ಹೊರ ರಾಜ್ಯ, ಜಿಲ್ಲೆಗಳಿಂದ ಸಂಚಾರಕ್ಕೆ ಮಾರ್ಗಸೂಚಿ


Team Udayavani, May 3, 2020, 9:34 AM IST

ಹೊರ ರಾಜ್ಯ, ಜಿಲ್ಲೆಗಳಿಂದ ಸಂಚಾರಕ್ಕೆ ಮಾರ್ಗಸೂಚಿ

ಬೈಂದೂರು: ಮುಂಬಯಿ ಹಾಗೂ ಇತರ ಕಡೆಗಳಿಂದ ಜಿಲ್ಲೆಗೆ ಆಗಮಿಸುವವರ ತಪಾಸಣೆ ಮಾಡಲು ಆರಕ್ಷಕ ಇಲಾಖೆಯು ಶಿರೂರು ಚೆಕ್‌ಪೋಸ್ಟ್‌ನಲ್ಲಿ ಸಿದ್ಧತೆಗಳನ್ನು ನಡೆಸಿದೆ.

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಂದ ಇತರ ರಾಜ್ಯಗಳಿಗೆ ಪ್ರಯಾಣಿಸುವ ಹಾಗೂ ಇತರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ, ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಪ್ರಯಾಣಿಸುವರಿಗೆ ಜಿಲ್ಲಾಡಳಿತ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಜಿಲ್ಲೆಯಿಂದ ಇತರ ರಾಜ್ಯಗಳಿಗೆ ಪ್ರಯಾಣಿಸುವವರು sevasindhu.karnataka.gov.in ನಲ್ಲಿ ಲಾಗಿನ್‌ ಆಗಿ ಹೆಸರು, ವಿವರಗಳೊಂದಿಗೆ ನೋಂದಣಿ ಮಾಡಿಕೊಳ್ಳಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲದವರು ಗ್ರಾ.ಪಂ. ಕಚೇರಿಗಳು, ಪಟ್ಟಣ ಪಂಚಾಯತ್‌, ನಗರಸಭೆ, ಪುರಸಭೆ ಕಚೇರಿಗಳು, ತಾಲೂಕು ಕಚೇರಿ, ನಗರಪಾಲಿಕೆಯ ವಲಯ ಕಚೇರಿಗಳು, ಮಂಗಳೂರು ಒನ್‌ಗಳಲ್ಲೂ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಸ್ವೀಕೃತವಾದ ಅರ್ಜಿಗಳನ್ನು ರಾಜ್ಯಮಟ್ಟದಲ್ಲಿ ಪರಿಶೀಲನೆ ಮಾಡಿ ಸ್ವೀಕರಿಸುವ ರಾಜ್ಯದ ಸಹಮತ ಇದ್ದಲ್ಲಿ ಮಾತ್ರ ಅನುಮೋದಿಸಲ್ಪಡುತ್ತವೆ. ಅನುಮೋದಿತ ಅರ್ಜಿದಾರರಿಗೆ ರಾಜ್ಯ ಸರಕಾರದ ನೋಡಲ್‌ ಅಧಿಕಾರಿಯವರ ನಿರ್ದೇಶನದ ಮೇರೆಗೆ ಪ್ರಯಾಣದ ವ್ಯವಸ್ಥೆ ನಡೆಸಲಾಗುವುದು. ಪ್ರಯಾಣಿಕರು ಟಿಕೆಟ್‌ ಖರೀದಿಸಿ ಪ್ರಯಾಣಿಸಬೇಕು. ಪ್ರಯಾಣ ಪೂರ್ವದಲ್ಲಿ ವೈದ್ಯಕೀಯ ಸ್ಕ್ರೀನಿಂಗ್‌ ಮಾಡಲಾಗುವುದು. ಅನುಮೋದಿತ ಪ್ರಯಾಣಿಕರು ಪ್ರಯಾಣಿಸುವಾಗ ತಮ್ಮೊಂದಿಗೆ ಡ್ರೈವಿಂಗ್‌ ಲೈಸನ್ಸ್‌ /ಪಾಸ್‌ಪೋರ್ಟ್‌/ ಮತದಾರರ ಗುರುತು ಚೀಟಿ /ಆಧಾರ್‌ ಕಾರ್ಡ್‌/ಪಾನ್‌ ಕಾರ್ಡ್‌ ಹೊಂದಬೇಕು. ಯಾವುದೇ ಸಂದೇಹ ವಿದ್ದಲ್ಲಿ ಕಂಟ್ರೋಲ್‌ ರೂಂ ಟೋಲ್‌ಫ್ರೀ 1077ಗೆ ಅಥವಾ ವಾಟ್ಸ್‌ಆ್ಯಪ್‌ ನಂ. 9483908000 ಸಂಪರ್ಕಿಸಬಹುದು.

