ಕಡತ ಕರಗಿಸುವಲ್ಲಿ ಕಚೇರಿ ಅಧಿಕಾರಿಗಳ ಸಾಹಸ!


Team Udayavani, Feb 17, 2022, 5:00 AM IST

ಕಡತ ಕರಗಿಸುವಲ್ಲಿ ಕಚೇರಿ ಅಧಿಕಾರಿಗಳ ಸಾಹಸ!

ಕಾರ್ಕಳ: ರಜಾ ದಿನಗಳಲ್ಲಿ ನೀರಸದಿಂದ ಕೂಡಿರುತ್ತಿದ್ದ ತಾಲೂಕು ಕಚೇರಿಯಲ್ಲಿ ಆಡಳಿತ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ರಜೆ, ವಿಶ್ರಾಂತಿ, ವಾರಾಂತ್ಯದ ಮೂಡ್‌ನ‌ಲ್ಲಿ ಇರುತಿದ್ದ ಅಧಿಕಾರಿಗಳು, ಸಿಬಂದಿಗಳು ದಿನವೂ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಆಡಳಿತ ಯಂತ್ರಕ್ಕೆ ಕ್ಷಿಪ್ರ ಪ್ರಗತಿ ಸಿಕ್ಕಿದೆ.

ಆಡಳಿತಕ್ಕೆ ಚುರುಕು ಕೊಡುವ ಉದ್ದೇಶ ದಿಂದ ವಿಲೇವಾರಿಯಾಗದೆ ಬಾಕಿ ಉಳಿದಿ ರುವ ಕಡತ ವಿಲೇವಾರಿ ಗೊಳಿಸುವ ಕಡತ ವಿಲೇವಾರಿ ಸಪ್ತಾಹಕ್ಕೆ ತಾ|ನಲ್ಲೇ ಫೆ. 12ರಂದು ಚಾಲನೆ ಸಿಕ್ಕಿದೆ. ಅನಂತರದಲ್ಲಿ ತಾ| ಕಚೇರಿನಲ್ಲಿ ಕಡತ ವಿಲೇವಾರಿ ಸಂಬಂ ಧಿಸಿ ಚಟುವಟಿಕೆಗಳು ಬಿರುಸಾಗಿವೆ. ಅಧಿಕಾರಿಗಳು, ಸಿಬಂದಿ ಚುರುಕಿನ ಕೆಲಸ ನಡೆಸುತ್ತಿದ್ದಾರೆ. ಅಧಿಕಾರಿಗಳು, ಸಿಬಂದಿ ಬೆಳಗ್ಗೆ 9ರೊಳಗೆ ಕಚೇರಿಗೆ ಹಾಜರಾಗುತ್ತಿದ್ದಾರೆ. ಬಿಡುವಿಲ್ಲದೆ ರಾತ್ರಿ 9ರ ತನಕವೂ ಕೆಲಸ ನಡೆಯುತ್ತಿದೆ.

ತಾ| ಕಚೇರಿಯಲ್ಲಿ ಸಾರ್ವಜನಿಕ ವಲಯದ ವಿವಿಧ ಇಲಾಖೆಗೆ ಸಂಬಂಧಿಸಿ ಕಡತಗಳು ಕೆಲವು ವರ್ಷಗಳಿಂದ ಇತ್ಯರ್ಥವಾಗದೆ ಬಾಕಿ ಉಳಿದಿವೆ. ಅವುಗಳನ್ನು ಇತ್ಯರ್ಥಪಡಿಸಿ ವಿಲೇವಾರಿ ಮಾಡುವುದು, ಆಡಳಿತಕ್ಕೆ ಚುರುಕು ನೀಡುವುದು ಕಡತ ವಿಲೇವಾರಿಯ ಉದ್ದೇಶವಾಗಿದೆ. ಕಡತ ವಿಲೇವಾರಿ ಆಗದೇ ಇದ್ದಲ್ಲಿ ಇದು ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

ಸಪ್ತಾಹದ ಮೂಲಕ ಹಳೆಯ ಕಡತ ಇತ್ಯರ್ಥಪಡಿಸುವುದು, ತಾಂತ್ರಿಕ ಕಾರಣಗಳ ಕಡತಕ್ಕೆ ಹಿಂಬರಹ ಹಿಂಬರಹ ನೀಡುವುದು.

