ಬೆಂಗಳೂರಿನಲ್ಲಿ ಉಡುಪಿ ಶ್ರೀಗಳ ಎರಡನೇ ವೃಂದಾವನ ಸ್ಥಾಪನೆ


Team Udayavani, Dec 30, 2019, 9:50 AM IST

vrundavana

ಉಡುಪಿ ಸ್ವಾಮೀಜಿಯವರಲ್ಲಿ ಬಹುತೇಕರ ವೃಂದಾವನಗಳು ಸಿಗುವುದು ಸುಮಾರು 500 ವರ್ಷಗಳ ಈಚಿನದು. ಅದಕ್ಕಿಂತ ಹಿಂದಿನವರಲ್ಲಿ ಕೆಲವರು ಜಲಸಮಾಧಿಯಾಗಿರಬಹುದು ಎಂಬ ಮಾತಿದೆ. ಅಷ್ಟಮಠಗಳ ಸ್ವಾಮೀಜಿಯವರಲ್ಲಿ ಬಹುತೇಕರ ವೃಂದಾವನಗಳಿರುವುದು ಅವಿ ಭಜಿತ ದ.ಕ. ಜಿಲ್ಲೆಯಲ್ಲಿ. ಬೆಂಗಳೂರಿನಲ್ಲಿ ಇದುವರೆಗೆ ಶ್ರೀ ಕೃಷ್ಣಾಪುರ ಮಠದ 3 ತಲೆಮಾರು ಹಿಂದಿನ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ವೃಂದಾವನ ಮಾತ್ರ ಇತ್ತು. ಈ ವೃಂದಾವನ ಸ್ಥಾಪನೆಯಾದುದು 1881ರಲ್ಲಿ. ಇದಾಗಿ 139 ವರ್ಷಗಳ ಬಳಿಕ ಪೇಜಾವರ ಶ್ರೀಗಳ ವೃಂದಾವನ ಬೆಂಗಳೂರಿನಲ್ಲಿ ಸ್ಥಾಪನೆ ಯಾಗುತ್ತಿದೆ.

ಶ್ರೀ ಕೃಷ್ಣಾಪುರ ಮಠದ ಈಗಿನ ಸ್ವಾಮೀಜಿ ಯವರ ಪರಮಗುರುಗಳ ಗುರು ಶ್ರೀ ವಿದ್ಯಾಧೀಶತೀರ್ಥರು ತಮ್ಮ ನಾಲ್ಕನೆಯ ಪರ್ಯಾಯವನ್ನು 1878-79ರಲ್ಲಿ ಪೂರೈಸಿ 1880ರಲ್ಲಿ ತಿರುಪತಿ ಶ್ರೀನಿವಾಸನ ದರ್ಶನಕ್ಕೆ ಹೋದರು. ಅದೇ ಹೊತ್ತಿಗೆ ಆ ಕಾಲದಲ್ಲಿ ವಿದ್ವತ್‌ಪ್ರತಿಭೆ, ಪವಾಡಗಳನ್ನು ನಡೆಸುತ್ತಿದ್ದ ಇವರ ಶಿಷ್ಯರಾದ ಜಮಖಂಡಿ ವಾದಿರಾಜ ಆಚಾರ್ಯರು ಕಾಶ್ಮೀರಕ್ಕೆ ತೆರಳಿ ಅಲ್ಲಿನ ವಿದ್ವಾಂಸರ ಬಳಿ ವಿದ್ವತ್ಸಭೆಯಲ್ಲಿ ಪಾಲ್ಗೊಂಡು ಜಯಪತಾಕೆ ಗಳಿಸಿ ತಿರುಪತಿಗೆ ಬಂದಿದ್ದರು. ಕಾಶ್ಮೀರದ ರಾಜನಿಂದ ಜಯಪತಾಕೆ ಉಡುಗೊರೆಯಾಗಿ ಸ್ವೀಕರಿಸಿದ್ದು ಸುವರ್ಣಾಲಂಕೃತ ಗಜದಂತದ ಪಲ್ಲಕ್ಕಿಯನ್ನು. ಇದನ್ನು ತಿರುಪತಿಯಲ್ಲಿ ವಿದ್ಯಾಗುರುಗಳಿಗೆ ಸಮರ್ಪಿಸಿದರು.

ದೇವರ ದರ್ಶನ ಪಡೆದ ಅನಂತರ ಸ್ವಾಮೀಜಿಯವರು ಉಡುಪಿಗೆ ಹಿಂದಿರುಗುವವರಿದ್ದರು. ಆದರೆ ಬೆಂಗಳೂರಿನಲ್ಲಿ ಅವರು ನಿರ್ಯಾಣ ಹೊಂದಿದರು. ಅವರ ವೃಂದಾವನವನ್ನು ಸೆಂಟ್ರಲ್‌ ಮಾರ್ಕೆಟ್‌ ಹಿಂಬದಿ ಗುಂಡೋಪಂತ ಛತ್ರದ ಬಳಿ ನಿರ್ಮಿಸಲಾಯಿತು.

ಬೆಂಗಳೂರಿನಲ್ಲಿ ವೃಂದಾವನಸ್ಥರಾದ ಶ್ರೀ ವಿದ್ಯಾಧೀಶತೀರ್ಥರು ಆ ಕಾಲದಲ್ಲಿ ದಾಖಲೆ ಯಾದ 12 ಸುಧಾ ಮಂಗಲೋತ್ಸವವನ್ನು ನಡೆಸಿ ಪ್ರಖ್ಯಾತಿ ಗಳಿಸಿದ್ದರು. ಪೇಜಾವರ ಶ್ರೀ ವಿಶ್ವೇಶತೀರ್ಥರು 39ನೆಯ ಸುಧಾ ಮಂಗಲೋತ್ಸವ ನಡೆಸಲು ಅಣಿಯಾಗಿದ್ದರು. ಆಗ ಶ್ರೀ ವಿದ್ಯಾಧೀಶತೀರ್ಥರು ತಿರುಪತಿ ಶ್ರೀನಿವಾಸನ ದರ್ಶನ ಪಡೆದು ಹಿಂದಿರುಗುವಾಗ ನಿರ್ಯಾಣ ಹೊಂದಿದರೆ, ಈಗ ಪೇಜಾವರ ಶ್ರೀಗಳು ಡಿ. 17ರಂದು ತಿರುಪತಿ ಶ್ರೀನಿವಾಸನ ದರ್ಶನ ಪಡೆದು ಮರಳುವಾಗ ಜ್ವರಬಾಧೆ ಬಂದು ಡಿ. 29ರಂದು ಇಹಲೋಕ ತ್ಯಜಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.