ಜಿಲ್ಲಾ ಮುಖ್ಯ ರಸ್ತೆಯಿಂದ ಮೇಲ್ದರ್ಜೆಗೇರಿಸಿ ಸರಕಾರ ಆದೇಶ

ಬ್ರಹ್ಮಾವರ -ಜನ್ನಾಡಿ ರಸ್ತೆ ಇನ್ನು ಮುಂದೆ ರಾಜ್ಯ ಹೆದ್ದಾರಿ

Team Udayavani, Oct 16, 2020, 2:02 AM IST

ಜಿಲ್ಲಾ ಮುಖ್ಯ ರಸ್ತೆಯಿಂದ ಮೇಲ್ದರ್ಜೆಗೇರಿಸಿ ಸರಕಾರ ಆದೇಶ

ಬ್ರಹ್ಮಾವರ-ಜನ್ನಾಡಿ ರಾಜ್ಯ ಹೆದ್ದಾರಿ.

ಕೋಟ: ಲೋಕೋಪಯೋಗಿ ಇಲಾಖೆಗೆ ಸೇರಿದ ಉಡುಪಿ ಜಿಲ್ಲೆಯ ಬ್ರಹ್ಮಾವರ -ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಪರಿವರ್ತಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು ಈ ಭಾಗದ ಜನತೆಯ ಮೂರ್‍ನಾಲ್ಕು ದಶಕಗಳ ಹೋರಾಟ ಇದೀಗ ಫಲ ನೀಡಿದೆ.

ಬ್ರಹ್ಮಾವರದಿಂದ ಬಾರ್ಕೂರು, ಬಿದ್ಕಲ್‌ಕಟ್ಟೆ, ಜನ್ನಾಡಿ, ಹಾಲಾಡಿ, ಸಿದ್ದಾಪುರ ಮಾರ್ಗವಾಗಿ ಹುಲಿಕಲ್‌ ಘಾಟಿ, ಸಾಗರ-ಶಿವಮೊಗ್ಗ-ಬೆಂಗಳೂರು ತಲುಪಲು, ಕೊಲ್ಲೂರು ಮುಂತಾದ ಪ್ರಮುಖ ಸ್ಥಳಗಳನ್ನು ಸಂಪರ್ಕಿಸಲು ಈ ರಸ್ತೆ ಅನುಕೂಲವಾಗಿದ್ದು ಸಾಕಷ್ಟು ವಾಹನದಟ್ಟಣೆ ಹೊಂದಿರುವ ಕಾರಣಕ್ಕೆ ಜಿಲ್ಲಾ ಮುಖ್ಯ ರಸ್ತೆಯಿಂದ ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕು ಎನ್ನುವ ಬೇಡಿಕೆ ಇತ್ತು. ಒಂದು ವರ್ಷದ ಹಿಂದೆ ಪಿ.ಡಬ್ಲ್ಯು.ಡಿ. ಇಲಾಖೆ ಈ ಕುರಿತು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಅದು ರಾಜ್ಯ ಸಚಿವ ಸಂಪುಟ ದಲ್ಲಿ ಮಂಡನೆಯಾಗಿ ಅನುಮೋದನೆಗೊಂಡಿದೆ.

ಲಾಭವೇನು?
ಜಿಲ್ಲಾ ಮುಖ್ಯ ರಸ್ತೆಗಿಂತ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಎಸ್‌ಎಚ್‌ಡಿಪಿ ಮೂಲಕ ದುಪ್ಪಟ್ಟು ಅನುದಾನ ಲಭ್ಯವಾಗಲಿದ್ದು ಇದರ ಅಭಿವೃದ್ಧಿಗೆ ಪೂರಕವಾಗಲಿದೆ ಹಾಗೂ ರಾಜ್ಯ ಹೆದ್ದಾರಿಯ ಅಕ್ಕಪಕ್ಕದಲ್ಲಿ ಕಟ್ಟಡ ನಿರ್ಮಿಸುವಾಗ ಪಟ್ಟಾ ಸ್ಥಳದಿಂದ 6 ಮೀ. ಸ್ಥಳವನ್ನು ಬಿಡಬೇಕು ಎನ್ನುವ ಕಾನೂನು ಇರುವುದರಿಂದ ರಸ್ತೆ ಪಕ್ಕದಲ್ಲೇ ಕಟ್ಟಡ ನಿರ್ಮಾಣದ ಒತ್ತುವರಿಗೆ ತಡೆ ಬೀಳಲಿದೆ. ಎಸ್‌.ಎಚ್‌.ಡಿ.ಪಿ. ಅನುದಾನದಲ್ಲಿ ರಸ್ತೆ ವಿಸ್ತರಣೆಗೆ ಅವಕಾಶವಿದೆ. ಶಿಥಿಲ ಗೊಂಡ ಸೇತುವೆಗಳನ್ನು ತೆರವು ಗೊಳಿಸಿ ಹೊಸ ಸೇತುವೆ ನಿರ್ಮಾಣ, ಅಪಾಯಕಾರಿ ತಿರುವು ಸರಿಪಡಿಸುವಿಕೆ, ಸರ್ಕಲ್‌ಗ‌ಳ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗಲಿದೆ.