ಬೇರೆ ಜಿಲ್ಲೆಗಳಿಗೆ ಪ್ರಯಾಣಿಸುವವರು
ಮುಖ್ಯಮಂತ್ರಿಯರ ಅಧ್ಯಕ್ಷತೆಯಲ್ಲಿ ಮೇ 2ರಂದು ನಡೆದ ವೀಡಿಯೋ ಸಂವಾದದಲ್ಲಿ ನೀಡಲಾಗಿರುವ ಸೂಚನೆಯಂತೆ ದ.ಕ.ದಿಂದ ಹೊರ ಜಿಲ್ಲೆಗಳಿಗೆ ಪ್ರಯಾಣಿಸುವವರಿಗೆ ಒಂದು ಬಾರಿ ಪ್ರಯಾಣಿಸಲು ಅವಕಾಶವಿರುತ್ತದೆ. ಇದಕ್ಕಾಗಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಹಾಯಕ ಪೊಲೀಸ್‌ ಆಯುಕ್ತರ ಕಚೇರಿಗಳು, ಗ್ರಾಮಾಂತರ ಪ್ರದೇಶಗಳಲ್ಲಿ ಸಮೀಪದ ಪೊಲೀಸ್‌ ಠಾಣೆಗಳಲ್ಲಿ ಅರ್ಜಿ ಸಲ್ಲಿಸಬೇಕು. ಪ್ರಯಾಣದ ಅನುಮತಿಯನ್ನು ಪೊಲೀಸ್‌ ಆಯುಕ್ತರು, ಪೊಲೀಸ್‌ ಅಧೀಕ್ಷಕರು ಅಥವಾ ಪೊಲೀಸ್‌ ಉಪ ಆಯುಕ್ತರ ಕಚೇರಿ ಗಳಿಂದ ನೀಡಲಾಗುವುದು. ಕೋವಿಡ್ ಲಕ್ಷಣರಹಿತರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಅನುಮೋದಿತ ಪ್ರಯಾಣಿಕರು ಮಾಸ್ಕ್, ಗ್ಲೌಸ್‌ ಧರಿಸಬೇಕು. ಕೇಂದ್ರ, ರಾಜ್ಯ ಸರಕಾರದ ಮಾರ್ಗಸೂಚಿಯಂತೆ ಮುಂಜಾಗರೂಕತ ಕ್ರಮಗಳನ್ನು ವಹಿಸಬೇಕು. ಪ್ರಯಾಣವನ್ನು ಸ್ವೀಕರಿಸುವ ಜಿಲ್ಲೆಗಳಲ್ಲಿನ ಎಲ್ಲ ಕ್ವಾರಂಟೈನ್‌ ಸಂಬಂಧಿತ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಸಂಚರಿಸುವ ಮಾರ್ಗದ ಮಧ್ಯೆ ಎಲ್ಲಿಯೂ ನಿಲುಗಡೆ ಮಾಡುವಂತಿಲ್ಲ. ನೀಡಲಾಗುವ ಪಾಸ್‌ಗಳನ್ನು ದುರುಪಯೋಗಪಡಿಸಿದರೆ ಕಾನೂನುರೀತಿ ಕ್ರಮ ಕೈಗೊಳ್ಳಲಾಗು ವುದು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ದ.ಕ. ಜಿಲ್ಲೆಗೆ ಬೇರೆ ರಾಜ್ಯಗಳಿಂದ ಆಗಮಿಸ ಬಯಸುವವರೂ ಇದೇ ಮಾದರಿಯನ್ನು ಅನುಸರಿಸಬೇಕು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.