ಗ್ರಾಮೀಣ ವಿದ್ಯಾರ್ಥಿಗಳ ಆನ್‌ಲೈನ್‌ ಕಲಿಕೆಗೆ ಗ್ರಹಣ

ನಿರಂತರ ಕಾಡುವ ವಿದ್ಯುತ್‌, ನೆಟ್‌ವರ್ಕ್‌ ಸಮಸ್ಯೆ

Team Udayavani, Aug 28, 2020, 5:45 AM IST

ಗ್ರಾಮೀಣ ವಿದ್ಯಾರ್ಥಿಗಳ ಆನ್‌ಲೈನ್‌ ಕಲಿಕೆಗೆ ಗ್ರಹಣ

ಕೋವಿಡ್ ಕಾಲದಲ್ಲಿ ತಂತ್ರಜ್ಞಾನಗಳು ವರದಾನವಾದರೂ ಗ್ರಾಮೀಣ ಭಾಗದಲ್ಲಿನ ಮೂಲಸೌಕರ್ಯ ಕೊರತೆ, ಆರ್ಥಿಕ ಕಾರಣಗಳು ಬಡ ವಿದ್ಯಾರ್ಥಿಗಳಿಗೆ ಹಲವು ಸಮಸ್ಯೆಗಳನ್ನು ಹುಟ್ಟುಹಾಕಿವೆ. ಇದನ್ನು ಸರಿಪಡಿಸುವಲ್ಲಿ ಸರಕಾರ ಕಾರ್ಯಪ್ರವೃತ್ತವಾಗಬೇಕಿದೆ.

ಉಡುಪಿ: ಶಿಕ್ಷಣ ಇಲಾಖೆ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದ ಕಲಿಕೆಯಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ವಿದ್ಯಾಗಮ ಕಾರ್ಯಕ್ರಮದಡಿಯಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌-ಆಫ್‌ಲೈನ್‌ ಶಿಕ್ಷಣಕ್ಕೆ ಮುಂದಡಿ ಇಟ್ಟಿದೆ. ಆದರೆ ಇದು ಜಿಲ್ಲೆಯ ಗ್ರಾಮೀಣ ಭಾಗದ ಶೇ. 10ರಷ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಗೆ ಸಮಸ್ಯೆಯಾಗಿದೆ.  ಜಿಲ್ಲೆಯಲ್ಲಿ 694 ಸರಕಾರಿ, 250 ಅನುದಾನಿತ ಹಾಗೂ 280 ಅನುದಾನರಹಿತ ಶಾಲೆಗಳಿವೆ. ಇದರಲ್ಲಿ 1ರಿಂದ 8ನೇ ತರಗತಿವರೆಗೆ 1,04,565 ವಿದ್ಯಾರ್ಥಿಗಳು ಮತ್ತು 9, 10ನೇ ತರಗತಿಯಲ್ಲಿ 29,115 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,33,680 ವಿದ್ಯಾರ್ಥಿಗಳು ಇದ್ದಾರೆ. ಇಲಾಖೆಯ ಸರ್ವೇ ಅನ್ವಯ ಜಿಲ್ಲೆಯಲ್ಲಿ 1,14,476 ವಿದ್ಯಾರ್ಥಿಗಳ ಮನೆಗಳಲ್ಲಿ ಮೊಬೈಲ್‌ನಲ್ಲಿ ಇಂಟರ್‌ನೆಟ್‌ ಹಾಗೂ 1,33,000 ವಿದ್ಯಾರ್ಥಿಗಳ ಮನೆಗಳಲ್ಲಿ ಟವಿ, ರೇಡಿಯೋ ಸೌಲಭ್ಯವಿದೆ.

ಪೋಷಕರ ಆರ್ಥಿಕ ಸಂಕಷ್ಟ !
ಆರ್ಥಿಕ ಶಕ್ತಿ ಕಡಿಮೆ ಇರುವ ಪೋಷಕರು ಮಕ್ಕಳನ್ನು ಹೆಚ್ಚಾಗಿ ಸರಕಾರಿ ಶಾಲೆಗೆ ಸೇರಿಸುತ್ತಾರೆ. ಹೆಚ್ಚಿನ ಕುಟುಂಬಗಳು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವವರಾಗಿದ್ದಾರೆ. ಈ ಕುಟುಂಬಗಳಿಗೆ ಸರಕಾರ ಜಾರಿಗೆ ತಂದ ಆನ್‌ಲೈನ್‌ ತರಗತಿಗಳು ದುಬಾರಿಯಾಗಿ ಪರಿಣಮಿಸಿವೆ. ಮಕ್ಕಳ ಭವಿಷ್ಯದ ದೃಷ್ಟಿ ಯಿಂದ ಪೋಷಕರು ಕೋವಿಡ್ ಸಂಕಷ್ಟ ಕಾಲದಲ್ಲೂ ಸಾವಿರಾರು ರೂಪಾಯಿ ವ್ಯಯಿಸಿ ಸ್ಮಾರ್ಟ್‌ಫೋನ್‌ ಖರೀದಿಸಿ ನೀಡಿದ್ದಾರೆ. ಈಗ ಇಂಟರ್ನೆಟ್‌ ಪ್ಯಾಕೇಜ್‌-ರೀಜಾರ್ಜ್‌ ಮಾಡುವುದೂ ಹೊರೆಯಾಗಿದೆ.

