ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ


Team Udayavani, Jun 15, 2024, 3:50 PM IST

4-udupi

ಉಡುಪಿ: ಜೂ. 14ರ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರ ದಿವ್ಯಾನುಗ್ರಗದೊಂದಿಗೆ ನಡೆಯುತ್ತಿದ್ದ ಸರಣಿ ಪ್ರವಚನ ಮಾಲಿಕೆಯಲ್ಲಿ ಶ್ರೀರಾಮ ನಿರ್ಯಣದ ವಿಷಯದಲ್ಲಿ ಪ್ರವಚನಗೈದ ಬಳಿಕ ಅಲ್ಲೇ ಕುಸಿದು ಅಸ್ವಸ್ಥಗೊಂಡಿದ್ದ ದ್ವೈತ ಸಿದ್ಧಾಂತ ಮೇರು ವಿದ್ವಾಂಸರೂ, ಪ್ರಚನಕಾರರೂ ಲೇಖಕರೂ ಶ್ರೀ ಕೃಷ್ಣ ಮಠ ಅಷ್ಟಮಠಗಳ ಆಸ್ಥಾನ ವಿದ್ವಾಂಸರೂ ಆಗಿದ್ದ ವಿದ್ವಾನ್ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಜೂ.15ರ ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. 72 ವರ್ಷ ಪ್ರಾಯವಾಗಿತ್ತು.

ವಿದ್ವಾಂಸರ ಮನೆತನದಲ್ಲೇ ಜನಿಸಿದ್ದ ಉಪಾಧ್ಯಾಯರು ಸಂಪ್ರದಾಯ ನಿಷ್ಠೆ ಹಾಗೂ ವಿಪ್ರವಿಹಿತ ಕರ್ಮಾನುಷ್ಠಾನಗಳಲ್ಲಿ ಆತ್ಯಂತಿಕ ಶ್ರದ್ಧೆ ಹೊಂದಿದ್ದು ಜೀವನಪರ್ಯಂತ ಅವುಗಳನ್ನು ಪಾಲಿಸಿಕೊಂಡು ಬಂದಿದ್ದರು.

ಉಡುಪಿಯ ಪ್ರಸಿದ್ಧ ಶ್ರೀ ಮನ್ನಧ್ವ ಸಿದ್ಧಾಂತ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸುದೀರ್ಘ ಅವಧಿ ದ್ವೈತ ವೇದಾಂತ ಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಅನೇಕ ಮಠಗಳಿಂದ ಪ್ರಕಟವಾಗುತ್ತಿದ್ದ ಸುಗುಣಮಾಲಾ, ಸರ್ವಮೂಲ ತತ್ತ್ವವಾದ ಮೊದಲಾದ ಅನೇಕ ಮಾಸಪತ್ರಿಕೆಗಳಲ್ಲಿ ನಿರಂತರ ಅಧ್ಯಾತ್ಮಿಕ ಚಿಂತನ ಅಂಕಣಗಳ ಮೂಲಕ ಪ್ರಸಿದ್ಧರಾಗಿದ್ದರು. ಪ್ರವಚನ‌ ಕುಶಲಿಗಳೂ ಆಗಿದ್ಸು ದ್ವೈತ ವೇದಾಂತ ಶಾಸ್ತ್ರದ ಹಳೆಯ ತಲೆಮಾರಿನ ವಿದ್ವಾಂಸರ ಮಹತ್ವದ ಕೊಂಡಿಯಾಗಿದ್ದರು.

ಮಧ್ವಶಾಸ್ತ್ರದ ಬಗ್ಗೆ ಇದಮಿತ್ಥಂ ಎಂದು ಅಧಿಕೃತವಾಗಿ ಮಾತನಾಡಬಲ್ಲ ವಿದ್ವಾಂಸರಾಗಿದ್ದ ಶ್ರೀಯುತರು ಶ್ರೀಕೃಷ್ಣ ಮಠ ಹಾಗೂ ಬಹುತೇಕ ಎಲ್ಲ ಮಾಧ್ವಮಠಗಳಿಂದ ವಿಶೇಷವಾಗಿ ಪುರಸ್ಕೃತರಾಗಿದ್ದರು.

ಇತತೀಚೆಗಷ್ಟೆ ಅಯೋಧ್ಯೆಯಲ್ಲಿ ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ  ಸಂಪನ್ನಗೊಂಡ  ಮಂಡಲೋತ್ಸವದಲ್ಲೂ ಭಾಗವಹಿಸಿ ಅಷ್ಡಾವಧಾನ ಸೇವೆಗೈದಿದ್ದರು.

ಇವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರು ಹಾಗೂ ಅಪಾರ ಶಿಷ್ಯರು ಅಭಿಮಾನಿಗಳನ್ನು ಅಗಲಿದ್ದಾರೆ.

ಕರಂಬಳ್ಳಿ ವಲಯ ಬ್ರಾಹ್ಮಣ ಸಂಘದಲ್ಲಿ ಅವರ ಪ್ರವಚನ ಮಾಲಿಕೆ ನೆರವೇರಿತ್ತು.

ಉಪಾಧ್ಯಾಯರ ನಿಧನಕ್ಕೆ ಪರ್ಯಾಯ ಶ್ರೀ ಪುತ್ತಿಗೆ, ಶ್ರೀ ಪಲಿಮಾರು ಮತ್ತು ಅದಮಾರು ಉಭಯ ಶ್ರೀಗಳು, ಪೇಜಾವರ  ಕಾಣಿಯೂರು ಸೋದೆ ಶೀರೂರು ಮಂತ್ರಾಲಯ, ಭಂಡಾರಕೇರಿ, ಚಿತ್ರಾಪುರ ಶ್ರೀಗಳು, ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ, ಯುವಬ್ರಾಹ್ಮಣ ಪರಿಷತ್, ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ, ತುಳುಶಿವಳ್ಳಿ ಬ್ರಾಹ್ಮಣ ಮಹಾಮಂಡಲ, ಉಡುಪಿ ಪುರೋಹಿತರ ಸಂಘ, ಸಂಸ್ಕೃತ ಮಹಾವಿದ್ಯಾಲಯದ ಆಡಳಿತ ಮಂಡಳಿ ಮತ್ತು ಸಿಬಂದಿ ವರ್ಗ ಮಾಜಿ ಶಾಸಕ ಕೆ. ರಘುಪತಿ ಭಟ್, ಶಾಸಕ ಯಶ್ಪಾಲ್ ಸುವರ್ಣ ಹೀಗೆ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‌

Ad

ಟಾಪ್ ನ್ಯೂಸ್

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

Bgk-Kudalasangama

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ತಾತ್ಕಾಲಿಕ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ

Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Tax-Collect

ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ವಿರುದ್ಧ ಜು.23ರಿಂದ 2 ದಿನ ಬಂದ್‌

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.