಂಟಿ ಟ್ರಾಲ್‌ಬೋಟ್‌, 200 ಸಣ್ಣ ಟ್ರಾಲ್‌ಬೋಟ್‌ ಸೇರಿದಂತೆ ಸಾವಿರಾರು ಯಾಂತ್ರಿಕೃತ ಬೋಟ್‌ಗಳು, ನಾಡದೋಣಿಗಳು ಮೀನುಗಾರಿಕೆಯಲ್ಲಿ ತೊಡಗಿಕೊಂಡಿವೆ.

ಎಲ್ಲೆಲ್ಲಿ ಹೂಳು ತುಂಬಿವೆ?

1 ಮತ್ತು 2 ಹಾಗೂ 3ನೇ ಹಂತದ ಜೆಟ್ಟಿಯಲ್ಲಿ ಕೆಸರು ತುಂಬಿಕೊಂಡಿದೆ. ನೀರು ಇಳಿತದ ಸಂದರ್ಭದಲ್ಲಿ ಬೋಟನ್ನು ಒಳ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಬಾಪುತೋಟ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದ್ದು, 1 ಮತ್ತು 2ನೇ ಜೆಟ್ಟಿಯಲ್ಲಿ ಮೀನು ಖಾಲಿ ಮಾಡಿ 3ನೇ ಜೆಟ್ಟಿಗೆ ಬೋಟುಗಳು ತೆರಳಲು ಸಾಧ್ಯವಾಗುತ್ತಿಲ್ಲ. ದಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಹೂಳು ತುಂಬಿಕೊಂಡಿದ್ದು ಬೋಟುಗಳ ಚಲನಕ್ಕೆ ಸಮಸ್ಯೆಯಾಗಿ ಬೋಟ್‌ ಹಾನಿಯಾಗುವ ಸಾಧ್ಯತೆ ಇದೆ. ನೀರಿನ ಇಳಿತದ ಸಂದರ್ಭದಲ್ಲಿ ಅಳಿವೆ ಬಾಗಿಲಿನಲ್ಲೂ ಸಮಸ್ಯೆ ಎದುರಾಗುತ್ತದೆ ಎನ್ನಲಾಗಿದೆ. ಬಂದರಿನ ಬೇಸಿನ್‌ನಲ್ಲಿ ಹೂಳು ತುಂಬಿದ್ದರಿಂದ ಒಂದೆಡೆ ಬೋಟಿನ ಅಡಿಭಾಗಕ್ಕೆ ಹಾನಿಯಾದರೆ, ಅಡಿಭಾಗದ ಕೆಸರಿನಿಂದ ಕೂಡಿದ ನೀರು ಎಂಜಿನ್‌ನಲ್ಲಿ ಅಳವಡಿಸಿದ ಲಕ್ಷಾಂತರ ರೂಪಾಯಿ ವೆಚ್ಚದ ವಾಟರ್‌ ಕೂಲರ್‌ ಸೇರಿಕೊಂಡು ಹಾನಿಗೊಳಗಾಗುತ್ತವೆ ಎನ್ನುತ್ತಾರೆ ಮೀನುಗಾರ ಸಂಘದ ಕಾರ್ಯದರ್ಶಿ ರತ್ನಾಕರ ಸಾಲ್ಯಾನ್‌.

ಇಲ್ಲಿ ಡ್ರಜ್ಜಿಂಗ್‌ ಯಂತ್ರ ಅಗತ್ಯ

ಕೇರಳ ರಾಜ್ಯದ ಪ್ರತೀ ಬಂದರಿನಲ್ಲಿ ಡ್ರಜ್ಜಿಂಗ್‌ ಯಂತ್ರದ ವ್ಯವಸ್ಥೆ ಇರುವುದರಿಂದ ಅಲ್ಲಿನ ಬಂದರಿನಲ್ಲಿ ಹೂಳಿನ ಸಮಸ್ಯೆ ಎದುರಾಗುತ್ತಿಲ್ಲ. ನಮ್ಮ ರಾಜ್ಯದ ಪ್ರಮುಖ ಬಂದರಿನಲ್ಲೂ ಡ್ರಜ್ಜಿಂಗ್‌ ಯಂತ್ರದ ವ್ಯವಸ್ಥೆಗೊಳಿಸಬೇಕೆಂದು ಮೀನುಗಾರರು ಆಗ್ರಹಿಸಿದ್ದಾರೆ.

ಸಮಸ್ಯೆ ಬಗೆಹರಿಸಿ

ಹೂಳಿನ ಸಮಸ್ಯೆ ರಾಜ್ಯದ ಎಲ್ಲ ಬಂದರುಗಳಲ್ಲಿ ಇದೆ. ಹಲವು ಬಾರಿ ಸರಕಾರಕ್ಕೆ ಹೂಳೆತ್ತಲು ಮನವಿಯನ್ನು ಮಾಡಲಾಗಿದೆ. ಇದೀಗ ಡ್ರಜ್ಜಿಂಗ್‌ಗೆ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತದೆ. ಸೆಪ್ಟಂಬರ್‌ನಲ್ಲಿ ಕಾಮಗಾರಿಯನ್ನು ನಡೆಸುತ್ತಾರೆಂಬ ವಿಶ್ವಾಸ ಇದೆ. ಸರಕಾರ ಅದಷ್ಟು ಶೀಘ್ರದಲ್ಲಿ ಮೀನುಗಾರರ ಸಮಸ್ಯೆಯನ್ನು ಬಗೆ ಹರಿಸಬೇಕಾಗಿದೆ. -ದಯಾನಂದ ಕೆ. ಸುವರ್ಣ, ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ

ಅಂದಾಜು ಪಟ್ಟಿ ಸಲ್ಲಿಕೆ

ಶಾಸಕರ ಪ್ರಯತ್ನದಿಂದ 3 ಕೋ. ರೂ. ಅಂದಾಜು ಪಟ್ಟಿಯಲ್ಲಿ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸಲಾಗಿದೆ. ಅನುದಾನವೂ ಬಿಡುಗಡೆಯಾಗಬಹುದು. ಈಗಿರುವ 3 ಬೇಸಿನ್‌ ಮತ್ತು ಚನೆಲ್‌ನ ಡ್ರಜ್ಜಿಂಗ್‌ ನಡೆಸಲಾಗುವುದು. ಟೆಂಡರ್‌ ಪ್ರಕ್ರಿಯೆ ನಡೆಸಿ ಮಳೆಗಾಲ ಮುಗಿದ ಬಳಿಕ ಕಾಮಗಾರಿಯನ್ನು ಆರಂಭಿಸಲಾಗುವುದು. -ಉದಯ ಕುಮಾರ್‌, ಕಾರ್ಯ ನಿರ್ವಾಹಕ ಎಂಜಿನಿಯರ್‌, ಬಂದರು ಇಲಾಖೆ

 ಶೀಘ್ರದಲ್ಲೇ ಕಾಮಗಾರಿ

ಬಂದರಿನ ಡ್ರಜ್ಜಿಂಗ್‌ ಸಮಸ್ಯೆಯ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡ ಲಾಗಿದೆ. ಆದಷ್ಟು ಶೀಘ್ರದಲ್ಲೇ ಕಾಮಗಾರಿಯನ್ನು ಕೈಗೊಳ್ಳುವಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ. – ಅಂಗಾರ ಎಸ್‌., ಮೀನುಗಾರಿಕ ಸಚಿವರು

ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.