ಬ್ರಹ್ಮಾವರದಲ್ಲಿ ಇಎಸ್‌ಐ ಆಸ್ಪತ್ರೆಗೆ ಜಾಗ ಗುರುತು


Team Udayavani, Sep 30, 2022, 3:17 PM IST

14

ಉಡುಪಿ: ಜಿಲ್ಲೆಯಲ್ಲಿ 100 ಬೆಡ್‌ ಗಳ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಜಿಲ್ಲಾಡಳಿತವು ಬ್ರಹ್ಮಾವರದಲ್ಲಿ 5 ಎಕರೆ ಜಾಗವನ್ನು ಗುರುತಿಸಲಾಗಿದೆ. ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ದೇಶಾದ್ಯಂತ 100 ಬೆಡ್‌ಗಳ 23 ಇಎಸ್‌ಐ ಆಸ್ಪತ್ರೆಗಳನ್ನು ಮಂಜೂರು ಮಾಡಿದ್ದು, ಅದರಲ್ಲಿ ಉಡುಪಿ ಜಿಲ್ಲೆಯು ಒಂದಾಗಿದೆ.

ಜಿಲ್ಲಾಡಳಿತ ಗುರುತು ಮಾಡಿದ್ದ ಜಾಗವನ್ನು ಇಎಸ್‌ಐ ಮತ್ತು ಇಎಸ್‌ಐಸಿ ಉನ್ನತ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಎರಡು ದಿನಗಳ ಹಿಂದೆ ಇಎಸ್‌ಐ ಕಾರ್ಪೊರೇಶನ್‌ ಕರ್ನಾಟಕ ಪ್ರಾಂತೀಯ ನಿರ್ದೇಶಕರು, ಇಎಸ್‌ಐ ವೈದ್ಯಕೀಯ ವಿಭಾಗದ ನಿರ್ದೇಶಕರು, ಇಎಸ್‌ಐಸಿ ವೈದ್ಯಕೀಯ ಅಧಿಕಾರಿ, ಇಎಸ್‌ಐಸಿ ಎಂಜಿನಿಯರ್‌ಗಳ ತಂಡ, ಜಿಲ್ಲಾಧಿಕಾರಿಯೊಂದಿಗೆ ಜಂಟಿಯಾಗಿ ಪರಿಶೀಲನೆ ನಡೆಸಿದ್ದಾರೆ.

ಬ್ರಹ್ಮಾವರವೇ ಉತ್ತಮ ಸ್ಥಳ

ಇಡೀ ಜಿಲ್ಲೆಗೆ ಹೃದಯ ಭಾಗವಾಗಿರುವ ಬ್ರಹ್ಮಾವರವೇ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಉತ್ತಮ ಸ್ಥಳವಾಗಿದೆ. ಉಡುಪಿ ನಗರ ದಲ್ಲಿ ಈಗಾಗಲೇ ಸ್ಥಳಾಭಾವವಿದೆ. ಉಡುಪಿ ಹೊರತಾದ ಕುಂದಾಪುರ ಮತ್ತು ಕಾರ್ಕಳ ತಾಲೂಕು ಕೇಂದ್ರಗಳು ಲಾಗಾಯ್ತಿನಿಂದ ಇರುವುದರಿಂದ ಇಲ್ಲಿಯೂ ನಗರ ಪ್ರದೇಶಗಳಲ್ಲಿ ಸ್ಥಳಾಭಾವವಿದೆ. ಉಡುಪಿ ಬಿಟ್ಟರೆ ಕುಂದಾಪುರ ಮತ್ತು ಕಾರ್ಕಳ ತಾಲೂಕಿನವರಿಗೆ ಅನುಕೂಲವಾಗುವುದು ಮಧ್ಯದಲ್ಲಿರುವ ಬ್ರಹ್ಮಾವರ. ಬ್ರಹ್ಮಾ ವರವೀಗ ಹೊಸ ತಾಲೂಕು ಕೇಂದ್ರವಾಗಿರುವ ಕಾರಣ ಅಲ್ಲಿ ಅಭಿವೃದ್ಧಿಗೆ ಅವಕಾಶಗಳಿವೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಲಕ್ಷ ವಿಮಾ ಸದಸ್ಯರು