ಜಿಲ್ಲಾ ಮಟ್ಟದಲ್ಲಿ ವಿಲೇವಾರಿ ಆಗಬೇಕಿರುವುದನ್ನು ಕಳುಹಿಸಿ ಕೊಡುವುದು. ಜನಪರ ಯೋಜನೆ, ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನು ಷ್ಠಾನಕ್ಕೆ ಕಾಳಜಿ ದಕ್ಷತೆ ಪ್ರದರ್ಶಿಸಬೇಕು ಎನ್ನುವ ಕಟ್ಟುನಿಟ್ಟಿನ ಸೂಚನೆಯನ್ನು ಸಚಿವ ವಿ.ಸುನಿಲ್‌ಕುಮಾರ್‌ ಅವರು ಕೊಟ್ಟಿದ್ದರು. ಅದರಂತೆ ಕಡತ ವಿಲೇವಾರಿ ಸಪ್ತಾಹ ನಡೆಸಿ, ಬಳಿಕ ಫೆ. 19ಕ್ಕೆ ಇತ್ಯರ್ಥವಾದ ಅರ್ಜಿಗಳ ವಿತರಣೆಯನ್ನು ಬೃಹತ್‌ ಕಂದಾಯ ಮೇಳ ನಡೆಸಲಾಗುತ್ತಿದೆ. ಮುಂದಿನ ಎಲ್ಲ ದಿನಗಳಲ್ಲಿ ಮುಂದುವರಿಸಿಕೊಂಡು ಇಡೀ ಆಡಳಿತ ಯಂತ್ರವನ್ನು ಚುರುಕುಗೊಳಿಸಿ ಜನಸ್ನೇಹಿಯಾಗಿಸುವುದು ಸಪ್ತಾಹದ ಉದ್ದೇಶವಾಗಿದೆ.

ತಹಶೀಲ್ದಾರ್‌, ಉಪ ತಹಶೀಲ್ದಾರ್‌ ಮೇಲುಸ್ತುವಾರಿಯಲ್ಲಿ ತಾ| ಕಚೇರಿ ಯಲ್ಲಿ 18 ಮಂದಿ ವಿಷಯ ನಿರ್ವಾಹಕರು ಅರ್ಜಿಗಳ ವಿಲೇವಾರಿ ಕಾರ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅರ್ಜಿ ಸ್ವೀಕೃತಿ ಕೊಠಡಿ ಸಂಖ್ಯೆ 8ರಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಡತಗಳು ಶಾಖಾ ಮುಖ್ಯಸ್ಥರಿಂದ ಉಪ ತಹಶೀಲ್ದಾರ್‌ ಮೇಜಿಗೆ ಬಂದು ಬಳಿಕ ತಹಶೀಲ್ದಾರ್‌ಗೆ ಸಲ್ಲಲ್ಪಡುತ್ತದೆ. ರವಿವಾರವೂ ಕಡತ ವಿಲೇವಾರಿ ನಡೆಸಲಾಗುತ್ತಿದೆ.

ಜಿಲ್ಲಾ ಮಟ್ಟದಲ್ಲಿ ಸರಕಾರದ 70 ಇಲಾಖೆಗಳು ಕಾರ್ಯನಿರ್ವಹಿಸುತ್ತವೆ. ಇವುಗಳ ಪೈಕಿ ಸುಮಾರು 30ರಷ್ಟು ಇಲಾಖೆಗಳು ತಾ| ಕಚೇರಿ ವ್ಯಾಪ್ತಿಗೆ ಬರುತ್ತದೆ. ಹೆಚ್ಚು ಕಡತಗಳು ವಿಲೇವಾರಿಗೆ ಬಾಕಿ ಉಳಿದಿರುವುದು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿದೆ. ಕಾರ್ಕಳ ತಾ| ಕಚೇರಿಯಲ್ಲಿ 4,008 ಹಳೆಯ ಕಡತ ವಿಲೇವಾರಿಗೆ ಬಾಕಿಯಿದೆ.

ಡಿಸಿ, ಎಸಿ ಪರಿಶೀಲನೆ
ತಾಲೂಕು ಕಚೇರಿ ಅಧಿಕಾರಿ, ಸಿಬಂದಿ ಕಡತ ಯಜ್ಞದ ಮೊರೆ ಹೋಗಿದ್ದಾರೆ. ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್‌ ಮೊದಲಾದ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡತ ವಿಲೇವಾರಿ ಸಪ್ತಾಹ ನಡೆಯುತ್ತಿರುವ ಕಚೇರಿಗೆ ಆಗಮಿಸಿ ಮಾಹಿತಿ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಸಹಾಯಕ ಆಯುಕ್ತರು ಕಚೇರಿಗೆ ಆಗಮಿಸಿ ಪರಿಶೀಲನೆ ನಡೆಸಿ ಹೋಗಿದ್ದರೆ, ಡಿಸಿ, ಜಿ.ಪಂ. ಸಿಇ ಒ ಫೆ. 16ರಂದು ಸಂಜೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 7,498 ಕಡತಗಳ ಪೈಕಿ ಈವರೆಗೆ 3,155 ಕಡತಗಳನ್ನು ವಿಲೇವಾರಿ ಯಾಗಿದೆ. ಕಂದಾಯ ಇಲಾಖೆಯ ಕಾರ್ಕಳ ಮತ್ತು ಹೆಬ್ರಿ ತಾ| ಕಚೇರಿಯಲ್ಲಿ 2,032 ಕಡತಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಕಳ ಮತ್ತು ಹೆಬ್ರಿ ತಾ.ಪಂಗಳಲ್ಲಿ 392 ಕಡತಗಳು, ಕಾರ್ಕಳ ಪುರಸಭೆ ಕಚೇರಿಯಲ್ಲಿ 59 ಕಡತಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇàರಿಯಲ್ಲಿ 75 ಕಡತಗಳು, ತೋಟಗಾರಿಕಾ ಇಲಾಖೆ ಕಚೇರಿಯಲ್ಲಿ 93 ಕಡತಗಳು, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 388 ಕಡತಗಳು ಹಾಗೂ ಇತರ ಇಲಾಖೆಗಳ 116 ಕಡತಗಳು ಸೇರಿ ಒಟ್ಟು 3,155 ಕಡತಗಳನ್ನು ವಿಲೇವಾರಿಯಾಗಿದೆ.

ಕಣ್ಣ ಮುಂದೆ ಕಡತ ರಾಶಿ
ಕಚೇರಿಯೊಳಗೆ ಅಧಿಕಾರಿ, ಸಿಬಂದಿಯ ಮೇಜಿನ ಮೇಲೆ ಕಡತಗಳು ರಾಶಿ ಬಂದು ಬಿದ್ದಿವೆ. ಪರಿಶೀಲನೆ, ವಿಲೇವಾರಿ, ಜತೆ ಸಾರ್ವಜನಿಕರಿಂದ ಬಂದ ಅಹವಾಲುಗಳ ಸ್ವೀಕಾರ, ಪರಿಶೀಲನೆ ಇತ್ಯಾದಿ ನಡೆಯುತ್ತಿವೆ. ರಜಾ ದಿನಗಳಲ್ಲಿ ಕಚೇರಿಗೆ ಸಾರ್ವಜನಿಕರು ಯಾರೂ ತಲೆ ಹಾಕುವುದಿಲ್ಲ. ಹೀಗಾಗಿ ಅಧಿಕಾರಿಗಳಿಗೆ ನಿಶ್ಚಿಂತತೆಯಿಂದ ಕಡತಗಳತ್ತ ಕಣ್ಣಾಡಿಸಲು ನೆರವಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಸಾಮೂಹಿಕವಾಗಿ ತಾಲೂಕು ಕಚೇರಿ ಸಿಬಂದಿ
ಕಚೇರಿಗೆ ಹಾಜರಾಗಿದ್ದು ಕಾರ್ಕಳದ ಇತಿಹಾಸದಲ್ಲಿ ಇದೇ ಮೊದಲು ಎಂದೇ ಹೇಳಬಹುದು.

ಬಹು ಪ್ರಯೋಜನ
4 ದಿನದಲ್ಲಿ ಹಳೆಯ ಕಡತಗಳನ್ನು ಸಾಕಷ್ಟು ಪ್ರಮಾಣದಲ್ಲಿ ವಿಲೇವಾರಿ ನಡೆಸಿದ್ದಾರೆ. ತಾ|ಕಚೇರಿ ಅಧಿಕಾರಿಗಳ ಜತೆ ಸಭೆ ಕೂಡ ನಡೆಸಿ ಚರ್ಚಿಸಿದ್ದೇನೆ. ಬಾಕಿ ಉಳಿದ ಅರ್ಜಿಗಳ ವಿಲೇವಾರಿ ಶೀಘ್ರವೇ ಪೂರ್ಣಗೊಳಿಸಿ, ಫೆ.19ರ ಕಂದಾಯ ಮೇಳದಲ್ಲಿ ವಿತರಣೆ ಯಾಗಲು ಫ‌ಲಾನುಭವಿಗಳನ್ನು ಗುರುತಿಸಲು ಸೂಚಿಸಿದ್ದೇನೆ. ನಾಗರಿಕರಿಗೆ ಬಹು ಪ್ರಯೋಜನ ಇದರಿಂದ ಆಗಲಿದೆ.
-ಎಂ .ಕೂರ್ಮ ರಾವ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.