ನೆಟ್‌ವರ್ಕ್‌ಗೆ ಪರದಾಟ
ಕರಾವಳಿಯ ಗುಡ್ಡಗಾಡು ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಕೆಲವೆಡೆ ಒಂದು ದೂರವಾಣಿ ಕರೆ ಸ್ವೀಕರಿಸಲು ಮನೆ ಬಿಟ್ಟು ದೂರ ತೆರಳಬೇಕು. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ತರಗತಿ ಪ್ರಾರಂಭವಾಗುವ ಒಂದು ಗಂಟೆಯ ಮುನ್ನ ಪೋಷಕರೊಂದಿಗೆ ಗುಡ್ಡಹತ್ತಿ ಇಂಟರ್‌ನೆಟ್‌ ಸಂಪರ್ಕಕ್ಕಾಗಿ ಪ್ರಯತ್ನಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ನೆಟ್‌ವರ್ಕ್‌ ಸಮಸ್ಯೆ ಪ್ರದೇಶ
ಜಡ್ಕಲ್‌, ಮುದೂರು, ಕೊಲ್ಲೂರು, ಹಾಲ್ಕಲ್‌, ಮಾವಿನ ಕಾರು, ಬಸ್ರಿಬೇರು, ಮಾರಣಕಟ್ಟೆ, ಇಡೂರು ಸಹಿತ ಕೆರಾಡಿ, ಬೆಳ್ಳಾಲ, ಮೂಡಮುಂದ, ಹೊಸೂರು ಹಾಗೂ ಕಾರ್ಕಳ, ಹೆಬ್ರಿ, ಬ್ರಹ್ಮಾವರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಇಂಟರ್‌ನೆಟ್‌ ಸಮಸ್ಯೆ ಇದೆ.

ವಿದ್ಯುತ್‌ ಸಮಸ್ಯೆ !
ಜಿಲ್ಲೆಯಲ್ಲಿ ವಾರದಲ್ಲಿ ಒಂದು ದಿನ ಮೆಸ್ಕಾಂನವರು ನಿರ್ವಹಣೆಯ ನೆಪದಲ್ಲಿ ವಿದ್ಯುತ್‌ ವ್ಯತ್ಯಯ ಮಾಡುತ್ತಾರೆ. ಮಳೆ -ಗಾಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಳ್ಳುವುದು ಸಹಜವಾಗಿದೆ. ಇದರಿಂದಾಗಿ ಟಿವಿ ಮೂಲಕ ಪಾಠಗಳನ್ನು ವೀಕ್ಷಿಸುವ ಮಕ್ಕಳಿಗೆ ಆ ದಿನದ ತರಗತಿಗಳು ತಪ್ಪಿ ಹೋಗುತ್ತಿವೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆ ಇರುವ ಮಕ್ಕಳಿಗೆ ಯೂ ಟ್ಯೂಬ್‌ನಲ್ಲಿ ತರಗತಿ ಲಿಂಕ್‌ ಲಭ್ಯವಿದ್ದರೂ ನೆಟ್‌ವರ್ಕ್‌ ಸಮಸ್ಯೆಯಿಂದ ತರಗತಿ ವೀಕ್ಷಿಸಲು ಸಾಧ್ಯವಾಗುತ್ತಿಲ್ಲ.

ಮೊಬೈಲ್‌ ವಾಟ್ಸ್ಯಾಪ್‌ ಪಾಠ
ಜಿಲ್ಲೆಯಲ್ಲಿ ಶೇ. 10ರಷ್ಟು ವಿದ್ಯಾರ್ಥಿಗಳ ಮನೆಗಳಲ್ಲಿ ನೆಟ್‌ವರ್ಕ್‌ ಸಮಸ್ಯೆ ಇದೆ. ಅದಕ್ಕಾಗಿ ಶಿಕ್ಷಕರು ಪೋಷಕರ ಮೊಬೈಲ್‌ ವಾಟ್ಸ್ಯಾಪ್‌ಗಳಿಗೆ ರೆಕಾರ್ಡ್‌ ಮಾಡಿರುವ ವೀಡಿಯೋಗಳನ್ನು ಕಳುಹಿಸುತ್ತಾರೆ. ಜತೆಗೆ ನೆಟ್‌ವರ್ಕ್‌ ಇಲ್ಲದ ಪ್ರದೇಶಗಳಿಗೆ ಶಿಕ್ಷಕರು ತೆರಳಿ ಪಾಠ
ಹಾಗೂ ಅಗತ್ಯವಿರುವ ಚಟುವಟಿಕೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳ ಪಾಠದ ಗ್ರಹಿಕೆಯನ್ನೂ ಶಿಕ್ಷಕರು ಪರಿಶೀಲಿಸುತ್ತಿದ್ದಾರೆ.
– ಶೇಷಶಯನ ಕಾರಿಂಜ, ಡಿಡಿಪಿಐ, ಉಡುಪಿ ಜಿಲ್ಲೆ.

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.