ಜಿಲ್ಲೆಯಲ್ಲಿ ಇಎಸ್‌ಐಗೆ ಸಂಬಂಧಿಸಿ ವೈದ್ಯಕೀಯ ಕ್ಲಿನಿಕ್‌ ಅನ್ನು ಮೇಲ್ದರ್ಜೆಗೇರಿಸಬೇಕು ಮತ್ತು ಸಿಬಂದಿ ಕೊರತೆ ನೀಗಿಸಬೇಕು. ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಹಲವು ವರ್ಷಗಳಿಂದ ಕಾರ್ಮಿಕ ವಲಯದ ಬೇಡಿಕೆಯಾಗಿತ್ತು. ಪ್ರಸ್ತುತ ಜಿಲ್ಲೆಯಲ್ಲಿ ಇಎಸ್‌ಐ ಸೌಲಭ್ಯ ಹೊಂದಿರುವ 1 ಲಕ್ಷ ಕುಟುಂಬ ವಿಮಾದಾರರು ಇದ್ದಾರೆ. ಕಾರ್ಕಳ, ಮಣಿಪಾಲ, ಕುಂದಾಪುರ ಉಡುಪಿ ಸಹಿತ 111 ಇಎಸ್‌ಐ ಡಿಸ್ಪೆನ್ಸರಿ ಕ್ಲಿನಿಕ್‌ಗಳಿದ್ದು, 9 ವೈದ್ಯರ ಹುದ್ದೆಯಲ್ಲಿ ಮೂರು ಹುದ್ದೆ ಮಾತ್ರ ಭರ್ತಿಯಾಗಿದೆ.

100 ಬೆಡ್‌ಗಳ ಸುಸಜ್ಜಿತ ಆಸ್ಪತೆ

ಇಎಸ್‌ಐ ಆಸ್ಪತ್ರೆ 100 ಬೆಡ್‌ಗಳ ಬೃಹತ್‌ ಸುಸಜ್ಜಿತ ಆಸ್ಪತ್ರೆಯಾಗಿದ್ದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೌಕರ್ಯದಂತೆ ಎಲ್ಲ ವೈದ್ಯಕೀಯ ವಿಭಾಗವನ್ನು ಒಳಗೊಂಡ ಆಸ್ಪತ್ರೆಯಾಗಿರುತ್ತದೆ. ಆಯಾ ವಿಭಾಗಕ್ಕೆ ತಜ್ಞ ವೈದ್ಯರು, ಅಧೀಕ್ಷಕರು, ದಾದಿಯರನ್ನು ನೇಮಿಸಲಾಗುತ್ತದೆ. ಕಾರ್ಮಿಕ ವರ್ಗ ಉತ್ಕೃಷ್ಟ ಆರೋಗ್ಯ ಸೇವೆ ಪಡೆಯುವ ಎಲ್ಲ ಸೇವೆಗಳು ಇಎಸ್‌ಐ ಆಸ್ಪತ್ರೆ ಹೊಂದಿರಲಿದೆ ಎಂದು ಇಎಸ್‌ಐ ವೈದ್ಯರು ತಿಳಿಸಿದ್ದಾರೆ.

ವರದಿ ಬಂದ ಬಳಿಕವೇ ಅಧಿಕೃತ: ಜಿಲ್ಲೆಗೆ ಇಎಸ್‌ಐ ಆಸ್ಪತ್ರೆ ಮಂಜೂರಾದ ಬಳಿಕ ಜಾಗ ಗುರುತಿಸಲು ಸರಕಾರದ ಸೂಚನೆ ಬಂದ ಹಿನ್ನೆಲೆಯಲ್ಲಿ ಬ್ರಹ್ಮಾವರದಲ್ಲಿ 5 ಎಕ್ರೆ ಸರಕಾರಿ ಜಾಗವನ್ನು ಗುರುತು ಮಾಡಲಾಗಿದ್ದು, ಇಎಸ್‌ಐ ಮತ್ತು ಇಎಸ್‌ಐಸಿ ಅಧಿಕಾರಿಗಳು ಭೇಟಿ ಜಾಗ ಪರಿಶೀಲಿಸಿದ್ದಾರೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಅವರ ವರದಿ ಬಂದ ಬಳಿಕವೇ ಅಧಿಕೃತವಾಗಬೇಕು. – ಕೂರ್ಮಾ ರಾವ್‌ ಎಂ., ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.