ಮಾದಕ ವ್ಯಸನ ಪತ್ತೆಗೂ ಶ್ವಾನದಳ ; ಪೊಲೀಸ್‌ ಇಲಾಖೆಗೆ ಮತ್ತಷ್ಟು ಬಲ


Team Udayavani, Oct 24, 2020, 1:27 AM IST

Swana

ಸ್ನಿಫ‌ರ್‌ ಶ್ವಾನ.

ಉಡುಪಿ: ಹೆಚ್ಚುತ್ತಿರುವ ಮಾದಕ ವ್ಯಸನ ತಡೆಗೆ ಪೊಲೀಸ್‌ ಇಲಾಖೆ ಮುಂದಾಗಿದ್ದು, ಪತ್ತೆ ಕಾರ್ಯಕ್ಕೆ ಶ್ವಾನದಳಗಳನ್ನು ಬಳಸಿಕೊಳ್ಳಲು ಮುಂದಾ ಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಇದಕ್ಕೆಂದೇ ಪ್ರತ್ಯೇಕ ಶ್ವಾನದಳಗಳಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಇಲಾಖೆಯ ಶ್ವಾನಗಳಿಗೆ ತರಬೇತಿ ನೀಡಲು ಇಲಾಖೆ ಚಿಂತಿಸುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಡಾಬರ್‌ಮನ್‌, ಜರ್ಮನ್‌ ಶೆಫ‌ರ್ಡ್‌, ಲ್ಯಾಬ್ರೆಡಾರ್‌ ತಳಿ ಗಳಿದ್ದು, ಈ ಪೈಕಿ ಡಾಬರ್‌ಮನ್‌ ಶ್ವಾನಗಳು ಅಪರಾಧ ಪತ್ತೆಗೆ ಹಾಗೂ ಉಳಿದ ಎರಡು ತಳಿಗಳು ಸ್ಫೋಟಕ ವಸ್ತುಗಳನ್ನು ಪತ್ತೆ ಹಚ್ಚಲು ಸಹಾಯ ಮಾಡುತ್ತವೆ.

ಎರಡು ತಿಂಗಳ ಶ್ವಾನಕ್ಕೆ ಬೆಂಗಳೂರಿನಲ್ಲಿ ತರಬೇತಿ
ಶ್ವಾನದಳಕ್ಕೆ ಸೇರ್ಪಡೆಯಾಗಿರುವ ಡಾಬರ್‌ಮನ್‌ ತಳಿಯ ಸ್ನಿಫ‌ರ್‌ ಹೆಸರಿನ 2 ತಿಂಗಳ ಶ್ವಾನವು ಶೀಘ್ರದಲ್ಲಿಯೇ ಬೆಂಗಳೂರಿಗೆ ತೆರಳಲಿವೆ. ಅಲ್ಲಿ ಅಪರಾಧ ಪತ್ತೆಯೊಂದಿಗೆ ಮಾದಕ ವ್ಯಸನಗಳನ್ನು ಪತ್ತೆ ಹಚ್ಚುವ ಬಗ್ಗೆ ಇದಕ್ಕೆ ತರಬೇತಿ ನೀಡಲಾಗು ತ್ತದೆ. ಅಲ್ಲಿ ತರಬೇತಿ ಪಡೆದ ಬಳಿಕ ಉಡುಪಿಗೆ ಕರ್ತವ್ಯಕ್ಕೆ ಹಾಜರಾಗಲಿದೆ. ಅಗತ್ಯಬಿದ್ದರೆ ಇತರ ಜಿಲ್ಲೆಗಳಿಗೂ ಈ ಶ್ವಾನಗಳು ಕರ್ತವ್ಯಕ್ಕೆ ತೆರಳಲಿವೆ.

ಶ್ವಾನಕ್ಕೆ ದಿನಕ್ಕೆ 300 ರೂ.ವೆಚ್ಚ!
ಉಡುಪಿ ಜಿಲ್ಲೆಯಲ್ಲಿ ಶ್ವಾನಗೃಹದಲ್ಲಿ ಒಟ್ಟು 4 ಶ್ವಾನಗಳಿವೆ. ಒಂದು ಶ್ವಾನದ ನಿರ್ವಹಣೆಗೆ ದಿನವೊಂದಕ್ಕೆ ತಗಲುವ ವೆಚ್ಚ 300 ರೂ.ಗಳು. ಊಟ, ವೈದ್ಯ ಕೀಯ ಆರೈಕೆ ಸಹಿತ ಎಲ್ಲವೂ ಇದರಲ್ಲಿ ಒಳಗೊಂಡಿರುತ್ತವೆ. ಒಂದು ಶ್ವಾನವನ್ನು ಇಬ್ಬರು ಹ್ಯಾಂಡ್ಲರ್‌ಗಳು ಆರೈಕೆ ಮಾಡುತ್ತಿದ್ದಾರೆ.

2.5 ಕೋ.ರೂ.ವೆಚ್ಚದ ಯೋಜನೆ
ಶ್ವಾನದಳದ ಬಲವರ್ಧನೆಗಾಗಿ ರಾಜ್ಯ ಪೊಲೀಸ್‌ ಇಲಾಖೆಯು ಸುಮಾರು 2.5 ಕೋ.ರೂ.ವೆಚ್ಚದಲ್ಲಿ ಶ್ವಾನದಳಕ್ಕೆ 50 ಶ್ವಾನಗಳನ್ನು ಸೇರ್ಪಡಿಸುವ ಉದ್ದೇಶ ಹೊಂದಿದೆ. ಸ್ಫೋಟಕ, ಮಾದಕ ವಸ್ತುಗಳು ಹಾಗೂ ಅಪರಾಧಿಗಳ ಪತ್ತೆದಾರಿಕೆಯಲ್ಲಿ ಶ್ವಾನದಳವು ಮಹತ್ತರವಾದ ಪಾತ್ರ ವಹಿಸುತ್ತಿದೆ. ಸದ್ಯ ಬೆಂಗಳೂರಿನಲ್ಲಿ ಜರ್ಮನ್‌ ಶೆಫ‌ರ್ಡ್‌, ಲಾಬ್ರೆಡಾರ್‌, ಬೆಲ್ಜಿಯಂ ಮಾಲಿನೋಯಿಸ್‌, ಗೋಲ್ಡನ್‌ ರಿಟ್ರೇವರ್‌ ಹಾಗೂ ಡಾಬರ್‌ಮನ್‌ ತಳಿಗಳ 55 ಶ್ವಾನಗಳಿವೆ. ಮುಂದಿನ ದಿನಗಳಲ್ಲಿ ಮಹಿಳಾ ಪೇದೆಗಳನ್ನು ಈ ದಳಕ್ಕೆ ನೇಮಿಸಲು ಇಲಾಖೆ ಚಿಂತನೆ ನಡೆಸಿದೆ.

ಶ್ವಾನಕ್ಕೆ ತರಬೇತಿ
ಅಪರಾಧ ಪತ್ತೆಯೊಂದಿಗೆ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಶ್ವಾನಗಳನ್ನು ಬಳಸಿಕೊಳ್ಳುವ ಚಿಂತನೆಯಿದೆ. ಉಡುಪಿ ಜಿಲ್ಲೆಯಿಂದ ಸ್ನಿಫ‌ರ್‌ ಹೆಸರಿನ ಶ್ವಾನವನ್ನು ತರಬೇತಿಗೊಳಿಸಿ ಸಿದ್ಧಗೊಳಿಸಲಾಗುವುದು.
-ಕುಮಾರಚಂದ್ರ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು, ಉಡುಪಿ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.