ರಾಜಕಾರಣಿಗಳಿಗೂ ಗುರು


Team Udayavani, Dec 30, 2019, 8:00 AM IST

bg-65

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ವಾಜಪೇಯಿಯವರು ಆಗಮಿಸಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಜೆ.ಎಚ್‌. ಪಟೇಲ್‌ ಅವರಿಗೆ ಗೌರವಾರ್ಪಣೆ.

ಮಣಿಪಾಲ: ಕಾವಿ ವಸ್ತ್ರ, ಅನುಷ್ಠಾನ, ಉಪಾಸನೆಗಳ ಕಟ್ಟುನಿಟ್ಟು ಇದ್ದರೂ ಪೇಜಾವರ ಶ್ರೀಗಳಿಗೂ ರಾಜಕೀಯಕ್ಕೂ ಬಲವಾದ ನಂಟು. ಕೊನೆಯವರೆಗೂ ರಾಜಕಾರಣಿಗಳು, ರಾಜಕೀಯ ಅವರನ್ನು ಬಿಟ್ಟಿರಲಿಲ್ಲ. ರಾಜಕೀಯ ವಿದ್ಯಮಾನಗಳ ಬಗ್ಗೆ ನಿರಂತರವಾಗಿ ಪ್ರತಿಕ್ರಿಯಿಸುತ್ತಿದ್ದರು. ಇತ್ತೀಚೆಗೆ ಕರ್ನಾಟಕದ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಿ, ಈಗಿನ ರಾಜಕೀಯದಲ್ಲಿ ನೈತಿಕತೆ ಕುಸಿದಿದೆ ಎಂದಿದ್ದರು.

ಶ್ರೀಗಳ ಮತ್ತು ರಾಜಕೀಯದ ನಂಟು ಇಂದು ನಿನ್ನೆಯದಲ್ಲ. ಅಷ್ಟಮಠಗಳಲ್ಲೇ ಅತಿ ಹೆಚ್ಚು ರಾಜಕೀಯ ಸಂಪರ್ಕ ಹೊಂದಿದ್ದ ಯತಿವರೇಣ್ಯರು ಅವರು. ಈ ಸಂಪರ್ಕಗಳನ್ನು ಅವರು ಸ್ವಂತಕ್ಕಾಗಿ ಬಳಸಿಕೊಂಡಿದ್ದಿಲ್ಲ. ಬದಲಿಗೆ ತಾನು ಮಾಡುತ್ತಿರುವ ಕೆಲಸಗಳಿಗಾಗಿ ಬಳಸಿಕೊಂಡಿದ್ದರು. ಸಂತ ಸಮ್ಮೇಳನ, ವಿಹಿಂಪ ಜತೆಗಿನ ಒಡನಾಟದೊಂದಿಗೆ ಅವರಿಗೆ ರಾಜಕಾರಣಿಗಳ ಸಖ್ಯ ಲಭ್ಯವಾಗಿತ್ತು.

ಹಿಂದಿನ ಮುಖ್ಯಮಂತ್ರಿ ನಿಜಲಿಂಗಪ್ಪನವರಿಂದ ಹಿಡಿದು ಪ್ರಧಾನಿ ನರೇಂದ್ರ ಮೋದಿಯವರೆಗೆ ಅವರಿಗೆ ರಾಜಕಾರಣಿಗಳ ಸಂಪರ್ಕ ಇತ್ತು. ಇದಕ್ಕೆ ಕಾಂಗ್ರೆಸ್‌, ಬಿಜೆಪಿ ಎಂಬ ಭೇದ ಇರಲಿಲ್ಲ. ಅವರ ಅಂತಿಮ ದಿನಗಳ ಸಂದರ್ಭ ಪಕ್ಷ- ಜಾತಿ, ಮತಗಳ ಭೇದವಿಲ್ಲದೆ ಹಲವಾರು ರಾಜಕೀಯ ನಾಯಕರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು. ಪೇಜಾವರ ಶ್ರೀಗಳು ಎಲ್ಲ ರಾಜಕೀಯ ವ್ಯಕ್ತಿಗಳೊಂದಿಗೆ ಪರಿಚಯರಾಗಿದ್ದರಿಂದಲೋ ಏನೋ, ಅವರ ಮಾತಿಗೆ ರಾಜಕೀಯ ವಲಯದಲ್ಲಿ ವಿಶೇಷ ತೂಕ ಇರುತ್ತಿತ್ತು. ಕೆಲವು ನಾಯಕರಂತೂ ಪೇಜಾವರರ ಮಾತುಗಳನ್ನು ಮೀರಿ ನಡೆಯೆವು ಎಂಬಷ್ಟರ ಮಟ್ಟಿಗೆ ಗೌರವ ಭಾವ ಹೊಂದಿದ್ದರು. ಇದೇ ಕಾರಣಕ್ಕೆ ಪ್ರಮುಖ ರಾಜಕೀಯ ವಿದ್ಯಮಾನಗಳಾದಾಗ ಪತ್ರಕರ್ತರು ಪೇಜಾವರ ಶ್ರೀಗಳ ಪ್ರತಿಕ್ರಿಯೆ ಕೇಳುತ್ತಿದ್ದರು. ಅವರ ಅಭಿಪ್ರಾಯವೂ ಒಂದು ಚರ್ಚೆಗೆ ನಾಂದಿಯಾಗುತ್ತಿತ್ತು.

ರಾಮಜನ್ಮಭೂಮಿ ಆಂದೋಲನದ ಬಳಿಕವಂತೂ ಪೇಜಾವರ ಶ್ರೀಗಳ ಹೆಸರು ರಾಜಕೀಯ ವಲಯದಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿತ್ತು. ಅವರು ಆಂದೋಲನದ ಮುಂಚೂಣಿಯಲ್ಲಿದ್ದದ್ದು ಮತ್ತು ಅವರ ನಿರ್ಧಾರಗಳಿಗೆ ಸಿಕ್ಕ ಮನ್ನಣೆಯಿಂದಾಗಿ ರಾಜಕೀಯ ವಲಯ ಅವರ ಮಾತುಗಳನ್ನು ಕೇಳುತ್ತಿತ್ತು. ಧರ್ಮವು ಪ್ರಬಲವಾಗಿದ್ದು ರಾಜಕೀಯಕ್ಕೆ ನಿರ್ದೇಶನ ನೀಡುವಂತಿರಬೇಕುಎಂಬ ರೀತಿಯ ಆಶಯವನ್ನು ಹೊಂದಿದ್ದರು. ಇದಕ್ಕೆ ರಾಜಕಾರಣಿಗಳು ಸಲಹೆ ಕೇಳಿದರೆ ತುಂಬು ಮನಸ್ಸಿನಿಂದ ಮಾರ್ಗದರ್ಶನ ಮಾಡುತ್ತಿದ್ದುದು ನಿದರ್ಶನವಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.