ಗಂಗೊಳ್ಳಿ ಮೂಲದ ಮೃತ ವ್ಯಕ್ತಿಯ ವರದಿ ನೆಗೆಟಿವ್
Team Udayavani, May 1, 2020, 4:09 AM IST
ಉಡುಪಿ: ಉಡುಪಿಯಲ್ಲಿ ಮೂರು ದಿನಗಳ ಹಿಂದೆ ಇತರ ಕಾಯಿಲೆಗಳ ನಡುವೆ ಉಸಿರಾಟದ ಸಮಸ್ಯೆಯಿಂದ ಮೃತ ಪಟ್ಟ ಗಂಗೊಳ್ಳಿ ಮೂಲದ 82 ವರ್ಷ ಪ್ರಾಯದ ವ್ಯಕ್ತಿಗೆ ಕೋವಿಡ್-19 ಸೋಂಕು ಇಲ್ಲವೆಂದು ದೃಢಪಟ್ಟಿದೆ.
ಅವರಿಗೆ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಉಸಿರಾಟದ ಸಮಸ್ಯೆ ಇದ್ದ ಕಾರಣ ಬಳಿಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಗಂಟಲ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, ಗುರುವಾರ ಅವರ ವರದಿ ನೆಗೆಟಿವ್ ಬಂದ ಕಾರಣ ಕಳೇಬರವನ್ನು ಮನೆಯವರಿಗೆ ಬಿಟ್ಟುಕೊಡಲಾಯಿತು.ಏತನ್ಮಧ್ಯೆ ಮಂಡ್ಯ ವ್ಯಕ್ತಿಯ ಸಂಪರ್ಕಕ್ಕೆ ಬಂದ 18 ಜನರ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು ಇನ್ನೂ ವರದಿ ಬಂದಿಲ್ಲ.
ಗುರುವಾರ 29 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅವರಲ್ಲಿ ಉಸಿರಾಟದ ಸಮಸ್ಯೆಯುಳ್ಳ 6 ಮಂದಿ, ಕೋವಿಡ್-19 ಶಂಕಿತ ಇಬ್ಬರು,ಕೋವಿಡ್-19 ಸಂಪರ್ಕದ ಇಬ್ಬರು, ಜ್ವರ ಲಕ್ಷಣದ 16, ಹಾಟ್ಸ್ಪಾಟ್ ಸಂಪರ್ಕದ ಮೂವರು ಸೇರಿದ್ದಾರೆ. 16 ಮಂದಿಯ ವರದಿ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿದೆ. 76 ಜನರ ವರದಿ ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