ರವಿವಾರ ಸಂಪೂರ್ಣ ಲಾಕ್‌ಡೌನ್‌; ಸಂಚಾರ ನಿರ್ಬಂಧ

ಹಾಲು, ಪತ್ರಿಕೆ ಸಹಿತ ದಿನಸಿ ಖರೀದಿಗೆ ಮಾತ್ರ ಅವಕಾಶ

Team Udayavani, May 23, 2020, 6:29 AM IST

ರವಿವಾರ ಸಂಪೂರ್ಣ ಲಾಕ್‌ಡೌನ್‌; ಸಂಚಾರ ನಿರ್ಬಂಧ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು/ಉಡುಪಿ: ಲಾಕ್‌ಡೌನ್‌ 4.0 ಹಿನ್ನೆಲೆಯಲ್ಲಿ ರವಿವಾರ ದಿನಪೂರ್ತಿ ದ.ಕ. ಮತ್ತು ಉಡುಪಿ ಜಿಲ್ಲೆಯಾದ್ಯಂತ ಬಹುತೇಕ ಬಂದ್‌ ವಾತಾವರಣ ಇರಲಿದೆ. ಹಾಲು, ಪತ್ರಿಕೆ ಸೇರಿದಂತೆ ದಿನಸಿ ಖರೀದಿಗೆ ಮಾತ್ರ ರವಿವಾರ ಅವಕಾಶವಿದ್ದು, ಸಂಚಾರ ಹಾಗೂ ಉಳಿದ ಅಂಗಡಿ ಮುಂಗಟ್ಟುಗಳು ಬಂದ್‌ ಆಗಲಿದೆ.

ಲಾಕ್‌ಡೌನ್‌ ಶನಿವಾರ ರಾತ್ರಿ 7ರಿಂದ ಆರಂಭವಾಗಿ ಸೋಮವಾರ ಬೆಳಗ್ಗೆ 7ರವರೆಗೆ ಜಾರಿಯಲ್ಲಿರಲಿದೆ. ಲಾಕ್‌ಡೌನ್‌ 1 ಹಾಗೂ 2ರ ಸಮಯದಲ್ಲಿ ಜಾರಿಯಲ್ಲಿದ್ದ ನಿಯಮಗಳು ರವಿವಾರ ಜಾರಿಯಲ್ಲಿರುತ್ತದೆ. ಹೀಗಾಗಿ ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿರುತ್ತದೆ. ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಪೊಲೀಸ್‌ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗಲಿದೆ. ಮದ್ಯ ಮಾರಾಟಕ್ಕೂ ಅವಕಾಶವಿಲ್ಲ.

ಆಹಾರ ಸಾಮಗ್ರಿಗಳನ್ನು ಖರೀದಿಸಲು ಒಂದು ಮನೆಯಿಂದ ಕುಟುಂಬದ ಒಬ್ಬ ಸದಸ್ಯ ಮಾತ್ರ ಅಂಗಡಿಗೆ ತೆರಳಬೇಕು. ದಿನಸಿ ತರುವ ನೆಪದಲ್ಲಿ ವಾಹನದಲ್ಲಿ ತೆರಳಲು ಅವಕಾಶವಿಲ್ಲ; ಬದಲಾಗಿ ಮನೆ ಸಮೀಪದ ದಿನಸಿ ಅಂಗಡಿಯಿಂದಲೇ ಸಾಮಾನುಗಳನ್ನು ತರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಸಂಪೂರ್ಣ ಲಾಕ್‌ಡೌನ್‌ ಸಂದರ್ಭ ಹಿರಿಯರು ಮತ್ತು ಮಕ್ಕಳು ಯಾವುದೇ ಕಾರಣಕ್ಕೂ ಪೇಟೆಗೆ ಹೋಗಬಾರದು. ಅಗತ್ಯ ವಸ್ತುಗಳ ಖರೀದಿಗೆ ಸಾಧ್ಯವಾದಷ್ಟರ ಮಟ್ಟಿಗೆ ಮನೆಯ ಇತರ ವ್ಯಕ್ತಿಗಳೇ ಹೋಗಬೇಕು ಎಂದು ಸೂಚಿಸಲಾಗಿದೆ.

ವಿವಾಹ ಸಮಾರಂಭ: ಅನುಮತಿ ಕಡ್ಡಾಯ
ರವಿವಾರ ನಡೆಯುವ ವಿವಾಹ ಸಮಾರಂಭಕ್ಕೆ ಸಂಬಂಧಿಕರು ತೆರಳುವುದಕ್ಕೆ ಸ್ಥಳೀಯಾಡಳಿತ ಸಂಸ್ಥೆಯ ಅನುಮತಿಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಮತ್ತು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ. ರವಿವಾರದಂದು ಲಾಕ್‌ಡೌನ್‌ ಘೋಷಿಸಲಾಗಿರುವ ಕಾರಣ ಆ ದಿನ ಮದುವೆ ಸಮಾರಂಭ ನಡೆಸುವುದಕ್ಕೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಅವಕಾಶ ನೀಡಲಾಗಿದೆ. ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣಿಸುವ ಆವಶ್ಯಕತೆ ಇದ್ದಲ್ಲಿ ಅಂಥವರು ತೆರಳುವ ಖಾಸಗಿ ವಾಹನಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. 50 ಮಂದಿಯ ಸಮ್ಮುಖದಲ್ಲಿ ಮದುವೆ ಸಮಾರಂಭ ನಡೆಯಲು ಅವಕಾಶ ಇದೆ. ರವಿವಾರದಂದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 5 ಮದುವೆ ಸಮಾರಂಭ ಈಗಾಗಲೇ ನೋಂದಣಿಯಾಗಿದೆ.

ಏನೆಲ್ಲ ಇರಲಿವೆ?
ಹಾಲಿನ ವಿತರಣಾ ವ್ಯವಸ್ಥೆ, ಔಷಧಾಲಯ ಮತ್ತು ಆನ್‌ಲೈನ್‌ ಔಷಧಿ ಸೇವೆಗಳು, ಗೃಹಬಳಕೆ ಇಂಧನದ ಟ್ಯಾಂಕರ್‌ಗಳು, ಸಿಲಿಂಡರ್‌ಗಳ ವಿತರಣೆ, ದಿನಪತ್ರಿಕೆಗಳ ವಿತರಣೆ ಹಾಗೂ ಪೆಟ್ರೋಲ್‌ ಬಂಕ್‌ಗಳು ಇರಲಿವೆ. ಈ ಬಗ್ಗೆ ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಶನಿವಾರ ಪ್ರಕಟವಾಗಲಿದೆ ಎಂದು ದ.ಕ. ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗಿನವರೆಗೆ ಲಾಕ್‌ಡೌನ್‌ ದ.ಕ., ಉಡುಪಿ ಯಲ್ಲಿ ಜಾರಿಯಲ್ಲಿರುತ್ತದೆ. ಹಾಲು, ಪತ್ರಿಕೆ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರಲಿದೆ. ಸಂಚಾರ ವ್ಯವಸ್ಥೆ ಸಂಪೂರ್ಣ ಬಂದ್‌ ಆಗಲಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಜಿಲ್ಲಾಧಿಕಾರಿಗಳು, ದ.ಕ., ಉಡುಪಿ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.