ಆಭರಣಗಳ ಪೆಟ್ಟಿಗೆ ಉತ್ಪಾದನಾ ಘಟಕ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ
Team Udayavani, Jul 10, 2020, 1:51 PM IST
ಬೆಳ್ಮಣ್: ಅಗ್ನಿ ಅವಗಢ ಸಂಭವಿಸಿ ಆಭರಣಗಳ ಪೆಟ್ಟಿಗೆ ಉತ್ಪಾದನಾ ಘಟಕವೊಂದು ಬೆಂಕಿಗಾಹುತಿಯಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಂಡ್ಕೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮುಂಡ್ಕೂರು ಗ್ರಾಮ ಪಂಚಾಯತ್ ರಸ್ತೆಯ ಮಾರ್ಕೆಟ್ ಕಟ್ಟಡ ಬಳಿಯ ಮೆ.ಸ್ವಾತಿ ಪ್ರೊಸೆಸರ್ಸ್ ಎಂಬ ಆಭರಣಗಳ ಪೆಟ್ಟಿಗೆಗಳ ಉತ್ಪಾದನಾ ಘಟಕ ಬೆಂಕಿಗಾಹುತಿಯಾಗಿದೆ.
ಮುಂಡ್ಕೂರು ಗ್ರಾಮ ಪಂಚಾಯತ್ ಸದಸ್ಯೆ ಸ್ವಾತಿ ಸುಧೀರ್ ಶೆಣೈ ಮಾಲಕತ್ವದ ಈ ಘಟಕದಲ್ಲಿ ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮಾರಾಟವಾಗದೇ ಉಳಿದಿದ್ದ ಸಿದ್ದ ವಸ್ತುಗಳು,ಕಚ್ಚಾ ವಸ್ತುಗಳು ಇದ್ದವು. ಬೆಂಕಿಯ ಕೆನ್ನಾಲಿಗೆಗೆ ಇವುಗಳೊಂದಿಗೆ ಸಂಸ್ಥೆಯ ಕಂಪ್ಯೂಟರ್ ಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಸುಮಾರು 15 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿನ ನಂದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಗ್ರಾಮಕರಣಿಕರು, ಗ್ರಾಮಸ್ಥರು ಸೇರಿದ್ದರು. ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು