ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ; ದ.ಕ. ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ
Team Udayavani, Jun 1, 2020, 9:45 AM IST
ಮಲ್ಪೆ: ನಿರ್ಭೀತಿಯಿಂದ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ದ.ಕ. ಜಿಲ್ಲಾ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ 30 ಸಾವಿರ ಟ್ರಿಪಲ್ ಲೇಯರ್ ಫೇಸ್ ಮಾಸ್ಕ್, ಶಿಕ್ಷಕರ ಸುರಕ್ಷೆಗಾಗಿ 100 ಎನ್-95 ಮಾಸ್ಕ್, 50 ಫೇಸ್ಶೀಲ್ಡ್ಗಳನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪರವಾಗಿ ದ.ಕ. ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊಗವೀರ ಯುವ ಸಂಘಟನೆಯ ಜಿಲ್ಲಾ ಅಧ್ಯಕ್ಷ ಶಿವರಾಮ್ ಕೆ.ಎಂ. ಅವರು ಮೇ 30ರಂದು ನಡೆದ ಸಮಾರಂಭದಲ್ಲಿ ದ.ಕ. ಜಿ.ಪಂ. ಸಿಇಒ ಆರ್. ಸೆಲ್ವಮಣಿ ಮತ್ತು ಡಿಡಿಪಿಐ ಮಲ್ಲೇಸ್ವಾಮಿ ಅವರಿಗೆ ಹಸ್ತಾಂತರಿಸಿದರು. ಎಸೆಸೆಲ್ಸಿ ಪರೀಕ್ಷೆ ಜೂ. 25ರಿಂದ ಜು. 4ರ ವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಈ ಕ್ರಮ ಕೈಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ದ.ಕ. ಜಿ.ಪಂ. ಸಿಇಒ ಆರ್. ಸೆಲ್ವಮಣಿ, ಕೊರೊನಾದಂತಹ ಮಹಾಮಾರಿಯ ಸಂದರ್ಭದಲ್ಲಿ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವುದೇ ನಿಜವಾದ ದೇವರ ಸೇವೆ. ಜಿ. ಶಂಕರ್ ಅವರು ಸುಮಾರು ಎಂಟು ಲಕ್ಷ ರೂ. ಮೌಲ್ಯದ ಮಾಸ್ಕ್ ಗಳನ್ನು ನೀಡಿರುವುದಕ್ಕೆ ಜಿಲ್ಲಾಡಳಿತ ಅಭಾರಿಯಾಗಿದೆ ಎಂದರು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಶಂಕರ್ ಸಾಲ್ಯಾನ್, ಚಂದ್ರೇಶ್ ಪಿತ್ರೋಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಜೀವನದಲ್ಲಿ ಎಸೆಸೆಲ್ಸಿ ಫಲಿತಾಂಶ ಬಹಳ ಮುಖ್ಯ. ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತೆ ಉಡುಪಿ ಜಿಲ್ಲೆಯಲ್ಲಿ 16,300 ವಿದ್ಯಾರ್ಥಿಗಳಿಗೆ ಈಗಾಗಲೇ ಮಾಸ್ಕ್ ನೀಡಲಾಗಿದೆ. ದ.ಕ. ಜಿಲ್ಲೆಯ 30 ಸಾವಿರ ಮಂದಿಗೂ ಮಾಸ್ಕ್ ವಿತರಿಸಿದ್ದೇವೆ, ಶಿವಮೊಗ್ಗ ಜಿಲ್ಲೆಯ 24 ಸಾವಿರ ಮತ್ತು ವಿಜಯಪುರ ಜಿಲ್ಲೆಯ 30 ಸಾವಿರ ವಿದ್ಯಾರ್ಥಿಗಳಿಗೆ ಮುಂದೆ ವಿತರಿಸಲಾಗುತ್ತದೆ.
– ಡಾ| ಜಿ. ಶಂಕರ್, ಪ್ರವರ್ತಕರು, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್