ಮೂರ್‍ನಾಲ್ಕು ದಶಕಗಳ ಹೋರಾಟ
ಈ ರಸ್ತೆಯನ್ನು ರಾಜ್ಯ ಹೆದ್ದಾರಿ ಯಾಗಿಸುವಲ್ಲಿ ಮೂರ್‍ನಾಲ್ಕು ದಶಕ ಗಳಿಂದ ಸ್ಥಳೀಯರು ಹೋರಾಟ ನಡೆಸುತ್ತಿದ್ದು, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌, ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ, ಪ್ರಮೋದ್‌ ಮಧ್ವರಾಜ್‌ ಮುಂತಾದವರ ಮೂಲಕ ಸರಕಾರದ ಗಮನಸೆಳೆಯಲಾಗಿತ್ತು ಹಾಗೂ ಪ್ರಸ್ತುತ ಮೀನುಗಾರಿಕೆ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ, ಉಡುಪಿ ಶಾಸಕ ಕೆ. ರಘುಪತಿ ಭಟ್‌, ಬೈಂದೂರು ಶಾಸಕ ಸುಕುಮಾರ್‌ ಶೆಟ್ಟಿ, ಸಂಸದ ಬಿ.ವೈ.ರಾಘವೇಂದ್ರ ಅವರಲ್ಲಿ ಮನವಿ ಮಾಡಲಾಗಿತ್ತು. ಇವರ ಪ್ರಯತ್ನ ಮತ್ತು ಪಿ.ಡ.ಬ್ಲ್ಯು.ಡಿ. ಅಧಿಕಾರಿಗಳ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ಈ ಬಗ್ಗೆ ಹೋರಾಟ ನಡೆಸಿದವರಲ್ಲಿ
ಪ್ರಮುಖರಾದ ಯಡ್ತಾಡಿ ಸತೀಶ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

ನಿರಂತರ ವರದಿ
ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರುವ ಬೇಡಿಕೆ ಹಲವು ವರ್ಷಗಳಿಂದ ಚಾಲ್ತಿಯಲ್ಲಿದ್ದರೂ ಒಂದು ಹಂತದಲ್ಲಿ ನನೆಗುದಿಗೆ ಬಿದ್ದಿತ್ತು. ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಉದಯವಾಣಿ ಹಲವು ಬಾರಿ ವರದಿ ಪ್ರಕಟಿಸಿ ರಾಜ್ಯ ಹೆದ್ದಾರಿಯ ಅವಶ್ಯಕತೆ ಮತ್ತು ರಸ್ತೆಯ ಪ್ರಸ್ತುತ ಸಮಸ್ಯೆ ಕುರಿತು ಗಮನ ಸೆಳೆದಿತ್ತು. ಅನಂತರ ಇಲಾಖೆ ವತಿಯಿಂದ ರಾಜ್ಯಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿ ಜನಪ್ರತಿನಿಧಿಗಳು, ಸ್ಥಳೀಯರು, ಅಧಿಕಾರಿಗಳ ಪ್ರಯತ್ನದ ಫಲವಾಗಿ ಅನುಮೋದನೆ ದೊರೆತಿದೆ.

ಹಂತ ಹಂತವಾಗಿ ಅಭಿವೃದ್ಧಿ
ಬ್ರಹ್ಮಾವರ -ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಪರಿವರ್ತಿಸುವಂತೆ ಇಲಾಖೆ ವತಿಯಿಂದ ಮನವಿ ಮಾಡಿದ್ದು ಇದೀಗ ರಾಜ್ಯ ಸರಕಾರ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಿದೆ. ಮುಂದೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅನುದಾನದಲ್ಲಿ ಹಂತ ಹಂತವಾಗಿ ರಸ್ತೆ ಅಭಿವೃದ್ಧಿಪಡಿಸಲಾಗುವುದು.
-ಜಗದೀಶ್‌ ಭಟ್‌, ಎಂಜಿನಿಯರ್‌ , ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.